AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಟಾ-ಶಿರಸಿ ಹೆದ್ದಾರಿ ಬಂದ್: ವೈರಲ್ ಪೋಸ್ಟ್​ ಹಿಂದಿನ ಸತ್ಯಾಸತ್ಯತೆ ಇಲ್ಲಿದೆ

ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಷೇಧದ ಸುಳ್ಳು ಸುದ್ದಿ ವೈರಲ್ ಆಗಿದೆ. ಪ್ರಿಂಟಿಂಗ್ ಪ್ರೆಸ್ ತಪ್ಪು ಮಾಹಿತಿ ಹರಡಿದ್ದರಿಂದ ಈ ಗೊಂದಲ ಉಂಟಾಗಿದೆ ಎಂದು ಎನ್‌ಹೆಚ್‌ಎಐ ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕೃತವಾಗಿ ಹೆದ್ದಾರಿ ಬಂದ್ ಆಗಿಲ್ಲ. ಸಾರ್ವಜನಿಕರು ಈ ತಪ್ಪು ಮಾಹಿತಿಯನ್ನು ನಂಬಬಾರದು ಎಂದು ತಿಳಿಸಲಾಗಿದೆ.

ಕುಮಟಾ-ಶಿರಸಿ ಹೆದ್ದಾರಿ ಬಂದ್: ವೈರಲ್ ಪೋಸ್ಟ್​ ಹಿಂದಿನ ಸತ್ಯಾಸತ್ಯತೆ ಇಲ್ಲಿದೆ
ಕುಮಟಾ-ಶಿರಸಿ ಹೆದ್ದಾರಿ ಬಂದ್: ವೈರಲ್ ಪೋಸ್ಟ್​ ಹಿಂದಿನ ಸತ್ಯಾಸತ್ಯತೆ ಇಲ್ಲಿದೆ
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Nov 14, 2024 | 8:09 PM

Share

ಕಾರವಾರ, ನವೆಂಬರ್​ 14: ಪ್ರಿಂಟಿಂಗ್ ಪ್ರೆಸ್​ ಮಾಲೀಕನ ಅವಾಂತರದಿಂದಾಗಿ ಜನರಲ್ಲಿ ಗೊಂದಲ ಉಂಟಾಗಿದೆ. ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ (Kumta-Sirsi Highway) ಬಂದ್​ ವಿಚಾರವಾಗಿ ಗೊಂದಲ ಸೃಷ್ಟಿಯಾಗಿದೆ. ಅಧಿಕೃತ ನಿರ್ಣಯಕ್ಕೂ ಮುನ್ನವೇ ಜಾಲತಾಣದಲ್ಲಿ ಕುಮಟಾ-ಶಿರಸಿ ರಾ.ಹೆದ್ದಾರಿಯಲ್ಲಿ ಸಂಚಾರ ನಿಷೇಧ ಪೋಸ್ಟ್​​ ವೈರಲ್​ ಆಗಿದೆ. ಸದ್ಯ ಹೆದ್ದಾರಿ ಬಂದ್ ಮಾಡಿಲ್ಲ ಎಂದು ಎನ್​ಹೆಚ್​​ಎಐ ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

ಅಧಿಕೃತವಾಗಿ ಇದುವರೆಗೂ ಬಂದ್ ಮಾಡುವ ದಿನಾಂಕ ನಿಗದಿ ಆಗಿಲ್ಲ: ಶಿವಕುಮಾರ್

ಈ ಬಗ್ಗೆ ಟಿವಿ9 ಜೊತೆಗೆ ಹೊನ್ನಾವರದ ಎನ್​ಹೆಚ್​​ಎಐ ಯೋಜನಾ ನಿರ್ದೇಶಕ ಶಿವಕುಮಾರ್​ ಪ್ರತಿಕ್ರಿಯಿಸಿದ್ದು, ಅಧಿಕೃತವಾಗಿ ಇದುವರೆಗೂ ಬಂದ್ ಮಾಡುವ ದಿನಾಂಕ ನಿಗದಿ ಆಗಿಲ್ಲ. ಸದ್ಯ ವಾಹನ ನಿಷೇಧ ಅನಿವಾರ್ಯತೆ ಇಲ್ಲದ ಸ್ಥಳದಲ್ಲಿ ಕಾಮಗಾರಿ ಮಾಡಲು ಸೂಚಿಸಲಾಗಿದೆ. ವಾಹನ ನಿಷೇಧ ಅನಿವಾರ್ಯತೆ ಇದ್ದ ಸ್ಥಳದಲ್ಲಿ ಬಂದ್ ಮಾಡಿದ ಬಳಿಕ ಕಾಮಗಾರಿ ಮಾಡಲು ಸೂಚಿಸಲಾಗಿದೆ.

ಇದನ್ನೂ ಓದಿ: ಶಿರೂರು ದುರಂತ: ಒಂದು ವಾರ ಕಳೆದ್ರೂ ಪತ್ತೆಯಾದ ಮೂಳೆಗಳ ಡಿಎನ್​ಎ ವರದಿ ಬಂದಿಲ್ಲ, ವೈದ್ಯ ಸಿಬ್ಬಂದಿ ಎಡವಟ್ಟು

ನಿಷೇಧ ಮಾಡದೆ ವಾಹನ ಸಂಚಾರಕ್ಕೆ ಸಮಸ್ಯೆ ಆಗದ ಹಾಗೆ ಕಾಮಗಾರಿ ಮಾಡಲಾಗುತ್ತಿದೆ. ನವೆಂಬರ್​ 15 ರಂದು ವಾಹನ ಸಂಚಾರ ನಿಷೇಧಕ್ಕೆ ನಾವು ಮನವಿ ಮಾಡಿದ್ದೇವು. ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಲಗೆ ಮೇರೆಗೆ ಈ ನಿರ್ಣಯ ಕೈಗೊಂಡಿದ್ದೇವೆ.

ಮುಂದೆ ಬಂದ್ ಮಾಡಲು ನಿರ್ಣಯಿಸಿದಾಗ ಪೋಸ್ಟರ್​ ಮಾಡಲು ಪ್ರಿಂಟಿಂಗ್ ಪ್ರೆಸ್​ಗೆ ಹೇಳಿದ್ದೇವು. ಅವರು ತಪ್ಪಾಗಿ ಅರ್ಥೈಸಿಕೊಂಡು ಹಳೆಯ ಆದೇಶದಂತೆ ಇರಬಹುದು ಅಂತಾ ಅನ್ಕೊಂಡು ಈ ಅವಾಂತರ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ

ಅಕ್ಟೋಬರ್ 15 ರಿಂದ ವಾಹನ ನಿಷೇಧದ ಪೋಸ್ಟ್ ರೆಡಿ ಮಾಡಿ ನಮ್ಮ ಗಮನಕ್ಕೆ ತರದೆ ವೈರಲ್​ ಮಾಡಲಾಗಿದೆ. ಸಾರ್ವಜನಿಕರು ಈ ಪೋಸ್ಟ್ ಅನ್ನು ಅಧಿಕೃತವಾಗಿ ಪರಗಣಿಸಬಾರದೆಂದು ಹೆದ್ದಾರಿ ಪ್ರಾಧಿಕಾರ ಅಧಿಕಾರಿ ಟಿವಿ9 ಮೂಲಕ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:07 pm, Thu, 14 November 24

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!