AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ 2 ಲಕ್ಷ ಮೌಲ್ಯದ ಮಾಂಗಲ್ಯಸರ ಮಾಯ; ಜೀವವೂ ಮಾಯ: ಕಣ್ಣೀರಿಟ್ಟ ಕುಟುಂಬಸ್ಥರು

3 ದಿನದ ಹಿಂದೆ ಕೊವಿಡ್ ವಾರ್ಡ್‌ಗೆ ದಾಖಲಾಗಿದ್ದ ಇಂಗಳದಾಳ್ ಗ್ರಾಮದ ಸುಮಾ(46) ಕೊರಳಿನಲ್ಲಿ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 4.5ಗ್ರಾಂನ ಮಾಂಗಲ್ಯಸರ ಇತ್ತಂತೆ. ಕೊವಿಡ್ ವಾರ್ಡ್ಗೆ ದಾಖಲಾಗುವಾಗ ಮಾಂಗಲ್ಯಸರ ಕತ್ತಲ್ಲೇ ಇತ್ತಂತೆ

ಕೊವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ 2 ಲಕ್ಷ ಮೌಲ್ಯದ ಮಾಂಗಲ್ಯಸರ ಮಾಯ; ಜೀವವೂ ಮಾಯ: ಕಣ್ಣೀರಿಟ್ಟ ಕುಟುಂಬಸ್ಥರು
ಮಹಿಳೆಯನ್ನು ಕಳೆದುಕೊಂಡ ಕುಟುಂಬಸ್ಥರು
ಆಯೇಷಾ ಬಾನು
|

Updated on: May 10, 2021 | 12:27 PM

Share

ಚಿತ್ರದುರ್ಗ: ಜಿಲ್ಲೆಯ ಬಸವೇಶ್ವರ ಮೆಡಿಕಲ್ ಕಾಲೇಜು & ಆಸ್ಪತ್ರೆಯಲ್ಲಿ ಕೊವಿಡ್ ಐಸಿಯು ವಾರ್ಡ್ಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದು ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿದೆ. ಘಟನೆ ಬಳಿಕ ಕುಟುಂಬಸ್ಥರು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಇತ್ತ ಮಹಿಳೆಯನ್ನೂ ಉಳಿಸಿಕೊಡದೆ, ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಮಾಂಗಲ್ಯಸರವನ್ನು ಆಸ್ಪತ್ರೆ ಸಿಬ್ಬಂದಿ ಕದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

3 ದಿನದ ಹಿಂದೆ ಕೊವಿಡ್ ವಾರ್ಡ್‌ಗೆ ದಾಖಲಾಗಿದ್ದ ಇಂಗಳದಾಳ್ ಗ್ರಾಮದ ಸುಮಾ(46) ಕೊರಳಿನಲ್ಲಿ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 4.5ಗ್ರಾಂನ ಮಾಂಗಲ್ಯಸರ ಇತ್ತಂತೆ. ಕೊವಿಡ್ ವಾರ್ಡ್ಗೆ ದಾಖಲಾಗುವಾಗ ಮಾಂಗಲ್ಯಸರ ಕತ್ತಲ್ಲೇ ಇತ್ತಂತೆ. ಆದ್ರೆ ಚಿಕಿತ್ಸೆ ಫಲಿಸದೆ ಸುಮಾ ಮೃತಪಟ್ಟಿದ್ದಾರೆ. ಆಗ ದೇಹವನ್ನು ಕುಟುಂಬಸ್ಥರಿಗೆ ನೀಡಿದ್ದಾಗ ಸರ ನಾಪತ್ತೆಯಾಗಿದೆ. ಹೀಗಾಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಮೃತಳ ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ಸೂಕ್ತ ಚಿಕಿತ್ಸೆ ನೀಡಿ‌ ಜೀವ‌ ಉಳಿಸುವ ಕೆಲಸವೂ ಮಾಡಿಲ್ಲ. ಚಿನ್ನದ ಸರವೂ ಕಳ್ಳತನವಾಗಿದೆ. ಈಗ ಆಸ್ಪತ್ರೆ ಬಿಲ್ ಕಟ್ಟುವುದೂ ತಪ್ಪಿಲ್ಲ. ಐಸಿಯು ವಾರ್ಡ್ನಲ್ಲೇ ಚಿನ್ನದ ಸರ ಕಳ್ಳತನ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಎಂಎಲ್​ಸಿ ಬೋರ್ಡ್ ಅಳವಡಿಸಿದ್ದ ಫಾರ್ಚುನರ್ ಕಾರು ಸೀಜ್; ಪೊಲೀಸರಿಗೆ ಫೋನ್ನಲ್ಲೇ ಸೂಚನೆ ಕೊಟ್ಟ ವ್ಯಕ್ತಿ!

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್