AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಮ್ಸ್ ಆಸ್ಪತ್ರೆಯ ಮತ್ತೊಂದು ಮಹಾ ಎಡವಟ್ಟು, ಸೋಂಕಿತರ ಆರೈಕೆಗೆ ಕುಟುಂಬಸ್ಥರಿಗೆ ಅವಕಾಶ

ಮಹಾಮಾರಿ ಕೊರೊನಾ ತಡೆಗಟ್ಟಲು ಸರ್ಕಾರ ನಾನಾ ಸರ್ಕಸ್ ಮಾಡ್ತಿದೆ. ಆದರೆ ಆಸ್ಪತ್ರೆಗಳೇ ಈ ಬಗ್ಗೆ ನಿರ್ಲಕ್ಷ್ಯ ತೋರಿಸುತ್ತಿವೆ. ಕುಂದಾನಗರಿ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರನ್ನು ನೋಡಿಕೊಳ್ಳಲು ಹಾಗೂ ಆರೈಕೆ ಮಾಡಲು ಕುಟುಂಬಸ್ಥರೇ ಮುಂದಾಗಿದ್ದರೆ.

ಬಿಮ್ಸ್ ಆಸ್ಪತ್ರೆಯ ಮತ್ತೊಂದು ಮಹಾ ಎಡವಟ್ಟು, ಸೋಂಕಿತರ ಆರೈಕೆಗೆ ಕುಟುಂಬಸ್ಥರಿಗೆ ಅವಕಾಶ
ಸೋಂಕಿತರ ಆರೈಕೆಗೆ ಕುಟುಂಬಸ್ಥರಿಗೆ ಅವಕಾಶ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 30, 2021 | 1:54 PM

Share

ಬೆಳಗಾವಿ: ಕೊರೊನಾ ವಿಪತ್ತಿನ ನಡುವೆ ಆಸ್ಪತ್ರೆಗಳ ನಿರ್ಲಕ್ಷ್ಯ ಹೆಚ್ಚಾಗಿದೆ. ಸೋಂಕಿತರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಕೊಡದಿರುವುದು, ಅವರಿಗೆ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂಬ ಅನೇಕ ಆರೋಪಗಳು ಕೇಳಿಬರುತ್ತಿವೆ. ಇತ್ತೀಚೆಗಷ್ಟೆ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯದ್ದೇ ಎಂದು ಕೇಳಲಾದ ವಿಡಿಯೋ ಒಂದನ್ನು ಹರಿಬಿಟ್ಟಿದ್ದರು. ಇಬ್ಬರು ರೋಗಿಗಳನ್ನ ಒಂದೇ ಬೆಡ್‌ನಲ್ಲಿ ಮಲಗಿಸಿ ಚಿಕಿತ್ಸೆ ನೀಡ್ತಿರುವ ವಿಡಿಯೋ ವೈರಲ್ ಆಗಿತ್ತು. ಈಗ ಅದೇ ರೀತಿಯಾದಂತಹ ಮತ್ತೊಂದು ಮಹಾ ಎಡವಟ್ಟು ಬಯಲಾಗಿದೆ.

ಮಹಾಮಾರಿ ಕೊರೊನಾ ತಡೆಗಟ್ಟಲು ಸರ್ಕಾರ ನಾನಾ ಸರ್ಕಸ್ ಮಾಡ್ತಿದೆ. ಆದರೆ ಆಸ್ಪತ್ರೆಗಳೇ ಈ ಬಗ್ಗೆ ನಿರ್ಲಕ್ಷ್ಯ ತೋರಿಸುತ್ತಿವೆ. ಕುಂದಾನಗರಿ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರನ್ನು ನೋಡಿಕೊಳ್ಳಲು ಹಾಗೂ ಆರೈಕೆ ಮಾಡಲು ಕುಟುಂಬಸ್ಥರೇ ಮುಂದಾಗಿದ್ದರೆ. ಬಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಆರೈಕೆಗೆ ಕುಟುಂಬಸ್ಥರಿಗೆ ಅವಕಾಶ ನೀಡಲಾಗಿದೆ. ಬಿಮ್ಸ್ ಆಸ್ಪತ್ರೆ ಮೆಡಿಕಲ್ ವಾರ್ಡ್‌ನಲ್ಲಿ ಸೋಂಕಿತರ ಸಂಬಂಧಿಕರು ನಿಂತು ಮಾತಾಡುವ ವಿಡಿಯೋ ವೈರಲ್ ಆಗಿದೆ.

ಕೊರೊನಾ ಸೋಂಕಿತರ ಆರೈಕೆ ಬಳಿಕ ಸಂಬಂಧಿಕರು ಹೊರಬಂದು ಬಿಂದಾಸ್ ಆಗಿ ಓಡಾಡುತ್ತಿದ್ದಾರೆ. ಇದರಿಂದ ಮತ್ತಷ್ಟು ಸೋಂಕು ಹರಡು ಆತಂಕ ಶುರುವಾಗಿದೆ. ಸಾಮಾನ್ಯವಾಗಿ ಕೊರೊನಾ ಸೋಂಕು ತಗುಲಿದ ವ್ಯಕ್ತಿಯ ಸಂಪರ್ಕಕ್ಕೆ ಹೋಗುವುದರಿಂದ ಸೋಂಕು ತಮಗೂ ತಗುಲುವ ಭಯವಿರುತ್ತೆ. ಆದ್ರೆ ಈ ಆಸ್ಪತ್ರೆಯಲ್ಲಿ ಸೋಂಕಿತರ ವಾರ್ಡ್ನೊಳಗೆ ಹೋಗಲು ಸಂಬಂಧಿಕರಿಗೆ ಅವಕಾಶ ನೀಡಲಾಗಿದೆ. ಅಲ್ಲದೆ ಅಟೆಂಡರ್ಗಳು ಸಹ ಸೋಂಕಿತರ ಆರೈಕೆ ಬಳಿಕ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಇದರಿಂದ ಈಗ ಮತ್ತಷ್ಟು ಆತಂಕ ಎದುರಾಗಿದ್ದು ಇವರ ಈ ಬೇಜವಾಬ್ದಾರಿತನಕ್ಕೆ ಮುಂದೆ ದೊಡ್ಡ ಅನಾವುತವಾದರೂ ಆಶ್ಚರ್ಯವಿಲ್ಲ.

ಇದನ್ನೂ ಓದಿ: ಖಾಕಿಗೆ ಶುರುವಾಗಿದೆ ಕೊವಿಡ್ ಕಂಟಕ; ಬಾಗಲಕೋಟೆ ಜಿಲ್ಲೆಯ 26 ಪೊಲೀಸರಿಗೆ ಕೊರೊನಾ ಧೃಡ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?