AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರ ಮೇಲೆ‌ ಸುಳ್ಳು ಕೇಸ್ ಹಾಕುವುದನ್ನ ಖಂಡಿಸ್ತೇವೆ, ಅವರ ಜತೆ ನಾವು ಗಟ್ಟಿಯಾಗಿ ನಿಲ್ತೇವೆ – ಸಿದ್ದರಾಮಯ್ಯ ಅಭಯ

siddaramaiah: ಜಿಎಸ್ ಟಿ ಪರಿಹಾರ ಈ ವರ್ಷ ಮುಕ್ತಾಯ ಆಗ್ತಾ ಇದೆ. ಇದನ್ನ ಇನ್ನೂ ಐದು ವರ್ಷ ಮುಂದುವರಿಸಬೇಕು. ಪ್ರತಿ ವರ್ಷ 19 ಸಾವಿರ ಕೋಟಿ ರಾಜ್ಯಕ್ಕೆ ಬರ್ತಾ ಇತ್ತು. ಜಿಎಸ್ ಟಿ ಬರುವ ಮೊದಲು ನಮ್ಮ ಬೆಳವಣಿಗೆ ಶೇಕಡಾ 14 ರಷ್ಟಿತ್ತು. ಈಗ ಕೇವಲ 6 % ಆಗಿದೆ ಎಂದು ಸಿದ್ದರಾಮಯ್ಯ ವಿಷಾದಿಸಿದರು.

ಮುಸ್ಲಿಮರ ಮೇಲೆ‌ ಸುಳ್ಳು ಕೇಸ್ ಹಾಕುವುದನ್ನ ಖಂಡಿಸ್ತೇವೆ, ಅವರ ಜತೆ ನಾವು ಗಟ್ಟಿಯಾಗಿ ನಿಲ್ತೇವೆ - ಸಿದ್ದರಾಮಯ್ಯ ಅಭಯ
ಮುಸ್ಲಿಮರ ಮೇಲೆ‌ ಸುಳ್ಳು ಕೇಸ್ ಹಾಕುವುದನ್ನ ಖಂಡಿಸುತ್ತೇವೆ, ಅವರ ಜತೆ ನಾವು ಗಟ್ಟಿಯಾಗಿ ನಿಲ್ತೇವೆ - ಸಿದ್ದರಾಮಯ್ಯ ಅಭಯ
TV9 Web
| Edited By: ಸಾಧು ಶ್ರೀನಾಥ್​|

Updated on:Jun 03, 2022 | 7:44 PM

Share

ಕರ್ನಾಟಕ ಕಾಂಗ್ರೆಸ್​ ನಾಯಕ ಡಿ ಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಬ್ಬರೂ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಮುನ್ನೆಲೆಯಲ್ಲಿ ಪಕ್ಷ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ ಮುಸ್ಲಿಮರ ಮೇಲೆ‌ ಸುಳ್ಳು ಕೇಸ್ ಹಾಕುವುದನ್ನ ಖಂಡಿಸುತ್ತೇವೆ. ಸಾಂಸ್ಕೃತಿಕ ಭಯೋತ್ಪಾದನೆ ವಿರುದ್ಧ ನಾವು ಹೋರಾಡುತ್ತೇವೆ. ನಾವು ಮುಸ್ಲಿಮರ ಜತೆ ಗಟ್ಟಿಯಾಗಿ ನಿಲ್ತೇವೆ. ಮುಸ್ಲಿಂ ವಿರುದ್ಧ ಸುಳ್ಳು ಕೇಸ್ ಹಾಕಲು ಅವಕಾಶ ನೀಡುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಯ ನೀಡಿದರು.

ಮೋದಿ ಸರ್ಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ. ನಾವು ಅಧಿಕಾರಕ್ಕೆ ಬಂದರೆ ಬೆಲೆ ನಿಯಂತ್ರಣ ಮಾಡ್ತೇವೆ. ಜಿಎಸ್ ಟಿ ಪರಿಹಾರ ಈ ವರ್ಷ ಮುಕ್ತಾಯ ಆಗ್ತಾ ಇದೆ. ಇದನ್ನ ಇನ್ನೂ ಐದು ವರ್ಷ ಮುಂದುವರಿಸಬೇಕು. ಪ್ರತಿ ವರ್ಷ 19 ಸಾವಿರ ಕೋಟಿ ರಾಜ್ಯಕ್ಕೆ ಬರ್ತಾ ಇತ್ತು. ಕೇಂದ್ರ ಸರ್ಕಾರ ಈ ಬಾರಿ ಬಜೆಟ್ ನಲ್ಲೂ ಏನೂ ಹೇಳಿಲ್ಲ ಅಥವಾ ಮೌಕಿಕವಾಗಿಯೂ ಏನೂ ಹೇಳಿಲ್ಲ. ಹೀಗಾಗಿ ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ಮುಂದುವರಿಸಬೇಕು. ಜಿಎಸ್ ಟಿ ಬರುವ ಮೊದಲು ನಮ್ಮ ಬೆಳವಣಿಗೆ ಶೇಕಡಾ 14 ರಷ್ಟಿತ್ತು. ಈಗ ಕೇವಲ 6 % ಆಗಿದೆ ಎಂದು ಸಿದ್ದರಾಮಯ್ಯ ವಿಷಾದಿಸಿದರು.

ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ತರಲು ಕಾಂಗ್ರೆಸ್ ಬದ್ಧ

ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ತರಲು ಕಾಂಗ್ರೆಸ್ ಬದ್ಧವಿದೆ. ಇನ್ನು, ಬ್ಯಾಕ್​ಲಾಗ್ ಹುದ್ದೆಗಳು ಭರ್ತಿ ಆಗಿಲ್ಲ ಎಂದ ಸಿದ್ದರಾಮಯ್ಯ ಸರ್ಕಾರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ‌ಮಾಡಬೇಕು. ಖಾಸಗಿ ಕ್ಷೇತ್ರದಲ್ಲೂ ಉದ್ಯೋಗ ಮೀಸಲಾತಿಯನ್ನ ತರಬೇಕು. ರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ನಾವು ನಿರ್ಧರಿಸಿದ್ದೇವೆ. ಗುತ್ತಿಗೆ ಆಧಾರದ ಕೆಲಸದಲ್ಲಿ ಮೀಸಲಾತಿ ಇಲ್ಲ. ಅಲ್ಲಿ‌ಕಡಿಮೆ ವೇತನಕ್ಕೆ ದುಡಿಯುತ್ತಿದ್ದಾರೆ. ಹೀಗಾಗಿ ನಾವು ಅಲ್ಲಿಯೂ ಮೀಸಲಾತಿ ತರ್ತೇವೆ. ನಾನು 2018 ರಲ್ಲಿ ಬಜೆಟ್ ಮಂಡಿಸಿದಾಗ ದಲಿತರಿಗೆ 29,700 ಕೋಟಿ ರೂಪಾಯಿ ನೀಡಿದ್ದೆ. ಶೇಕಡಾ 24 ಹಣವನ್ನು ಮೀಸಲಿಟ್ಟಿದೆ. ಆದರೆ ಈಗ ಕೇವಲ 28 ಸಾವಿರ ರೂ ಕೊಟ್ಟಿದ್ದಾರೆ. ಈಗ ಡೀಮ್ಡ್ ಎಕ್ಸಪೆಂಡಿಚರ್ ಅಡಿಯಲ್ಲಿ ಡೀವಿಯೇಷನ್ ಆಗ್ತಾ ಇದೆ. ಸೆಕ್ಷನ್ 7 ಡಿ ಅಡಿಯಲ್ಲಿ ಈ ರೀತಿ ದುರುಪಯೋಗ ಆಗ್ತಾ ಇದೆ. ಈ ಸೆಕ್ಷನ್ ಅನ್ನು ತೆಗೆದು ಹಾಕ್ತೀವಿ ಎಂದು ಸಿದ್ದರಾಮಯ್ಯ ಗುಡುಗಿದರು.

Published On - 7:40 pm, Fri, 3 June 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ