AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆತ್ತವರೊಂದಿಗೆ ಜೈಲು ಸೇರಿದ್ದ 4 ವರ್ಷದ ಬಾಲಕಿ ಸಾವು; ಪೊಲೀಸರ ವಿರುದ್ಧ ಕುಟುಂಬದ ಪ್ರತಿಭಟನೆ

ಪೊಲೀಸರು ನಡೆಸಿದ ಹಲ್ಲೆಯಿಂದ 4 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಕಲಬುರಗಿ ಜಿಲ್ಲಾಸ್ಪತ್ರೆ ಎದುರು ಬಾಲಕಿಯ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

ಹೆತ್ತವರೊಂದಿಗೆ ಜೈಲು ಸೇರಿದ್ದ 4 ವರ್ಷದ ಬಾಲಕಿ ಸಾವು; ಪೊಲೀಸರ ವಿರುದ್ಧ ಕುಟುಂಬದ ಪ್ರತಿಭಟನೆ
ಕಲಬುರಗಿಯಲ್ಲಿ ಮಗು ಶವವಿಟ್ಟು ಪ್ರತಿಭಟನೆ ನಡೆಸುತ್ತಿರುವ ಕುಟುಂಬದ ಸದಸ್ಯರು
ಪೃಥ್ವಿಶಂಕರ
|

Updated on:Jan 03, 2021 | 6:13 PM

Share

ಕಲಬುರಗಿ: ಪೊಲೀಸರು ನಡೆಸಿದ ಹಲ್ಲೆಯಿಂದ 4 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಕಲಬುರಗಿ ಜಿಲ್ಲಾಸ್ಪತ್ರೆ ಎದುರು ಬಾಲಕಿಯ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

ಜಿಲ್ಲೆಯ ಜೇವರ್ಗಿ ತಾಲೂಕಿನ ಜೈನಾಪುರದಲ್ಲಿ ಗ್ರಾ.ಪಂ. ಚುನಾವಣೆ ಸಂಬಂಧ ರಾಜು ತಳವಾರ ಹಾಗೂ ಸಂತೋಷ ತಳವಾರ ಕುಟುಂಬದ ನಡುವೆ ಗಲಾಟೆಯಾಗಿತ್ತು. ಗಲಾಟೆಯಲ್ಲಿ ಜೇವರ್ಗಿ ಪೊಲೀಸರು ಸಂತೋಷ್ ಕುಟುಂಬದ ಹತ್ತು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದರು. ಡಿ.31 ರಂದು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದರು.

ಸಂತೋಷ್ ಸಹೋದರ ರವಿ ಮತ್ತು ಆತನ ಪತ್ನಿ ಕೂಡಾ ಜೈಲು ಪಾಲಾಗಿದ್ದರು. ಹೀಗಾಗಿ ಹೆತ್ತವರ ಜೊತೆ ಜೈಲಿಗೆ ಹೋಗಿದ್ದ ನಾಲ್ಕು ವರ್ಷದ ಬಾಲಕಿ ಭಾರತಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಪೊಲೀಸರು ತಮ್ಮ ಮೇಲೆ ಮತ್ತು ಬಾಲಕಿ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆಯಿಂದಲೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ಹೆತ್ತವರು ಆರೋಪಿಸಿ ಕಲಬುರಗಿ ನಗರದ ಜಿಲ್ಲಾ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಜೇವರ್ಗಿ ಪೊಲೀಸರ ವಿರುದ್ಧ ಕ್ರಮಕ್ಕೆ ವಿವಿಧ ಮುಖಂಡರು ಆಗ್ರಹ ಮಾಡುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಬಾಗಿಯಾದ ಶಾಸಕ ಡಾ.ಅಜಯಸಿಂಗ್ ಜೇವರ್ಗಿ PSI ಮಂಜುನಾಥ ಹೂಗಾರ್ ಅವರನ್ನು ಅಮಾನತು ಮಾಡುವಂತೆ ಆಗ್ರಹ ಮಾಡಿ ಕಳೆದ ನಾಲ್ಕು ಗಂಟೆಯಿಂದ ರಸ್ತೆ ಮೇಲೆ ಕುಳಿತು ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ‌ ಶಾಸಕ ಡಾ.ಅಜಯಸಿಂಗ್ ಕೂಡಾ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದಾರೆ

ಗ್ರಾಮ ಪಂಚಾಯತಿ ಗಲಾಟೆ: ಹೆತ್ತವರ ಜೊತೆ ಜೈಲು‌ ಸೇರಿದ್ದ 3 ವರ್ಷದ ಬಾಲಕಿ ಸಾವು

Published On - 6:12 pm, Sun, 3 January 21

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ