AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಟಾ-ಶಿರಸಿ ಹೆದ್ದಾರಿ ಬಂದ್: ವೈರಲ್ ಪೋಸ್ಟ್​ ಹಿಂದಿನ ಸತ್ಯಾಸತ್ಯತೆ ಇಲ್ಲಿದೆ

ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಷೇಧದ ಸುಳ್ಳು ಸುದ್ದಿ ವೈರಲ್ ಆಗಿದೆ. ಪ್ರಿಂಟಿಂಗ್ ಪ್ರೆಸ್ ತಪ್ಪು ಮಾಹಿತಿ ಹರಡಿದ್ದರಿಂದ ಈ ಗೊಂದಲ ಉಂಟಾಗಿದೆ ಎಂದು ಎನ್‌ಹೆಚ್‌ಎಐ ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕೃತವಾಗಿ ಹೆದ್ದಾರಿ ಬಂದ್ ಆಗಿಲ್ಲ. ಸಾರ್ವಜನಿಕರು ಈ ತಪ್ಪು ಮಾಹಿತಿಯನ್ನು ನಂಬಬಾರದು ಎಂದು ತಿಳಿಸಲಾಗಿದೆ.

ಕುಮಟಾ-ಶಿರಸಿ ಹೆದ್ದಾರಿ ಬಂದ್: ವೈರಲ್ ಪೋಸ್ಟ್​ ಹಿಂದಿನ ಸತ್ಯಾಸತ್ಯತೆ ಇಲ್ಲಿದೆ
ಕುಮಟಾ-ಶಿರಸಿ ಹೆದ್ದಾರಿ ಬಂದ್: ವೈರಲ್ ಪೋಸ್ಟ್​ ಹಿಂದಿನ ಸತ್ಯಾಸತ್ಯತೆ ಇಲ್ಲಿದೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Nov 14, 2024 | 8:09 PM

Share

ಕಾರವಾರ, ನವೆಂಬರ್​ 14: ಪ್ರಿಂಟಿಂಗ್ ಪ್ರೆಸ್​ ಮಾಲೀಕನ ಅವಾಂತರದಿಂದಾಗಿ ಜನರಲ್ಲಿ ಗೊಂದಲ ಉಂಟಾಗಿದೆ. ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ (Kumta-Sirsi Highway) ಬಂದ್​ ವಿಚಾರವಾಗಿ ಗೊಂದಲ ಸೃಷ್ಟಿಯಾಗಿದೆ. ಅಧಿಕೃತ ನಿರ್ಣಯಕ್ಕೂ ಮುನ್ನವೇ ಜಾಲತಾಣದಲ್ಲಿ ಕುಮಟಾ-ಶಿರಸಿ ರಾ.ಹೆದ್ದಾರಿಯಲ್ಲಿ ಸಂಚಾರ ನಿಷೇಧ ಪೋಸ್ಟ್​​ ವೈರಲ್​ ಆಗಿದೆ. ಸದ್ಯ ಹೆದ್ದಾರಿ ಬಂದ್ ಮಾಡಿಲ್ಲ ಎಂದು ಎನ್​ಹೆಚ್​​ಎಐ ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

ಅಧಿಕೃತವಾಗಿ ಇದುವರೆಗೂ ಬಂದ್ ಮಾಡುವ ದಿನಾಂಕ ನಿಗದಿ ಆಗಿಲ್ಲ: ಶಿವಕುಮಾರ್

ಈ ಬಗ್ಗೆ ಟಿವಿ9 ಜೊತೆಗೆ ಹೊನ್ನಾವರದ ಎನ್​ಹೆಚ್​​ಎಐ ಯೋಜನಾ ನಿರ್ದೇಶಕ ಶಿವಕುಮಾರ್​ ಪ್ರತಿಕ್ರಿಯಿಸಿದ್ದು, ಅಧಿಕೃತವಾಗಿ ಇದುವರೆಗೂ ಬಂದ್ ಮಾಡುವ ದಿನಾಂಕ ನಿಗದಿ ಆಗಿಲ್ಲ. ಸದ್ಯ ವಾಹನ ನಿಷೇಧ ಅನಿವಾರ್ಯತೆ ಇಲ್ಲದ ಸ್ಥಳದಲ್ಲಿ ಕಾಮಗಾರಿ ಮಾಡಲು ಸೂಚಿಸಲಾಗಿದೆ. ವಾಹನ ನಿಷೇಧ ಅನಿವಾರ್ಯತೆ ಇದ್ದ ಸ್ಥಳದಲ್ಲಿ ಬಂದ್ ಮಾಡಿದ ಬಳಿಕ ಕಾಮಗಾರಿ ಮಾಡಲು ಸೂಚಿಸಲಾಗಿದೆ.

ಇದನ್ನೂ ಓದಿ: ಶಿರೂರು ದುರಂತ: ಒಂದು ವಾರ ಕಳೆದ್ರೂ ಪತ್ತೆಯಾದ ಮೂಳೆಗಳ ಡಿಎನ್​ಎ ವರದಿ ಬಂದಿಲ್ಲ, ವೈದ್ಯ ಸಿಬ್ಬಂದಿ ಎಡವಟ್ಟು

ನಿಷೇಧ ಮಾಡದೆ ವಾಹನ ಸಂಚಾರಕ್ಕೆ ಸಮಸ್ಯೆ ಆಗದ ಹಾಗೆ ಕಾಮಗಾರಿ ಮಾಡಲಾಗುತ್ತಿದೆ. ನವೆಂಬರ್​ 15 ರಂದು ವಾಹನ ಸಂಚಾರ ನಿಷೇಧಕ್ಕೆ ನಾವು ಮನವಿ ಮಾಡಿದ್ದೇವು. ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಲಗೆ ಮೇರೆಗೆ ಈ ನಿರ್ಣಯ ಕೈಗೊಂಡಿದ್ದೇವೆ.

ಮುಂದೆ ಬಂದ್ ಮಾಡಲು ನಿರ್ಣಯಿಸಿದಾಗ ಪೋಸ್ಟರ್​ ಮಾಡಲು ಪ್ರಿಂಟಿಂಗ್ ಪ್ರೆಸ್​ಗೆ ಹೇಳಿದ್ದೇವು. ಅವರು ತಪ್ಪಾಗಿ ಅರ್ಥೈಸಿಕೊಂಡು ಹಳೆಯ ಆದೇಶದಂತೆ ಇರಬಹುದು ಅಂತಾ ಅನ್ಕೊಂಡು ಈ ಅವಾಂತರ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ

ಅಕ್ಟೋಬರ್ 15 ರಿಂದ ವಾಹನ ನಿಷೇಧದ ಪೋಸ್ಟ್ ರೆಡಿ ಮಾಡಿ ನಮ್ಮ ಗಮನಕ್ಕೆ ತರದೆ ವೈರಲ್​ ಮಾಡಲಾಗಿದೆ. ಸಾರ್ವಜನಿಕರು ಈ ಪೋಸ್ಟ್ ಅನ್ನು ಅಧಿಕೃತವಾಗಿ ಪರಗಣಿಸಬಾರದೆಂದು ಹೆದ್ದಾರಿ ಪ್ರಾಧಿಕಾರ ಅಧಿಕಾರಿ ಟಿವಿ9 ಮೂಲಕ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:07 pm, Thu, 14 November 24

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್