AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಲ್ಲರ್ ಕೊರೊನಾ: ಆ್ಯಂಬುಲೆನ್ಸ್ ಚಾಲಕರಿಂದಲೇ ಅಂತ್ಯಸಂಸ್ಕಾರ, ವಿಡಿಯೋ ನೋಡಿ ವಿದಾಯ ಹೇಳುತ್ತಿರುವ ಕುಟುಂಬಸ್ಥರು

ಮಹಾಮಾರಿ ಕೊರೊನಾದಿಂದ ಮೃತಪಟ್ಟಂತಹ ವ್ಯಕ್ತಿಯ ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು ಭಾಗಿಯಾಗುತ್ತಿಲ್ಲ. ಕೆಲವರು ಮೃತದೇಹವನ್ನೇ ಬಿಟ್ಟು ಹೋಗುತ್ತಿದ್ದಾರೆ. ಮತ್ತೆ ಕೆಲವರು ಮೊಬೈಲ್ ವಿಡಿಯೋದಲ್ಲೇ ಅಂತ್ಯಸಂಸ್ಕಾರವನ್ನು ವೀಕ್ಷಿಸಿ ದೂರದಿಂದಲೇ ಮೃತರ ಅಂತ್ಯಕ್ಕೆ ಶಾಂತಿ ಕೋರುತ್ತಿದ್ದಾರೆ.

ಕಿಲ್ಲರ್ ಕೊರೊನಾ: ಆ್ಯಂಬುಲೆನ್ಸ್ ಚಾಲಕರಿಂದಲೇ ಅಂತ್ಯಸಂಸ್ಕಾರ, ವಿಡಿಯೋ ನೋಡಿ ವಿದಾಯ ಹೇಳುತ್ತಿರುವ ಕುಟುಂಬಸ್ಥರು
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Apr 29, 2021 | 9:12 AM

Share

ಬೆಂಗಳೂರು: ಕಿಲ್ಲರ್ ಕೊರೊನಾಗೆ ಜನ ಬಲಿಯಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಹಾಗೂ ಸಾಯುವವರ ಸಂಖ್ಯೆ ಏರಿಕೆಯಾಗುತ್ತಿದೆ. ದೇಶದಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ವಿಪರ್ಯಾಸವೆಂದರೆ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರು ಮೃತರ ಅಂತ್ಯಸಂಸ್ಕಾರವನ್ನು ವಿಡಿಯೋ ಮೂಲಕ ವೀಕ್ಷಿಸುತ್ತಿದ್ದಾರೆ. ತಮ್ಮವರನ್ನು ವಿಡಿಯೋ ಮೂಲಕವೇ ವಿದಾಯ ಹೇಳುತ್ತಿದ್ದಾರೆ.

ಹೌದು ಮಹಾಮಾರಿ ಕೊರೊನಾದಿಂದ ಮೃತಪಟ್ಟಂತಹ ವ್ಯಕ್ತಿಯ ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು ಭಾಗಿಯಾಗುತ್ತಿಲ್ಲ. ಕೆಲವರು ಮೃತದೇಹವನ್ನೇ ಬಿಟ್ಟು ಹೋಗುತ್ತಿದ್ದಾರೆ. ಮತ್ತೆ ಕೆಲವರು ಮೊಬೈಲ್ ವಿಡಿಯೋದಲ್ಲೇ ಅಂತ್ಯಸಂಸ್ಕಾರವನ್ನು ವೀಕ್ಷಿಸಿ ದೂರದಿಂದಲೇ ಮೃತರ ಅಂತ್ಯಕ್ಕೆ ಶಾಂತಿ ಕೋರುತ್ತಿದ್ದಾರೆ. ಸೋಂಕು ತಮಗೂ ತಗುಲಬಹುದೆಂಬ ಭಯಕ್ಕೆ ವಿಡಿಯೋ ಮೂಲಕವೇ ಅಂತಿಮ ವಿದಾಯ ಹೇಳುತ್ತಿದ್ದಾರೆ. ಕೊನೇ ಬಾರಿ ತಮ್ಮವರ ದರ್ಶನ ಭಾಗ್ಯ ಕೂಡ ಸಿಗುತ್ತಿಲ್ಲ.

ಇನ್ನು ಮೃತ ಸೋಂಕಿತರ ಕುಟುಂಬಸ್ಥರು ಕೇವಲ ಆ್ಯಂಬುಲೆನ್ಸ್ ಚಾಲಕನಿಗೆ ಇಂತಿಷ್ಟು ಎಂದು ಹಣ ನೀಡಿ ಅಂತ್ಯಸಂಸ್ಕಾರದ ಹೊಣೆ ನೀಡುತ್ತಿದ್ದಾರೆ. ಚಾಲಕನೇ ಮೃತದೇಹಕ್ಕೆ ಪೂಜೆ ಮಾಡಿ, ಪುರೋಹಿತರಿಂದ ಪೂಜೆ ಮಾಡಿಸಿ ಅಂತ್ಯಸಂಸ್ಕಾರ ಮಾಡುತ್ತಿದ್ದಾನೆ. ಬಳಿಕ ಕುಟುಂಬಸ್ಥರಿಗೆ ಪೂಜೆ ಹಾಗೂ ಅಂತ್ಯಸಂಸ್ಕಾರದ ವಿಡಿಯೋ ಕಳುಹಿಸಿದ್ರೆ ಸಾಕು. ಅಲ್ಲಿಗೆ ಆ ಚಾಲಕನ ಜವಾಬ್ದಾರಿ ಮುಗಿಯುತ್ತೆ. ಜಸ್ಟ್ ಅಂತ್ಯಸಂಸ್ಕಾರದ ವಿಡಿಯೋ ನೋಡಿ ಕುಟುಂಬಸ್ಥರು ಅಂತಿಮ ವಿದಾಯ ಹೇಳ್ತಿದ್ದಾರೆ. ಮೃತಪಟ್ಟ ಸೋಂಕಿತರ ಮುಖ‌ನೋಡಲು ಕುಟುಂಬಸ್ಥರು ಬರ್ತಿಲ್ಲವಂತೆ. ಸದ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂತಹದೊಂದು ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಚಿತಾಗಾರದ ಎದುರು ಮೃತದೇಹಗಳ ಮೌನ ರೋಧನೆಪಡುತ್ತಿವೆ.

ಇದನ್ನೂ ಓದಿ: ವೈರಲ್​ ವಿಡಿಯೋ; ಕೊರೊನಾ ವೈರಾಣುವಿಗೆ ವಿದಾಯ ಹೇಳುವುದು ಹೇಗೆ? ಇಲ್ಲಿದೆ ನೋಡಿ ತಮಾಷೆ ದೃಶ್ಯ

Published On - 9:03 am, Thu, 29 April 21

Follow Us
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!