AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಮ್ಸ್ ಆಸ್ಪತ್ರೆಯ ಮತ್ತೊಂದು ಮಹಾ ಎಡವಟ್ಟು, ಸೋಂಕಿತರ ಆರೈಕೆಗೆ ಕುಟುಂಬಸ್ಥರಿಗೆ ಅವಕಾಶ

ಮಹಾಮಾರಿ ಕೊರೊನಾ ತಡೆಗಟ್ಟಲು ಸರ್ಕಾರ ನಾನಾ ಸರ್ಕಸ್ ಮಾಡ್ತಿದೆ. ಆದರೆ ಆಸ್ಪತ್ರೆಗಳೇ ಈ ಬಗ್ಗೆ ನಿರ್ಲಕ್ಷ್ಯ ತೋರಿಸುತ್ತಿವೆ. ಕುಂದಾನಗರಿ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರನ್ನು ನೋಡಿಕೊಳ್ಳಲು ಹಾಗೂ ಆರೈಕೆ ಮಾಡಲು ಕುಟುಂಬಸ್ಥರೇ ಮುಂದಾಗಿದ್ದರೆ.

ಬಿಮ್ಸ್ ಆಸ್ಪತ್ರೆಯ ಮತ್ತೊಂದು ಮಹಾ ಎಡವಟ್ಟು, ಸೋಂಕಿತರ ಆರೈಕೆಗೆ ಕುಟುಂಬಸ್ಥರಿಗೆ ಅವಕಾಶ
ಸೋಂಕಿತರ ಆರೈಕೆಗೆ ಕುಟುಂಬಸ್ಥರಿಗೆ ಅವಕಾಶ
ಆಯೇಷಾ ಬಾನು
|

Updated on: Apr 30, 2021 | 1:54 PM

Share

ಬೆಳಗಾವಿ: ಕೊರೊನಾ ವಿಪತ್ತಿನ ನಡುವೆ ಆಸ್ಪತ್ರೆಗಳ ನಿರ್ಲಕ್ಷ್ಯ ಹೆಚ್ಚಾಗಿದೆ. ಸೋಂಕಿತರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಕೊಡದಿರುವುದು, ಅವರಿಗೆ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂಬ ಅನೇಕ ಆರೋಪಗಳು ಕೇಳಿಬರುತ್ತಿವೆ. ಇತ್ತೀಚೆಗಷ್ಟೆ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯದ್ದೇ ಎಂದು ಕೇಳಲಾದ ವಿಡಿಯೋ ಒಂದನ್ನು ಹರಿಬಿಟ್ಟಿದ್ದರು. ಇಬ್ಬರು ರೋಗಿಗಳನ್ನ ಒಂದೇ ಬೆಡ್‌ನಲ್ಲಿ ಮಲಗಿಸಿ ಚಿಕಿತ್ಸೆ ನೀಡ್ತಿರುವ ವಿಡಿಯೋ ವೈರಲ್ ಆಗಿತ್ತು. ಈಗ ಅದೇ ರೀತಿಯಾದಂತಹ ಮತ್ತೊಂದು ಮಹಾ ಎಡವಟ್ಟು ಬಯಲಾಗಿದೆ.

ಮಹಾಮಾರಿ ಕೊರೊನಾ ತಡೆಗಟ್ಟಲು ಸರ್ಕಾರ ನಾನಾ ಸರ್ಕಸ್ ಮಾಡ್ತಿದೆ. ಆದರೆ ಆಸ್ಪತ್ರೆಗಳೇ ಈ ಬಗ್ಗೆ ನಿರ್ಲಕ್ಷ್ಯ ತೋರಿಸುತ್ತಿವೆ. ಕುಂದಾನಗರಿ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರನ್ನು ನೋಡಿಕೊಳ್ಳಲು ಹಾಗೂ ಆರೈಕೆ ಮಾಡಲು ಕುಟುಂಬಸ್ಥರೇ ಮುಂದಾಗಿದ್ದರೆ. ಬಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಆರೈಕೆಗೆ ಕುಟುಂಬಸ್ಥರಿಗೆ ಅವಕಾಶ ನೀಡಲಾಗಿದೆ. ಬಿಮ್ಸ್ ಆಸ್ಪತ್ರೆ ಮೆಡಿಕಲ್ ವಾರ್ಡ್‌ನಲ್ಲಿ ಸೋಂಕಿತರ ಸಂಬಂಧಿಕರು ನಿಂತು ಮಾತಾಡುವ ವಿಡಿಯೋ ವೈರಲ್ ಆಗಿದೆ.

ಕೊರೊನಾ ಸೋಂಕಿತರ ಆರೈಕೆ ಬಳಿಕ ಸಂಬಂಧಿಕರು ಹೊರಬಂದು ಬಿಂದಾಸ್ ಆಗಿ ಓಡಾಡುತ್ತಿದ್ದಾರೆ. ಇದರಿಂದ ಮತ್ತಷ್ಟು ಸೋಂಕು ಹರಡು ಆತಂಕ ಶುರುವಾಗಿದೆ. ಸಾಮಾನ್ಯವಾಗಿ ಕೊರೊನಾ ಸೋಂಕು ತಗುಲಿದ ವ್ಯಕ್ತಿಯ ಸಂಪರ್ಕಕ್ಕೆ ಹೋಗುವುದರಿಂದ ಸೋಂಕು ತಮಗೂ ತಗುಲುವ ಭಯವಿರುತ್ತೆ. ಆದ್ರೆ ಈ ಆಸ್ಪತ್ರೆಯಲ್ಲಿ ಸೋಂಕಿತರ ವಾರ್ಡ್ನೊಳಗೆ ಹೋಗಲು ಸಂಬಂಧಿಕರಿಗೆ ಅವಕಾಶ ನೀಡಲಾಗಿದೆ. ಅಲ್ಲದೆ ಅಟೆಂಡರ್ಗಳು ಸಹ ಸೋಂಕಿತರ ಆರೈಕೆ ಬಳಿಕ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಇದರಿಂದ ಈಗ ಮತ್ತಷ್ಟು ಆತಂಕ ಎದುರಾಗಿದ್ದು ಇವರ ಈ ಬೇಜವಾಬ್ದಾರಿತನಕ್ಕೆ ಮುಂದೆ ದೊಡ್ಡ ಅನಾವುತವಾದರೂ ಆಶ್ಚರ್ಯವಿಲ್ಲ.

ಇದನ್ನೂ ಓದಿ: ಖಾಕಿಗೆ ಶುರುವಾಗಿದೆ ಕೊವಿಡ್ ಕಂಟಕ; ಬಾಗಲಕೋಟೆ ಜಿಲ್ಲೆಯ 26 ಪೊಲೀಸರಿಗೆ ಕೊರೊನಾ ಧೃಡ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್