AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಭಯಪಟ್ಟು ಗ್ರಾಮ ತೊರೆದ್ರು.. ಜಮೀನಿನಲ್ಲಿ ಗುಡಿಸಲು ಕಟ್ಟಿ ನೆಮ್ಮದಿಯ ಜೀವನ

ಇತ್ತೀಚೆಗೆ ಗ್ರಾಮದಲ್ಲಿ ತಮ್ಮ ಮನೆಯ ಸಮೀಪವೇ ಐದಾರು‌ ಜನರಿಗೆ ಕೊರೊನಾ ಸೋಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮದಲ್ಲಿದ್ದರೆ ತಮಗೂ ಕೊರೊನಾ ಸೋಂಕು ತಗುಲಬಹುದು ಎಂದು ಪಾಲಹಳ್ಳಿ ಗ್ರಾಮದ ಕುಟುಂಬವೊಂದು ತಮ್ಮ ಜಮೀನಿನಲ್ಲಿ ನೆಲೆಸಿದ್ದಾರೆ. ಕುಮಾರ್ ಎಂಬುವವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕರೆದುಕೊಂಡು ಊರಬಿಟ್ಟು ಜಮೀನು ಸೇರಿದ್ದಾರೆ.

ಕೊರೊನಾಗೆ ಭಯಪಟ್ಟು ಗ್ರಾಮ ತೊರೆದ್ರು.. ಜಮೀನಿನಲ್ಲಿ ಗುಡಿಸಲು ಕಟ್ಟಿ ನೆಮ್ಮದಿಯ ಜೀವನ
ಗ್ರಾಮ ತೊರೆದ್ರು. ಜಮೀನಿನಲ್ಲಿ ಗುಡಿಸಲು ಕಟ್ಟಿ ಜೀವನ ಸಾಗಿಸುತ್ತಿರುವ ಕುಟುಂಬ
TV9 Web
| Updated By: ಆಯೇಷಾ ಬಾನು|

Updated on:Jun 09, 2021 | 3:19 PM

Share

ಮಂಡ್ಯ: ಕೊರೊನಾ ಸೋಂಕಿಗೆ ಹೆದರಿ ಕುಟುಂಬವೊಂದು ಗ್ರಾಮ ತೊರೆದಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ನಡೆದಿದೆ. ಕೊರೊನಾಗೆ ಹೆದರಿ ಕುಟುಂಬ ಗ್ರಾಮ ತೊರೆದು ತಮ್ಮ ಜಮೀನಿನಲ್ಲಿ ಜೀವನ ಸಾಗಿಸುತ್ತಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಕುಮಾರ್ ಮನೆಯ ಸಮೀಪದ ನಾಲ್ಕೈದು ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ಇದರಿಂದ ಹೆದರಿದ ಕುಮಾರ್ ಊರಲ್ಲೇ ಇದ್ದರೆ ತಮಗೂ ಕೊರೊನಾ ತಗುಲಬಹುದು ಎಂದುಕೊಂಡು ಜಮೀನಿನ ಬಳಿಯಲ್ಲಿ ಗುಡಿಸಲು ಕಟ್ಟಿಕೊಂಡು ವಾಸ ಮಾಡಲಾರಂಭಿಸಿದ್ದಾರೆ. ಕುಮಾರ್ ಎಂಬುವವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕರೆದುಕೊಂಡು ಊರಬಿಟ್ಟು ಜಮೀನು ಸೇರಿದ್ದಾರೆ. mnd farm live

ಕುಮಾರ್​ಗೆ ಊರಲ್ಲಿ ಸ್ವಂತ ಮನೆ ಇದ್ದು ಆತ ಊರು ಬಿಟ್ಟು ಕಳೆದ 20 ದಿನಗಳಿಂದ ಜಮೀನಿನಲ್ಲಿ ವಾಸ ಮಾಡ್ತಿರೋದ್ರಿಂದ ಗ್ರಾಮದ ಜನರು ಆತನ ಬಳಿಗೆ ತೆರಳಿ ಧೈರ್ಯ ತುಂಬಿ ಊರಿಗೆ ಬರುವಂತೆ ಮನವೊಲಿಸಿದ್ದರಾದರೂ ಕುಮಾರ್ ಊರಿಗೆ ಬರಲು ಒಪ್ಪಿಲ್ಲ.

ಈ ಬಗ್ಗೆ ಮಾತನಾಡಿರುವ ಕುಮಾರ್, ನಾನು ಅರ್ಧ ಎಕರೆ ಜಮೀನು ಇರುವ ಚಿಕ್ಕ ರೈತ, ಕೊರೊನಾ ವೈರಸ್ ಅಂಟಿಕೊಂಡರೆ ಜೀವ ಉಳಿಸಿಕೊಳ್ಳಲು ನನ್ನ ಬಳಿ ಹಣ ಇಲ್ಲ. ಆರು ಮತ್ತು ಏಳೂವರೆ ವರ್ಷದ ಇಬ್ಬರು ಚಿಕ್ಕ ಮಕ್ಕಳಿದ್ದಾರೆ. ಮಕ್ಕಳು, ಹೆಂಡತಿ ಮತ್ತು ನನ್ನ ಕ್ಷೇಮದ ದೃಷ್ಟಿಯಿಂದ ಊರು ಬಿಟ್ಟು ಬಂದಿದ್ದೇನೆ. ಕೊರೊನಾ ವೈರಸ್ ಹಾವಳಿ ಸಂಪೂರ್ಣ ನಿಲ್ಲುವವರೆಗೆ ಊರಿಗೆ ಮರಳುವುದಿಲ್ಲ ಎಂದಿದ್ದಾರೆ.

mnd farm live

ಇದನ್ನೂ ಓದಿ: ಬೆಲೆ ಕುಸಿತದಿಂದಾಗಿ ಕಂಗಾಲಾದ ರೈತರು; ತೆಂಗು ಬೆಳೆಗಾರರು ಮತ್ತು ವ್ಯಾಪಾರಸ್ಥರಲ್ಲಿ ಹೆಚ್ಚಿದ ಆತಂಕ

Published On - 3:16 pm, Wed, 9 June 21

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ