AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ಫೇಕ್ ವಾಟ್ಸಾಪ್​​​​: ಸೈಬರ್​ ಕ್ರೈಂಗೆ ತುಷಾರ್ ಗಿರಿನಾಥ್ ದೂರು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಹೆಸರು, ಪದನಾಮ ಹಾಗೂ ಭಾವಚಿತ್ರವನ್ನು ಅಪರಿಚಿತ ದೂರವಾಣಿ ಸಂಖ್ಯೆ: 9428053334 ಯಿಂದ ವ್ಯಾಟ್ಸಪ್ ಮೂಲಕ ಅಧಿಕಾರಿಗಳಿಗೆ ಸಂದೇಶಗಳನ್ನು ರವಾನಿಸಲಾಗುತ್ತಿದೆ. ಹೀಗಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೈಬರ್​ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.​​ ನಕಲಿ ಕರೆ ಬಂದರೆ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿ ಎಂದು ತಿಳಿಸಿದೆ. 

ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ಫೇಕ್ ವಾಟ್ಸಾಪ್​​​​: ಸೈಬರ್​ ಕ್ರೈಂಗೆ ತುಷಾರ್ ಗಿರಿನಾಥ್ ದೂರು
ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ಫೇಕ್ ವಾಟ್ಸಾಪ್​​​​: ಸೈಬರ್​ ಕ್ರೈಂಗೆ ತುಷಾರ್ ಗಿರಿನಾಥ್ ದೂರು
ಶಾಂತಮೂರ್ತಿ
| Updated By: ಗಂಗಾಧರ​ ಬ. ಸಾಬೋಜಿ|

Updated on: May 24, 2024 | 3:44 PM

Share

ಬೆಂಗಳೂರು, ಮೇ 24: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರ ಹೆಸರಲ್ಲಿ ಫೇಕ್ ವಾಟ್ಸಾಪ್​ ತೆರೆಯಲಾಗಿದೆ. 9428053334 ಸಂಖ್ಯೆಯಿಂದ ಅಧಿಕಾರಿಗಳಿಗೆ ತಪ್ಪು ಮಾಹಿತಿ ರವಾನೆ ಮಾಡಲಾಗುತ್ತಿದೆ. ಹೀಗಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Giri Nath) ಸೈಬರ್​ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.​​ ನಕಲಿ ನಂಬರ್​​ನಿಂದ ಸಂದೇಶ ರವಾನೆ ಆಗುತ್ತಿದ್ದಂತೆ ಪಾಲಿಕೆ ಅಲರ್ಟ್​ ಆಗಿದ್ದು, ನಕಲಿ ನಂಬರ್​​ನಿಂದ ಬರುವ ಸಂದೇಶಗಳಿಗೆ ಸ್ಪಂದನೆ ಮಾಡಬೇಡಿ. ಈ ನಂಬರ್​ನಿಂದ ಕರೆ ಬಂದರೆ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿ ಎಂದು ತಿಳಿಸಿದೆ.

ದೂರಿನಲ್ಲೇನಿದೆ?

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಹೆಸರು, ಪದನಾಮ ಹಾಗೂ ಭಾವಚಿತ್ರವನ್ನು ಅಪರಿಚಿತ ದೂರವಾಣಿ ಸಂಖ್ಯೆ: 9428053334 ಯಿಂದ ವ್ಯಾಟ್ಸಪ್ ಮೂಲಕ ಅಧಿಕಾರಿಗಳಿಗೆ ಸಂದೇಶಗಳನ್ನು ರವಾನಿಸಲಾಗುತ್ತಿದೆ. ಅನಧಿಕೃತವಾಗಿ ಮುಖ್ಯ ಆಯುಕ್ತರ ಹೆಸರು, ಪದನಾಮ ಹಾಗೂ ಭಾವಚಿತ್ರವನ್ನು ದುರುಪಯೋಗಪಡಿಸಿಕೊಂಡು ಅಧಿಕಾರಿಗಳಿಗೆ ತಪ್ಪು ಮಾಹಿತಿ ರವಾನೆಯಾಗುತ್ತಿರುತ್ತದೆ.

ಇದನ್ನೂ ಓದಿ: ಜನರಿಗೆ ಕೋಟಿ‌ ಕೋಟಿ ರೂ. ಪಂಗನಾಮ: ಕಾಂಗ್ರೆಸ್ ಶಾಸಕ​ ಅಜಯ್ ಸಿಂಗ್ ಮಾಜಿ ಪಿಎ ಅರೆಸ್ಟ್

ಈ ನಿಟ್ಟಿನಲ್ಲಿ ಪಾಲಿಕೆ ಮಾಹಿತಿ ತಂತ್ರಜ್ಞಾನ ವಿಭಾಗದ ಉಪ ಮುಖ್ಯ ಮಾಹಿತಿ ಅಧಿಕಾರಿಯಾದ ಶ್ರೀ ಪ್ರಭಾಕರ್ ರವರು ತಕ್ಷಣ ಸೈಬರ್ ಕ್ರೈಮ್‌ನಲ್ಲಿ ದೂರು ದಾಖಲಿಸಿದ್ದಾರೆ. ಪಾಲಿಕೆಯ ಅಧಿಕಾರಿಗಳು ಅಥವಾ ನಾಗರೀಕರು 9428053334 ಸಂಖ್ಯೆಯಿಂದ ವ್ಯಾಟ್ಸಪ್ ಮೂಲಕ ಬರುವ ಸಂದೇಶಗಳಿಗೆ ಸ್ಪಂದಿಸದಂತೆ ಮುಖ್ಯ ಆಯುಕ್ತರು ಕೋರಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಳಿಕ ಬಿಬಿಎಂಪಿ ಎಲೆಕ್ಷನ್? ಡಿಕೆ ಶಿವಕುಮಾರ್ ಆ ಸೂಚನೆಯಿಂದ ಮೂಡಿತು ಕುತೂಹಲ

ಈ ರೀತಿಯ ಸಂದೇಶಗಳು ಯಾರಿಗಾದರೂ ಬಂದಲ್ಲಿ ಅಥವಾ ಯಾವುದೇ ಅನುಮಾನಗಳಿದ್ದಲ್ಲಿ ಕೂಡಲೆ ಮುಖ್ಯ ಆಯುಕ್ತರ ಕಛೇರಿಗೆ ವರದಿ ಮಾಡುವಂತೆ ಅಥವಾ ಸೈಬರ್ ಕ್ರೈಮ್‌ಗೆ ದೂರು ನೀಡುವಂತೆ ವಿನಂತಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ