AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರ ಮೇಲೆ‌ ಸುಳ್ಳು ಕೇಸ್ ಹಾಕುವುದನ್ನ ಖಂಡಿಸ್ತೇವೆ, ಅವರ ಜತೆ ನಾವು ಗಟ್ಟಿಯಾಗಿ ನಿಲ್ತೇವೆ – ಸಿದ್ದರಾಮಯ್ಯ ಅಭಯ

siddaramaiah: ಜಿಎಸ್ ಟಿ ಪರಿಹಾರ ಈ ವರ್ಷ ಮುಕ್ತಾಯ ಆಗ್ತಾ ಇದೆ. ಇದನ್ನ ಇನ್ನೂ ಐದು ವರ್ಷ ಮುಂದುವರಿಸಬೇಕು. ಪ್ರತಿ ವರ್ಷ 19 ಸಾವಿರ ಕೋಟಿ ರಾಜ್ಯಕ್ಕೆ ಬರ್ತಾ ಇತ್ತು. ಜಿಎಸ್ ಟಿ ಬರುವ ಮೊದಲು ನಮ್ಮ ಬೆಳವಣಿಗೆ ಶೇಕಡಾ 14 ರಷ್ಟಿತ್ತು. ಈಗ ಕೇವಲ 6 % ಆಗಿದೆ ಎಂದು ಸಿದ್ದರಾಮಯ್ಯ ವಿಷಾದಿಸಿದರು.

ಮುಸ್ಲಿಮರ ಮೇಲೆ‌ ಸುಳ್ಳು ಕೇಸ್ ಹಾಕುವುದನ್ನ ಖಂಡಿಸ್ತೇವೆ, ಅವರ ಜತೆ ನಾವು ಗಟ್ಟಿಯಾಗಿ ನಿಲ್ತೇವೆ - ಸಿದ್ದರಾಮಯ್ಯ ಅಭಯ
ಮುಸ್ಲಿಮರ ಮೇಲೆ‌ ಸುಳ್ಳು ಕೇಸ್ ಹಾಕುವುದನ್ನ ಖಂಡಿಸುತ್ತೇವೆ, ಅವರ ಜತೆ ನಾವು ಗಟ್ಟಿಯಾಗಿ ನಿಲ್ತೇವೆ - ಸಿದ್ದರಾಮಯ್ಯ ಅಭಯ
TV9 Web
| Edited By: |

Updated on:Jun 03, 2022 | 7:44 PM

Share

ಕರ್ನಾಟಕ ಕಾಂಗ್ರೆಸ್​ ನಾಯಕ ಡಿ ಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಬ್ಬರೂ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಮುನ್ನೆಲೆಯಲ್ಲಿ ಪಕ್ಷ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ ಮುಸ್ಲಿಮರ ಮೇಲೆ‌ ಸುಳ್ಳು ಕೇಸ್ ಹಾಕುವುದನ್ನ ಖಂಡಿಸುತ್ತೇವೆ. ಸಾಂಸ್ಕೃತಿಕ ಭಯೋತ್ಪಾದನೆ ವಿರುದ್ಧ ನಾವು ಹೋರಾಡುತ್ತೇವೆ. ನಾವು ಮುಸ್ಲಿಮರ ಜತೆ ಗಟ್ಟಿಯಾಗಿ ನಿಲ್ತೇವೆ. ಮುಸ್ಲಿಂ ವಿರುದ್ಧ ಸುಳ್ಳು ಕೇಸ್ ಹಾಕಲು ಅವಕಾಶ ನೀಡುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಯ ನೀಡಿದರು.

ಮೋದಿ ಸರ್ಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ. ನಾವು ಅಧಿಕಾರಕ್ಕೆ ಬಂದರೆ ಬೆಲೆ ನಿಯಂತ್ರಣ ಮಾಡ್ತೇವೆ. ಜಿಎಸ್ ಟಿ ಪರಿಹಾರ ಈ ವರ್ಷ ಮುಕ್ತಾಯ ಆಗ್ತಾ ಇದೆ. ಇದನ್ನ ಇನ್ನೂ ಐದು ವರ್ಷ ಮುಂದುವರಿಸಬೇಕು. ಪ್ರತಿ ವರ್ಷ 19 ಸಾವಿರ ಕೋಟಿ ರಾಜ್ಯಕ್ಕೆ ಬರ್ತಾ ಇತ್ತು. ಕೇಂದ್ರ ಸರ್ಕಾರ ಈ ಬಾರಿ ಬಜೆಟ್ ನಲ್ಲೂ ಏನೂ ಹೇಳಿಲ್ಲ ಅಥವಾ ಮೌಕಿಕವಾಗಿಯೂ ಏನೂ ಹೇಳಿಲ್ಲ. ಹೀಗಾಗಿ ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ಮುಂದುವರಿಸಬೇಕು. ಜಿಎಸ್ ಟಿ ಬರುವ ಮೊದಲು ನಮ್ಮ ಬೆಳವಣಿಗೆ ಶೇಕಡಾ 14 ರಷ್ಟಿತ್ತು. ಈಗ ಕೇವಲ 6 % ಆಗಿದೆ ಎಂದು ಸಿದ್ದರಾಮಯ್ಯ ವಿಷಾದಿಸಿದರು.

ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ತರಲು ಕಾಂಗ್ರೆಸ್ ಬದ್ಧ

ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ತರಲು ಕಾಂಗ್ರೆಸ್ ಬದ್ಧವಿದೆ. ಇನ್ನು, ಬ್ಯಾಕ್​ಲಾಗ್ ಹುದ್ದೆಗಳು ಭರ್ತಿ ಆಗಿಲ್ಲ ಎಂದ ಸಿದ್ದರಾಮಯ್ಯ ಸರ್ಕಾರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ‌ಮಾಡಬೇಕು. ಖಾಸಗಿ ಕ್ಷೇತ್ರದಲ್ಲೂ ಉದ್ಯೋಗ ಮೀಸಲಾತಿಯನ್ನ ತರಬೇಕು. ರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ನಾವು ನಿರ್ಧರಿಸಿದ್ದೇವೆ. ಗುತ್ತಿಗೆ ಆಧಾರದ ಕೆಲಸದಲ್ಲಿ ಮೀಸಲಾತಿ ಇಲ್ಲ. ಅಲ್ಲಿ‌ಕಡಿಮೆ ವೇತನಕ್ಕೆ ದುಡಿಯುತ್ತಿದ್ದಾರೆ. ಹೀಗಾಗಿ ನಾವು ಅಲ್ಲಿಯೂ ಮೀಸಲಾತಿ ತರ್ತೇವೆ. ನಾನು 2018 ರಲ್ಲಿ ಬಜೆಟ್ ಮಂಡಿಸಿದಾಗ ದಲಿತರಿಗೆ 29,700 ಕೋಟಿ ರೂಪಾಯಿ ನೀಡಿದ್ದೆ. ಶೇಕಡಾ 24 ಹಣವನ್ನು ಮೀಸಲಿಟ್ಟಿದೆ. ಆದರೆ ಈಗ ಕೇವಲ 28 ಸಾವಿರ ರೂ ಕೊಟ್ಟಿದ್ದಾರೆ. ಈಗ ಡೀಮ್ಡ್ ಎಕ್ಸಪೆಂಡಿಚರ್ ಅಡಿಯಲ್ಲಿ ಡೀವಿಯೇಷನ್ ಆಗ್ತಾ ಇದೆ. ಸೆಕ್ಷನ್ 7 ಡಿ ಅಡಿಯಲ್ಲಿ ಈ ರೀತಿ ದುರುಪಯೋಗ ಆಗ್ತಾ ಇದೆ. ಈ ಸೆಕ್ಷನ್ ಅನ್ನು ತೆಗೆದು ಹಾಕ್ತೀವಿ ಎಂದು ಸಿದ್ದರಾಮಯ್ಯ ಗುಡುಗಿದರು.

Published On - 7:40 pm, Fri, 3 June 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು