AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಟಾ-ಶಿರಸಿ ಹೆದ್ದಾರಿ ಬಂದ್: ವೈರಲ್ ಪೋಸ್ಟ್​ ಹಿಂದಿನ ಸತ್ಯಾಸತ್ಯತೆ ಇಲ್ಲಿದೆ

ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಷೇಧದ ಸುಳ್ಳು ಸುದ್ದಿ ವೈರಲ್ ಆಗಿದೆ. ಪ್ರಿಂಟಿಂಗ್ ಪ್ರೆಸ್ ತಪ್ಪು ಮಾಹಿತಿ ಹರಡಿದ್ದರಿಂದ ಈ ಗೊಂದಲ ಉಂಟಾಗಿದೆ ಎಂದು ಎನ್‌ಹೆಚ್‌ಎಐ ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕೃತವಾಗಿ ಹೆದ್ದಾರಿ ಬಂದ್ ಆಗಿಲ್ಲ. ಸಾರ್ವಜನಿಕರು ಈ ತಪ್ಪು ಮಾಹಿತಿಯನ್ನು ನಂಬಬಾರದು ಎಂದು ತಿಳಿಸಲಾಗಿದೆ.

ಕುಮಟಾ-ಶಿರಸಿ ಹೆದ್ದಾರಿ ಬಂದ್: ವೈರಲ್ ಪೋಸ್ಟ್​ ಹಿಂದಿನ ಸತ್ಯಾಸತ್ಯತೆ ಇಲ್ಲಿದೆ
ಕುಮಟಾ-ಶಿರಸಿ ಹೆದ್ದಾರಿ ಬಂದ್: ವೈರಲ್ ಪೋಸ್ಟ್​ ಹಿಂದಿನ ಸತ್ಯಾಸತ್ಯತೆ ಇಲ್ಲಿದೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Nov 14, 2024 | 8:09 PM

Share

ಕಾರವಾರ, ನವೆಂಬರ್​ 14: ಪ್ರಿಂಟಿಂಗ್ ಪ್ರೆಸ್​ ಮಾಲೀಕನ ಅವಾಂತರದಿಂದಾಗಿ ಜನರಲ್ಲಿ ಗೊಂದಲ ಉಂಟಾಗಿದೆ. ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ (Kumta-Sirsi Highway) ಬಂದ್​ ವಿಚಾರವಾಗಿ ಗೊಂದಲ ಸೃಷ್ಟಿಯಾಗಿದೆ. ಅಧಿಕೃತ ನಿರ್ಣಯಕ್ಕೂ ಮುನ್ನವೇ ಜಾಲತಾಣದಲ್ಲಿ ಕುಮಟಾ-ಶಿರಸಿ ರಾ.ಹೆದ್ದಾರಿಯಲ್ಲಿ ಸಂಚಾರ ನಿಷೇಧ ಪೋಸ್ಟ್​​ ವೈರಲ್​ ಆಗಿದೆ. ಸದ್ಯ ಹೆದ್ದಾರಿ ಬಂದ್ ಮಾಡಿಲ್ಲ ಎಂದು ಎನ್​ಹೆಚ್​​ಎಐ ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

ಅಧಿಕೃತವಾಗಿ ಇದುವರೆಗೂ ಬಂದ್ ಮಾಡುವ ದಿನಾಂಕ ನಿಗದಿ ಆಗಿಲ್ಲ: ಶಿವಕುಮಾರ್

ಈ ಬಗ್ಗೆ ಟಿವಿ9 ಜೊತೆಗೆ ಹೊನ್ನಾವರದ ಎನ್​ಹೆಚ್​​ಎಐ ಯೋಜನಾ ನಿರ್ದೇಶಕ ಶಿವಕುಮಾರ್​ ಪ್ರತಿಕ್ರಿಯಿಸಿದ್ದು, ಅಧಿಕೃತವಾಗಿ ಇದುವರೆಗೂ ಬಂದ್ ಮಾಡುವ ದಿನಾಂಕ ನಿಗದಿ ಆಗಿಲ್ಲ. ಸದ್ಯ ವಾಹನ ನಿಷೇಧ ಅನಿವಾರ್ಯತೆ ಇಲ್ಲದ ಸ್ಥಳದಲ್ಲಿ ಕಾಮಗಾರಿ ಮಾಡಲು ಸೂಚಿಸಲಾಗಿದೆ. ವಾಹನ ನಿಷೇಧ ಅನಿವಾರ್ಯತೆ ಇದ್ದ ಸ್ಥಳದಲ್ಲಿ ಬಂದ್ ಮಾಡಿದ ಬಳಿಕ ಕಾಮಗಾರಿ ಮಾಡಲು ಸೂಚಿಸಲಾಗಿದೆ.

ಇದನ್ನೂ ಓದಿ: ಶಿರೂರು ದುರಂತ: ಒಂದು ವಾರ ಕಳೆದ್ರೂ ಪತ್ತೆಯಾದ ಮೂಳೆಗಳ ಡಿಎನ್​ಎ ವರದಿ ಬಂದಿಲ್ಲ, ವೈದ್ಯ ಸಿಬ್ಬಂದಿ ಎಡವಟ್ಟು

ನಿಷೇಧ ಮಾಡದೆ ವಾಹನ ಸಂಚಾರಕ್ಕೆ ಸಮಸ್ಯೆ ಆಗದ ಹಾಗೆ ಕಾಮಗಾರಿ ಮಾಡಲಾಗುತ್ತಿದೆ. ನವೆಂಬರ್​ 15 ರಂದು ವಾಹನ ಸಂಚಾರ ನಿಷೇಧಕ್ಕೆ ನಾವು ಮನವಿ ಮಾಡಿದ್ದೇವು. ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಲಗೆ ಮೇರೆಗೆ ಈ ನಿರ್ಣಯ ಕೈಗೊಂಡಿದ್ದೇವೆ.

ಮುಂದೆ ಬಂದ್ ಮಾಡಲು ನಿರ್ಣಯಿಸಿದಾಗ ಪೋಸ್ಟರ್​ ಮಾಡಲು ಪ್ರಿಂಟಿಂಗ್ ಪ್ರೆಸ್​ಗೆ ಹೇಳಿದ್ದೇವು. ಅವರು ತಪ್ಪಾಗಿ ಅರ್ಥೈಸಿಕೊಂಡು ಹಳೆಯ ಆದೇಶದಂತೆ ಇರಬಹುದು ಅಂತಾ ಅನ್ಕೊಂಡು ಈ ಅವಾಂತರ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ

ಅಕ್ಟೋಬರ್ 15 ರಿಂದ ವಾಹನ ನಿಷೇಧದ ಪೋಸ್ಟ್ ರೆಡಿ ಮಾಡಿ ನಮ್ಮ ಗಮನಕ್ಕೆ ತರದೆ ವೈರಲ್​ ಮಾಡಲಾಗಿದೆ. ಸಾರ್ವಜನಿಕರು ಈ ಪೋಸ್ಟ್ ಅನ್ನು ಅಧಿಕೃತವಾಗಿ ಪರಗಣಿಸಬಾರದೆಂದು ಹೆದ್ದಾರಿ ಪ್ರಾಧಿಕಾರ ಅಧಿಕಾರಿ ಟಿವಿ9 ಮೂಲಕ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:07 pm, Thu, 14 November 24

Follow Us
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?