AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಕೊವಿಡ್ ಸೋಂಕಿತೆ ವೃದ್ಧೆಯನ್ನು ಅರ್ಧ ದಾರಿಗೆ ಬಿಟ್ಟು ಹೋದ ಆಂಬ್ಯುಲೆನ್ಸ್ ಚಾಲಕ; ಕುಟುಂಬಸ್ಥರ ಆಕ್ರೋಶ

ಮಡಿಕೇರಿ ಕೊವಿಡ್ ಆಸ್ಪತ್ರೆಯಿಂದ 60 ವರ್ಷದ ಪೊನ್ನಮ್ಮ ಕಳೆದ 14 ದಿನ ಐಸಿಯುನಲ್ಲಿ ಚಿಕಿತ್ಸೆ ಪಡೆದು ನಿನ್ನೆ ಸಂಜೆ ಡಿಸ್ಚಾರ್ಜ್ ಆಗಿದ್ದರು. ಪೊನ್ನಮ್ಮ ಸೋಮವಾರಪೇಟೆ ತಾಲೂಕಿನ ಕಿರಗಂದೂರು ನಿವಾಸಿ. ಆದರೆ ಅಂಬ್ಯುಲೆನ್ಸ್ ಚಾಲಕ ಸಂಜೆ 5.30 ಗಂಟೆಗೆ ಐಗೂರು ಗ್ರಾಮಕ್ಕೆ ಬಿಟ್ಟು ಹೋಗಿದ್ದಾನೆ.

ಕೊಡಗು: ಕೊವಿಡ್ ಸೋಂಕಿತೆ ವೃದ್ಧೆಯನ್ನು ಅರ್ಧ ದಾರಿಗೆ ಬಿಟ್ಟು ಹೋದ ಆಂಬ್ಯುಲೆನ್ಸ್ ಚಾಲಕ; ಕುಟುಂಬಸ್ಥರ ಆಕ್ರೋಶ
ಕೊರೊನಾದಿಂದ ಗುಣಮುಖರಾದ ವೃದ್ಧೆ
sandhya thejappa
|

Updated on:May 24, 2021 | 11:56 AM

Share

ಮಡಿಕೇರಿ: ಕೊರೊನಾ ಸೋಂಕಿತ ವೃದ್ಧೆಯನ್ನು ಆಕೆಯ ಮನೆಗೆ ಬಿಡದೆ ಅರ್ಧ ದಾರಿಗೆ ನಿಲ್ಲಿಸಿ ಚಾಲಕ ಹಿಂತಿರುಗಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ನಡೆದಿದೆ. ಮಡಿಕೇರಿ ಕೊವಿಡ್ ಆಸ್ಪತ್ರೆಯಿಂದ ನಿನ್ನೆ ಸಂಜೆ ( ಮೇ 23) ಡಿಸ್ಚಾರ್ಜ್ ಆಗಿದ್ದರು. ಕುಟುಂಬಸ್ಥರಿಗೆ ಮಾಹಿತಿ ನೀಡದೆ ವೃದ್ಧೆ ಡಿಸ್ಚಾರ್ಜ್ ಆಗಿದ್ದರು. ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದ ವೃದ್ಧೆಯನ್ನು ಆಕೆಯ ಮನೆಗೆ ತಲುಪಿಸಬೇಕಿತ್ತು. ಆದರೆ ಆ್ಯಂಬುಲೆನ್ಸ್ ಚಾಲಕ ಆಕೆಯ ಮನೆಯವರಗೆ ಬಿಡದೆ ಅರ್ಧ ದಾರಿಗೆ ಇಳಿಸಿ ಹೋಗಿದ್ದಾನೆ. ಈ ಬಗ್ಗೆ ವೃದ್ಧೆಯ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಡಿಕೇರಿ ಕೊವಿಡ್ ಆಸ್ಪತ್ರೆಯಿಂದ 60 ವರ್ಷದ ಪೊನ್ನಮ್ಮ ಕಳೆದ 14 ದಿನ ಐಸಿಯುನಲ್ಲಿ ಚಿಕಿತ್ಸೆ ಪಡೆದು ನಿನ್ನೆ ಸಂಜೆ ಡಿಸ್ಚಾರ್ಜ್ ಆಗಿದ್ದರು. ಪೊನ್ನಮ್ಮ ಸೋಮವಾರಪೇಟೆ ತಾಲೂಕಿನ ಕಿರಗಂದೂರು ನಿವಾಸಿ. ಆದರೆ ಅಂಬ್ಯುಲೆನ್ಸ್ ಚಾಲಕ ಸಂಜೆ 5.30 ಗಂಟೆಗೆ ಐಗೂರು ಗ್ರಾಮಕ್ಕೆ ಬಿಟ್ಟು ಹೋಗಿದ್ದಾನೆ. ಐಗೂರಿನಿಂದ ಕಿರಗಂದೂರಿಗೆ 2 ಕಿಲೋಮೀಟರ್ ಇದೆ. ಹೀಗಾಗಿ ತನ್ನ ಮನೆಗೆ ಹೋಗಲು ವೃದ್ಧೆ ಪರದಾಟ ಪಟ್ಟಿದ್ದಾಳೆ. ಇದರಿಂದ ಚಾಲಕನ ಅಜಾಗರೂಕತೆಗೆ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಕೊವಿಡ್ ಆಸ್ಪತ್ರೆ ಮಾಧ್ಯಮ ವಕ್ತಾರ ಡಾ.ಕುಶ್ವಂತ್, ಈ ಬಗ್ಗೆ ನನಗೆ ಯಾವುದೇ ರೀತಿಯ ಮಾಹಿತಿ ಇಲ್ಲ. ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು. ಆಸ್ಪತ್ರೆ ನಿರ್ಲಕ್ಷ್ಯದಿಂದ ಕೊರೊನಾ ಹೆಚ್ಚಳ ಬಳ್ಳಾರಿ: ಆಸ್ಪತ್ರೆಯೊಳಗೆ ಸೋಂಕಿತರ ಜೊತೆಗೆ ಕುಟುಂಬಸ್ಥರೂ ಪ್ರವೇಶ ಮಾಡುವುತ್ತಿರುವುರಿಂದ ಕೊರೊನಾ ಸೋಂಕು ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿದೆ. ಕೊವಿಡ್ ಆಸ್ಪತ್ರೆಯಲ್ಲಿ ಜನ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಆದರೆ ಯಾರು ಈ ಬಗ್ಗೆ ಗಮನಹರಿಸುತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ

ಕೊಪ್ಪಳದಲ್ಲಿ ಸರಳ ವಿವಾಹ; ಮದುವೆಗೆ ಸಾಕ್ಷಿ ದೇವರು ಮತ್ತು ವರನ ಒಬ್ಬ ಬಂಧು ಮಾತ್ರ

ಕೋಲಾರದಲ್ಲಿ ಮತ್ತೆ ಕಾಣಿಸಿಕೊಂಡಿದೆ ಕಾಲುಬಾಯಿ ರೋಗ; ಜಾನುವಾರುಗಳ ರಕ್ಷಣೆ ಮಾಡುವಂತೆ ರೈತರ ಆಗ್ರಹ

(Families of Old age expressed outrage about ambulance driver at madikeri)

Published On - 11:54 am, Mon, 24 May 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ