AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಕೊವಿಡ್ ಸೋಂಕಿತೆ ವೃದ್ಧೆಯನ್ನು ಅರ್ಧ ದಾರಿಗೆ ಬಿಟ್ಟು ಹೋದ ಆಂಬ್ಯುಲೆನ್ಸ್ ಚಾಲಕ; ಕುಟುಂಬಸ್ಥರ ಆಕ್ರೋಶ

ಮಡಿಕೇರಿ ಕೊವಿಡ್ ಆಸ್ಪತ್ರೆಯಿಂದ 60 ವರ್ಷದ ಪೊನ್ನಮ್ಮ ಕಳೆದ 14 ದಿನ ಐಸಿಯುನಲ್ಲಿ ಚಿಕಿತ್ಸೆ ಪಡೆದು ನಿನ್ನೆ ಸಂಜೆ ಡಿಸ್ಚಾರ್ಜ್ ಆಗಿದ್ದರು. ಪೊನ್ನಮ್ಮ ಸೋಮವಾರಪೇಟೆ ತಾಲೂಕಿನ ಕಿರಗಂದೂರು ನಿವಾಸಿ. ಆದರೆ ಅಂಬ್ಯುಲೆನ್ಸ್ ಚಾಲಕ ಸಂಜೆ 5.30 ಗಂಟೆಗೆ ಐಗೂರು ಗ್ರಾಮಕ್ಕೆ ಬಿಟ್ಟು ಹೋಗಿದ್ದಾನೆ.

ಕೊಡಗು: ಕೊವಿಡ್ ಸೋಂಕಿತೆ ವೃದ್ಧೆಯನ್ನು ಅರ್ಧ ದಾರಿಗೆ ಬಿಟ್ಟು ಹೋದ ಆಂಬ್ಯುಲೆನ್ಸ್ ಚಾಲಕ; ಕುಟುಂಬಸ್ಥರ ಆಕ್ರೋಶ
ಕೊರೊನಾದಿಂದ ಗುಣಮುಖರಾದ ವೃದ್ಧೆ
sandhya thejappa
|

Updated on:May 24, 2021 | 11:56 AM

Share

ಮಡಿಕೇರಿ: ಕೊರೊನಾ ಸೋಂಕಿತ ವೃದ್ಧೆಯನ್ನು ಆಕೆಯ ಮನೆಗೆ ಬಿಡದೆ ಅರ್ಧ ದಾರಿಗೆ ನಿಲ್ಲಿಸಿ ಚಾಲಕ ಹಿಂತಿರುಗಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ನಡೆದಿದೆ. ಮಡಿಕೇರಿ ಕೊವಿಡ್ ಆಸ್ಪತ್ರೆಯಿಂದ ನಿನ್ನೆ ಸಂಜೆ ( ಮೇ 23) ಡಿಸ್ಚಾರ್ಜ್ ಆಗಿದ್ದರು. ಕುಟುಂಬಸ್ಥರಿಗೆ ಮಾಹಿತಿ ನೀಡದೆ ವೃದ್ಧೆ ಡಿಸ್ಚಾರ್ಜ್ ಆಗಿದ್ದರು. ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದ ವೃದ್ಧೆಯನ್ನು ಆಕೆಯ ಮನೆಗೆ ತಲುಪಿಸಬೇಕಿತ್ತು. ಆದರೆ ಆ್ಯಂಬುಲೆನ್ಸ್ ಚಾಲಕ ಆಕೆಯ ಮನೆಯವರಗೆ ಬಿಡದೆ ಅರ್ಧ ದಾರಿಗೆ ಇಳಿಸಿ ಹೋಗಿದ್ದಾನೆ. ಈ ಬಗ್ಗೆ ವೃದ್ಧೆಯ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಡಿಕೇರಿ ಕೊವಿಡ್ ಆಸ್ಪತ್ರೆಯಿಂದ 60 ವರ್ಷದ ಪೊನ್ನಮ್ಮ ಕಳೆದ 14 ದಿನ ಐಸಿಯುನಲ್ಲಿ ಚಿಕಿತ್ಸೆ ಪಡೆದು ನಿನ್ನೆ ಸಂಜೆ ಡಿಸ್ಚಾರ್ಜ್ ಆಗಿದ್ದರು. ಪೊನ್ನಮ್ಮ ಸೋಮವಾರಪೇಟೆ ತಾಲೂಕಿನ ಕಿರಗಂದೂರು ನಿವಾಸಿ. ಆದರೆ ಅಂಬ್ಯುಲೆನ್ಸ್ ಚಾಲಕ ಸಂಜೆ 5.30 ಗಂಟೆಗೆ ಐಗೂರು ಗ್ರಾಮಕ್ಕೆ ಬಿಟ್ಟು ಹೋಗಿದ್ದಾನೆ. ಐಗೂರಿನಿಂದ ಕಿರಗಂದೂರಿಗೆ 2 ಕಿಲೋಮೀಟರ್ ಇದೆ. ಹೀಗಾಗಿ ತನ್ನ ಮನೆಗೆ ಹೋಗಲು ವೃದ್ಧೆ ಪರದಾಟ ಪಟ್ಟಿದ್ದಾಳೆ. ಇದರಿಂದ ಚಾಲಕನ ಅಜಾಗರೂಕತೆಗೆ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಕೊವಿಡ್ ಆಸ್ಪತ್ರೆ ಮಾಧ್ಯಮ ವಕ್ತಾರ ಡಾ.ಕುಶ್ವಂತ್, ಈ ಬಗ್ಗೆ ನನಗೆ ಯಾವುದೇ ರೀತಿಯ ಮಾಹಿತಿ ಇಲ್ಲ. ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು. ಆಸ್ಪತ್ರೆ ನಿರ್ಲಕ್ಷ್ಯದಿಂದ ಕೊರೊನಾ ಹೆಚ್ಚಳ ಬಳ್ಳಾರಿ: ಆಸ್ಪತ್ರೆಯೊಳಗೆ ಸೋಂಕಿತರ ಜೊತೆಗೆ ಕುಟುಂಬಸ್ಥರೂ ಪ್ರವೇಶ ಮಾಡುವುತ್ತಿರುವುರಿಂದ ಕೊರೊನಾ ಸೋಂಕು ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿದೆ. ಕೊವಿಡ್ ಆಸ್ಪತ್ರೆಯಲ್ಲಿ ಜನ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಆದರೆ ಯಾರು ಈ ಬಗ್ಗೆ ಗಮನಹರಿಸುತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ

ಕೊಪ್ಪಳದಲ್ಲಿ ಸರಳ ವಿವಾಹ; ಮದುವೆಗೆ ಸಾಕ್ಷಿ ದೇವರು ಮತ್ತು ವರನ ಒಬ್ಬ ಬಂಧು ಮಾತ್ರ

ಕೋಲಾರದಲ್ಲಿ ಮತ್ತೆ ಕಾಣಿಸಿಕೊಂಡಿದೆ ಕಾಲುಬಾಯಿ ರೋಗ; ಜಾನುವಾರುಗಳ ರಕ್ಷಣೆ ಮಾಡುವಂತೆ ರೈತರ ಆಗ್ರಹ

(Families of Old age expressed outrage about ambulance driver at madikeri)

Published On - 11:54 am, Mon, 24 May 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ