AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ED Raid: ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣ, ಶೋಭಾ ಸೇರಿ ಮೂವರ ಮೇಲೆ ಇಡಿ ದಾಳಿ

ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ 8ಕ್ಕೂ ಹೆಚ್ಚಿನ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ ಇಂದು ದಾಳಿ ನಡೆದಿದೆ. ಬ್ಯಾಂಕ್​ನ ವಾಹನ ಚಾಲಕನಾಗಿದ್ದ ಶಿವಕುಮಾರ್ ಮನೆ ಮೇಲೂ ಕೂಡ ದಾಳಿ ನಡೆಸಲಾಗಿದೆ. 2 ಕಡೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. 2014ರ ಜೂನ್​ನಲ್ಲಿ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಈ ಹಗರಣ ನಡೆದಿತ್ತು.

ED Raid: ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣ,  ಶೋಭಾ ಸೇರಿ ಮೂವರ ಮೇಲೆ ಇಡಿ ದಾಳಿ
ಇಡಿ ದಾಳಿ Image Credit source: Business Today
Follow us
Basavaraj Yaraganavi
| Updated By: ನಯನಾ ರಾಜೀವ್

Updated on:Apr 08, 2025 | 10:45 AM

ಶಿವಮೊಗ್ಗ, ಏಪ್ರಿಲ್ 08: ಶೋಭಾ ಎಂಬುವವರು ಡಿಸಿಸಿ ಬ್ಯಾಂಕ್ ಮ್ಯಾನೇಜರ್​ ಆಗಿದ್ದ ಸಂದರ್ಭದಲ್ಲಿ ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ(Debt)ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದಾಳಿ(ED Raid) ನಡೆಸಿದ್ದಾರೆ. ಶಿವಮೊಗ್ಗದಲ್ಲಿ 8ಕ್ಕೂ ಹೆಚ್ಚಿನ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ ಇಂದು ದಾಳಿ ನಡೆದಿದೆ.

ಬ್ಯಾಂಕ್​ನ ವಾಹನ ಚಾಲಕನಾಗಿದ್ದ ಶಿವಕುಮಾರ್ ಮನೆ ಮೇಲೂ ಕೂಡ ದಾಳಿ ನಡೆಸಲಾಗಿದೆ. 2 ಕಡೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. 2014ರ ಜೂನ್​ನಲ್ಲಿ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಈ ಹಗರಣ ನಡೆದಿತ್ತು. ಇದೇ ವೇಳೆ ಬ್ಯಾಂಕ್ ನ ವಾಹನ ಚಾಲಕನಾಗಿದ್ದ ನಿವಾಸದ ಮೇಲು ದಾಳಿ ನಡೆಸಲಾಗಿದೆ. ಕಾಮಾಕ್ಷಿ ಬೀದಿಯ ಶಿವಕುಮಾರ್ ಎಂಬುವರ ಮನೆ ಮೇಲು ಇಡಿ ತಂಡದ ಪ್ರತ್ಯೇಕ ದಾಳಿ ನಡೆಸಿದೆ. ಏಕಕಾಲಕ್ಕೆ ಎರಡು ಪ್ರತ್ಯೇಕ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್​ ಗೌಡಗೂ ಇಡಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳಿಂದ ಮಂಜುನಾಥ್ ಗೌಡ ವಿಚಾರಣೆ ನಡೆಸಲಾಗುತ್ತಿದೆ. ಅಪೆಕ್ಸ್ ಬ್ಯಾಂಕ್​ನ ಗೆಸ್ಟ್ ಹೌಸ್​ನಲ್ಲಿ ಮಂಜುನಾಥ್ ಗೌಡ ವಿಚಾರಣೆ ಮಾಡುತ್ತಿದ್ದಾರೆ. 10ಕ್ಕೂ ಹೆಚ್ಚು ಇಡಿ ಅಧಿಕಾರಿಗಳಿಂದ ಮಂಜುನಾಥ್​ಗೌಡ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ
Image
‘ಎಂಪುರಾನ್’ಗೆ ಬಿಜೆಪಿ ವಿರೋಧ; ನಿರ್ಮಾಪಕನ ಕಚೇರಿ ಮೇಲೆ ಇಡಿ ದಾಳಿ
Image
ಸಲ್ಮಾನ್ ಖಾನ್ ಮನೆಯ ಮೇಲೆ ಗುಂಡಿನ ದಾಳಿ ಎಂದು ವಿಡಿಯೋ ವೈರಲ್
Image
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
Image
ಬೆಂಗಳೂರಿನ ಉದ್ಯಮಿಗಳು, ಬಿಲ್ಡರ್​ಗಳಿಗೆ ಐಟಿ ಶಾಕ್​: ದಾಳಿ

ಶಿವಮೊಗ್ಗದ ಗಾಂಧಿ ಬಜಾರ್ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಕಳೆದ 11 ವರ್ಷಗಳ ಹಿಂದೆ ಹಗರಣ ನಡೆದಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ತನಿಖೆ ನಡೆಸಿ ಪೊಲೀಸರು 2014ರ ಅ.18ರಂದು ಚಾರ್ಜ್​ಶೀಟ್​ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯಕ್ಕೆ ಮೊದಲ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ಮತ್ತಷ್ಟು ಓದಿ: 24 ಕಡೆ ಕತ್ತರಿ, ನಿರ್ಮಾಪಕನ ಮೇಲೆ ಇಡಿ ದಾಳಿ; ಆದರೂ ‘ಎಂಪುರಾನ್’ ಗೆಲ್ಲಿಸಿದ ಪ್ರೇಕ್ಷಕ

ಈ ಹಿನ್ನೆಲೆಯಲ್ಲಿ ಮಂಜುನಾಥ್ ಗೌಡಗೆ ಇಡಿ ಸಮನ್ಸ್ ಜಾರಿಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಮಂಜುನಾಥ್ ಗೌಡಗೆ ಇಡಿ ಸಮನ್ಸ್ ಜಾರಿಗೊಳಿಸಿತ್ತು. ಕಳೆದ ವಾರವಷ್ಟೇ ಇಡಿ ಸಮನ್ಸ್ ಪ್ರಶ್ನಿಸಿದ್ದ ಮಂಜುನಾಥ್ ಗೌಡ ಮೇಲ್ಮನವಿಯನ್ನು ಹೈಕೋರ್ಟ್​ ವಜಾಗೊಳಿಸಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:43 am, Tue, 8 April 25

ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್