AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟ್ಟು ಕುಟುಂಬದ ಆಸ್ತಿಯಲ್ಲಿ ಭಾಗ ಕೇಳುವಾಗ ಮಗಳು ವರದಕ್ಷಿಣೆಯಾಗಿ ಪಡೆದ ಆಸ್ತಿಗೆ ವಿನಾಯಿತಿ ಕೇಳುವಂತಿಲ್ಲ

ಒಟ್ಟು ಕುಟುಂಬದ ಆಸ್ತಿಯಲ್ಲಿ ಪಾಲು ಕೋರಿ ಮಗಳು ಕೋರ್ಟ್ ಗೆ ಅರ್ಜಿ ಸಲ್ಲಿಸುವಾಗ ಮದುವೆಯ ಸಮಯದಲ್ಲಿ ವರದಕ್ಷಿಣೆ ಅಥವಾ ಕೊಡುಗೆಯಾಗಿ ಕೊಟ್ಟ ಆಸ್ತಿಗೆ ವಿನಾಯಿತಿ ಕೇಳುವಂತಿಲ್ಲ ಎಂಬ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಒಟ್ಟು ಕುಟುಂಬದ ಆಸ್ತಿಯಲ್ಲಿ ಭಾಗ ಕೇಳುವಾಗ ಮಗಳು ವರದಕ್ಷಿಣೆಯಾಗಿ ಪಡೆದ ಆಸ್ತಿಗೆ ವಿನಾಯಿತಿ ಕೇಳುವಂತಿಲ್ಲ
ಕರ್ನಾಟಕ ಹೈಕೋರ್ಟ್
TV9 Web
| Updated By: ganapathi bhat|

Updated on: Feb 25, 2022 | 9:29 PM

Share

ಮದುವೆಯಾದಾಗಲೂ ಆಸ್ತಿ ಪಡೆದು ನಂತರವೂ ತವರಿನ ಆಸ್ತಿಗೆ ಆಸೆ ಪಡುವ ಮಹಿಳೆಯರಿಗೆ ಸ್ವಲ್ಪ ನಿರಾಸೆ ಕಾದಿದೆ. ಒಟ್ಟು ಕುಟುಂಬದ ಆಸ್ತಿಯಲ್ಲಿ ಪಾಲು ಕೋರಿ ಮಗಳು ಕೋರ್ಟ್ ಗೆ ಅರ್ಜಿ ಸಲ್ಲಿಸುವಾಗ ಮದುವೆಯ ಸಮಯದಲ್ಲಿ ವರದಕ್ಷಿಣೆ ಅಥವಾ ಕೊಡುಗೆಯಾಗಿ ಕೊಟ್ಟ ಆಸ್ತಿಗೆ ವಿನಾಯಿತಿ ಕೇಳುವಂತಿಲ್ಲ ಎಂಬ ಬಗ್ಗೆ ಹೈಕೋರ್ಟ್ (High Court) ಮಹತ್ವದ ತೀರ್ಪು ನೀಡಿದೆ. ಹೇಮಲತಾ ಎಂಬ ಮಹಿಳೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಕೋರಿ ಸಹೋದರರ ವಿರುದ್ಧ ಸಿವಿಲ್ ಕೋರ್ಟ್ ನಲ್ಲಿ ದಾವೆ ಹೂಡಿದ್ದರು. ಆದರೆ ದಾವೆಯಲ್ಲಿ ತಾನು ಮದುವೆ ಸಮಯದಲ್ಲಿ ಪಡೆದ ಆಸ್ತಿಯನ್ನು ದಾವಾ ಆಸ್ತಿಯಾಗಿ ದಾಖಲಿಸಿರಲಿಲ್ಲ. ಬದಲಿಗೆ ಉಳಿದ ಆಸ್ತಿಯಲ್ಲಿ ಸಮಪಾಲು ನೀಡುವಂತೆ ಕೋರ್ಟ್ ನಲ್ಲಿ ಪಾರ್ಟಿಷನ್ ಕೇಸ್ ದಾಖಲಿಸಿದ್ದರು.

ಈ ದಾವೆಯಲ್ಲಿ ಪ್ರತಿವಾದಿಯಾಗಿದ್ದ ಮಹಿಳೆಯ ಸಹೋದರ ಅರ್ಜಿ ಸಲ್ಲಿಸಿ, ವಿವಾಹದ ಸಮಯದಲ್ಲಿ ಸಹೋದರಿಗೆ ನೀಡಿದ ಒಟ್ಟು ಕುಟುಂಬದ ಆಸ್ತಿಯನ್ನೂ ದಾವೆಯ ಸ್ವತ್ತಾಗಿ ಪರಿಗಣಿಸಬೇಕೆಂದು ಅರ್ಜಿ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯ ಈ ಅರ್ಜಿಯನ್ನು ಅಂಗೀಕರಿಸಿ, ವಿವಾಹದ ಸಂದರ್ಭದಲ್ಲಿ ಮಗಳಿಗೆ ನೀಡಿದ್ದ ಸ್ವತ್ತನ್ನೂ ಆಸ್ತಿ ವಿಭಾಗದ ದಾವೆಯಲ್ಲಿ ಸೇರಿಸಬೇಕೆಂದು ಆದೇಶ ನೀಡಿತ್ತು.

ಇದನ್ನು ಪ್ರಶ್ನಿಸಿ ಹೇಮಲತಾ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣಾ ನ್ಯಾಯಾಲಯದ ಆದೇಶ ಎತ್ತಿಹಿಡಿದಿರುವ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಮಹತ್ವದ ತೀರ್ಪು ನೀಡಿದ್ದಾರೆ. ಒಟ್ಟು ಕುಟುಂಬದ ಆಸ್ತಿಯನ್ನು ವರದಕ್ಷಿಣೆ ಅಥವಾ ಕೊಡುಗೆಯಾಗಿ ಸ್ವೀಕರಿಸಿದ ಮಗಳು ನಂತರ ಉಳಿದ ಆಸ್ತಿಯಲ್ಲಿ ಭಾಗ ಕೇಳಿದರೆ, ತಾನು ಸ್ವೀಕರಿಸಿದ ಆಸ್ತಿಯನ್ನೂ ವಿಭಾಗ ದಾವೆಯ ಸ್ವತ್ತಾಗಿ ಪರಿಗಣಿಸಬೇಕೆಂದು ತೀರ್ಪು ನೀಡಿದ್ದಾರೆ. ತಾನು ಕೊಡುಗೆಯಾಗಿ ಸ್ವೀಕರಿಸಿದ ಆಸ್ತಿಯನ್ನೂ ಸೇರಿಸಿ ಒಟ್ಟು ಕುಟುಂಬದ ಆಸ್ತಿಯಲ್ಲಿ ಭಾಗ ಕೇಳಬಹುದೆಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:

ರಷ್ಯಾದ ಅಧ್ಯಕ್ಷ ಪುಟಿನ್​ಗೆ ಕೂಡಲೇ ಯುದ್ಧವಿರಾಮ ಘೋಷಿಸುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ

ಶಿವಮೊಗ್ಗದಲ್ಲಿ ಫೆ 28ರವರೆಗೆ ನಿಷೇಧಾಜ್ಞೆ ವಿಸ್ತರಣೆ: ಜಿಲ್ಲಾಡಳಿತ ಘೋಷಣೆ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ