AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮನನ್ನು ಮದುವೆಯಾಗಲು ಒಪ್ಪದ ಪದವೀಧರ ಯುವತಿಯರು; ಇಬ್ಬರ ಮೇಲೂ ಮಚ್ಚಿನಿಂದ ಹಲ್ಲೆ ಮಾಡಿದ ಯುವಕ

ತಮ್ಮನನ್ನ ಮದುವೆಯಾಗಲು ನಿರಾಕರಿಸಿದಕ್ಕೆ ಯುವತಿಯರ ಮೇಲೆ ಸಂಬಂಧಿಕರೇ ಹಲ್ಲೆ ನಡೆಸಿದ್ದಾರೆ. ಸದ್ಯ ಇಬ್ಬರು ಯುವತಿಗಳ ಮೇಲೆ ಹಲ್ಲೆ ಮಾಡಿದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ತಮ್ಮನನ್ನು ಮದುವೆಯಾಗಲು ಒಪ್ಪದ ಪದವೀಧರ ಯುವತಿಯರು; ಇಬ್ಬರ ಮೇಲೂ ಮಚ್ಚಿನಿಂದ ಹಲ್ಲೆ ಮಾಡಿದ ಯುವಕ
ಯೋಗಿತಾ ಹಾಗೂ ಪುಷ್ಪಿತಾ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Apr 14, 2021 | 1:13 PM

Share

ಹಾಸನ: ತನ್ನ ತಮ್ಮನನ್ನು ಮದುವೆಯಾಗಲು ಒಪ್ಪದಿದ್ದಕ್ಕೆ ಇಬ್ಬರು ಯುವತಿಯರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚಾವು ಗ್ರಾಮದಲ್ಲಿ ನಡೆದಿದೆ. ತಮ್ಮನನ್ನ ಮದುವೆಯಾಗಲು ನಿರಾಕರಿಸಿದಕ್ಕೆ ಯುವತಿಯರ ಮೇಲೆ ಸಂಬಂಧಿಕರೇ ಹಲ್ಲೆ ನಡೆಸಿದ್ದಾರೆ. ಸದ್ಯ ಇಬ್ಬರು ಯುವತಿಯರ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.

ಏಪ್ರಿಲ್ 12ರಂದು ದೊಡ್ಡಕುಂಚಾವು ಗ್ರಾಮದಲ್ಲಿ ಯೋಗಿತಾ ಹಾಗೂ ಪುಷ್ಪಿತಾ ಎಂಬ ಇಬ್ಬರು ಸಹೋದರಿಯರ ಮೇಲೆ ನಾಗರಾಜ್​ ಹಲ್ಲೆ ನಡೆಸಿದ್ದಾನೆ. ಮದುವೆ ಮಾತುಕತೆಗೆಂದು ತಾಯಿ ಹಾಗೂ ಅಜ್ಜಿ ಜೊತೆ ಸೋದರ ಮಾವನ ಮನೆಗೆ ಬಂದಿದ್ದ ನಾಗರಾಜ್, ತನ್ನ ಸಹೋದರನಿಗೆ ಯೋಗಿತಾಳನ್ನ ಮದುವೆ ಮಾಡಿಕೊಡಲು ಪ್ರಸ್ತಾಪ ಮಾಡಿದ್ದ. ಬಿಎಸ್ಸಿ ಓದಿಕೊಂಡಿರೋ ನಾನು ಹಾಗು ನನ್ನ ತಂಗಿ ಇಬ್ಬರ ಪೈಕಿ ಯಾರೂ ನಿನ್ನ ತಮ್ಮನ ಮದುವೆ ಆಗಲ್ಲ ಎಂದು ಇಬ್ಬರೂ ಸಹೋದರಿಯರು ನಾಗರಾಜ್​ನ ಪ್ರಸ್ತಾಪ‌ವನ್ನು ತಿರಸ್ಕರಿಸಿದ್ದರು. ಮದುವೆಯಾಗಲು ಒಪ್ಪದ ಕಾರಣ ತಾಯಿ ಹಾಗು ಅಜ್ಜಿ ಜೊತೆ ಸೇರಿ ಮಚ್ಚಿನಿಂದ ಕೊಚ್ಚಿ‌ ಕೊಲೆ ಯತ್ನಕ್ಕೆ ನಾಗರಾಜ್ ಮುಂದಾಗಿದ್ದಾನೆ.

ಸದ್ಯ ಘಟನೆ ಬಳಿಕ ಗಾಯಾಳುಗಳಾದ ಯೋಗಿತಾ ಹಾಗೂ ಪುಷ್ಪಿತಾಳಿಗೆ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲ್ಲೆ ಆರೋಪಿ ನಾಗರಾಜ್, ಹಲ್ಲೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಅಜ್ಜಿ ಪುಟ್ಟಮ್ಮ, ಸೋದರತ್ತೆ ಅಕ್ಕಮ್ಮ ಸೇರಿ ಘಟನೆ ಸಂಬಂಧ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಹೊಳೆನರಸೀಪುರ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

(Family Attack on Two Girls For Reject To Marriage Brother in Hassan)

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಾಲಾಪರಾಧಿಯಿಂದ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ