AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ಫೇಕ್ ವಾಟ್ಸಾಪ್​​​​: ಸೈಬರ್​ ಕ್ರೈಂಗೆ ತುಷಾರ್ ಗಿರಿನಾಥ್ ದೂರು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಹೆಸರು, ಪದನಾಮ ಹಾಗೂ ಭಾವಚಿತ್ರವನ್ನು ಅಪರಿಚಿತ ದೂರವಾಣಿ ಸಂಖ್ಯೆ: 9428053334 ಯಿಂದ ವ್ಯಾಟ್ಸಪ್ ಮೂಲಕ ಅಧಿಕಾರಿಗಳಿಗೆ ಸಂದೇಶಗಳನ್ನು ರವಾನಿಸಲಾಗುತ್ತಿದೆ. ಹೀಗಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೈಬರ್​ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.​​ ನಕಲಿ ಕರೆ ಬಂದರೆ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿ ಎಂದು ತಿಳಿಸಿದೆ. 

ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ಫೇಕ್ ವಾಟ್ಸಾಪ್​​​​: ಸೈಬರ್​ ಕ್ರೈಂಗೆ ತುಷಾರ್ ಗಿರಿನಾಥ್ ದೂರು
ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ಫೇಕ್ ವಾಟ್ಸಾಪ್​​​​: ಸೈಬರ್​ ಕ್ರೈಂಗೆ ತುಷಾರ್ ಗಿರಿನಾಥ್ ದೂರು
ಶಾಂತಮೂರ್ತಿ
| Edited By: |

Updated on: May 24, 2024 | 3:44 PM

Share

ಬೆಂಗಳೂರು, ಮೇ 24: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರ ಹೆಸರಲ್ಲಿ ಫೇಕ್ ವಾಟ್ಸಾಪ್​ ತೆರೆಯಲಾಗಿದೆ. 9428053334 ಸಂಖ್ಯೆಯಿಂದ ಅಧಿಕಾರಿಗಳಿಗೆ ತಪ್ಪು ಮಾಹಿತಿ ರವಾನೆ ಮಾಡಲಾಗುತ್ತಿದೆ. ಹೀಗಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Giri Nath) ಸೈಬರ್​ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.​​ ನಕಲಿ ನಂಬರ್​​ನಿಂದ ಸಂದೇಶ ರವಾನೆ ಆಗುತ್ತಿದ್ದಂತೆ ಪಾಲಿಕೆ ಅಲರ್ಟ್​ ಆಗಿದ್ದು, ನಕಲಿ ನಂಬರ್​​ನಿಂದ ಬರುವ ಸಂದೇಶಗಳಿಗೆ ಸ್ಪಂದನೆ ಮಾಡಬೇಡಿ. ಈ ನಂಬರ್​ನಿಂದ ಕರೆ ಬಂದರೆ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿ ಎಂದು ತಿಳಿಸಿದೆ.

ದೂರಿನಲ್ಲೇನಿದೆ?

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಹೆಸರು, ಪದನಾಮ ಹಾಗೂ ಭಾವಚಿತ್ರವನ್ನು ಅಪರಿಚಿತ ದೂರವಾಣಿ ಸಂಖ್ಯೆ: 9428053334 ಯಿಂದ ವ್ಯಾಟ್ಸಪ್ ಮೂಲಕ ಅಧಿಕಾರಿಗಳಿಗೆ ಸಂದೇಶಗಳನ್ನು ರವಾನಿಸಲಾಗುತ್ತಿದೆ. ಅನಧಿಕೃತವಾಗಿ ಮುಖ್ಯ ಆಯುಕ್ತರ ಹೆಸರು, ಪದನಾಮ ಹಾಗೂ ಭಾವಚಿತ್ರವನ್ನು ದುರುಪಯೋಗಪಡಿಸಿಕೊಂಡು ಅಧಿಕಾರಿಗಳಿಗೆ ತಪ್ಪು ಮಾಹಿತಿ ರವಾನೆಯಾಗುತ್ತಿರುತ್ತದೆ.

ಇದನ್ನೂ ಓದಿ: ಜನರಿಗೆ ಕೋಟಿ‌ ಕೋಟಿ ರೂ. ಪಂಗನಾಮ: ಕಾಂಗ್ರೆಸ್ ಶಾಸಕ​ ಅಜಯ್ ಸಿಂಗ್ ಮಾಜಿ ಪಿಎ ಅರೆಸ್ಟ್

ಈ ನಿಟ್ಟಿನಲ್ಲಿ ಪಾಲಿಕೆ ಮಾಹಿತಿ ತಂತ್ರಜ್ಞಾನ ವಿಭಾಗದ ಉಪ ಮುಖ್ಯ ಮಾಹಿತಿ ಅಧಿಕಾರಿಯಾದ ಶ್ರೀ ಪ್ರಭಾಕರ್ ರವರು ತಕ್ಷಣ ಸೈಬರ್ ಕ್ರೈಮ್‌ನಲ್ಲಿ ದೂರು ದಾಖಲಿಸಿದ್ದಾರೆ. ಪಾಲಿಕೆಯ ಅಧಿಕಾರಿಗಳು ಅಥವಾ ನಾಗರೀಕರು 9428053334 ಸಂಖ್ಯೆಯಿಂದ ವ್ಯಾಟ್ಸಪ್ ಮೂಲಕ ಬರುವ ಸಂದೇಶಗಳಿಗೆ ಸ್ಪಂದಿಸದಂತೆ ಮುಖ್ಯ ಆಯುಕ್ತರು ಕೋರಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಳಿಕ ಬಿಬಿಎಂಪಿ ಎಲೆಕ್ಷನ್? ಡಿಕೆ ಶಿವಕುಮಾರ್ ಆ ಸೂಚನೆಯಿಂದ ಮೂಡಿತು ಕುತೂಹಲ

ಈ ರೀತಿಯ ಸಂದೇಶಗಳು ಯಾರಿಗಾದರೂ ಬಂದಲ್ಲಿ ಅಥವಾ ಯಾವುದೇ ಅನುಮಾನಗಳಿದ್ದಲ್ಲಿ ಕೂಡಲೆ ಮುಖ್ಯ ಆಯುಕ್ತರ ಕಛೇರಿಗೆ ವರದಿ ಮಾಡುವಂತೆ ಅಥವಾ ಸೈಬರ್ ಕ್ರೈಮ್‌ಗೆ ದೂರು ನೀಡುವಂತೆ ವಿನಂತಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ