ಬೆಂಗಳೂರಿನಲ್ಲಿ ಸೋಂಕಿತ ಮೃತಪಟ್ಟರೂ ಬಿಬಿಎಂಪಿಗೆ ಮಾಹಿತಿ ಇಲ್ಲ? ಸೋಂಕಿತನನ್ನು ಸಿಂಗರಿಸಿ ಅಂತ್ಯಸಂಸ್ಕಾರ ಮಾಡಿದ ಕುಟುಂಬಸ್ಥರು

ಸೋಂಕಿತನ ಶವ ಸಾಮಾನ್ಯ ಶವದಂತೆಯೇ ಸಿಂಗಾರ ಮಾಡಿ ಕುಟುಂಬಸ್ಥರು ಅಂತ್ಯಕ್ರಿಯೆ ಮಾಡಿದ್ದಾರೆ. ಅಂತ್ಯಕ್ರಿಯೆಗೆ ಕುಟುಂಬಸ್ಥರೆಲ್ಲ ಭಾಗಿಯಾಗಿದ್ದು ಮೃತದೇಹವನ್ನು ಮುಟ್ಟಿ ಸಂಸ್ಕಾರ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸೋಂಕಿತ ಮೃತಪಟ್ಟರೂ ಬಿಬಿಎಂಪಿಗೆ ಮಾಹಿತಿ ಇಲ್ಲ? ಸೋಂಕಿತನನ್ನು ಸಿಂಗರಿಸಿ ಅಂತ್ಯಸಂಸ್ಕಾರ ಮಾಡಿದ ಕುಟುಂಬಸ್ಥರು
ಮನೆ ಮುಂದೆ ಸೋಂಕಿತನ ಮೃತದೇಹವಿಟ್ಟು ಸಿಂಗರಿಸಿರುವ ಕುಟುಂಬಸ್ಥರು
Follow us
|

Updated on: Apr 18, 2021 | 12:19 PM

ಬೆಂಗಳೂರು: ಕಿಲ್ಲರ್ ಕೊರೊನಾದಿಂದಾಗಿ ಎತ್ತ ನೋಡಿದ್ರೂ ಸಾವಿನ ಆಕ್ರಂದನ ಕೇಳಿಸುತ್ತಿದೆ. ಹೆಜ್ಜೆ ಹೆಜ್ಜೆಗೂ ಜೀವ ಉಳಿಸಿಕೊಳ್ಳಲು ಜನ ಪರದಾಡುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್ ಸಿಕ್ತಿಲ್ಲ. ಬೆಡ್ ಸಿಕ್ರೂ ಬೇಗ ಟ್ರೀಟ್​ಮೆಂಟ್ ಸಿಕ್ತಿಲ್ಲ. ಐಸಿಯುನಲ್ಲಿದ್ರೂ ಆಕ್ಸಿಜನ್ ಸಿಲಿಂಡರ್ ಸಿಕ್ತಿಲ್ಲ. ಕಣ್ಮುಂದೆಯೇ ತಮ್ಮ ಕುಟುಂಬದವರು ಜೀವ ಬಿಡ್ತಿದ್ದಾರೆ. ಕೊರೊನಾದಿಂದ ದಿನದಿಂದ ದಿನಕ್ಕೆ ಹಲವ್ರು ಸಾವಿನ ಕದ ತಟ್ಟುತ್ತಿದ್ದಾರೆ. ಸಾವಿನೂರಾದ ಬೆಂಗಳೂರಲ್ಲಿ ಕ್ಷಣ ಕ್ಷಣಕ್ಕೂ ಪರಿಸ್ಥಿತಿ ಅತಿ ಭೀಕರವಾಗ್ತಿದೆ. ಇಂತಹ ಸ್ಥಿತಿ ಇದ್ದರೂ ಬಿಬಿಎಂಪಿ ನಿರ್ಲಕ್ಷ್ಯ ವಹಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರಿನಲ್ಲಿ ಸೋಂಕಿತರು ಮೃತಪಟ್ಟರೂ ಬಿಬಿಎಂಪಿಗೆ ಈ ಬಗ್ಗೆ ಮಾಹಿತಿ ಸಿಗುತ್ತಿಲ್ಲವಾ ಎಂಬ ಪ್ರಶ್ನೆ ಮೂಡಿದೆ. ಏಕೆಂದರೆ ವಿಜಯನಗರದ ಮಾರೇನಹಳ್ಳಿಯಲ್ಲಿ ಕೊರೊನಾ ಸೋಂಕಿತ ಮೃತಪಟ್ಟಿದ್ದಾನೆ. ಇಡೀ ರಾತ್ರಿ ಆಟೋದಲ್ಲಿ ಶವವಿಟ್ಟು ಕುಟುಂಬಸ್ಥರು ಕಾದಿದ್ದಾರೆ. ಆದ್ರೆ ಬಿಬಿಎಂಪಿಯ ಯಾವ ಅಧಿಕಾರಿಗಳೂ ಬಂದಿಲ್ಲ. ಕುಟುಂಬಸ್ಥರನ್ನು ವಿಚಾರಿಸಿಲ್ಲ. ಹೀಗಾಗಿ ಸೋಂಕಿತನ ಶವ ಸಾಮಾನ್ಯ ಶವದಂತೆಯೇ ಸಿಂಗಾರ ಮಾಡಿ ಕುಟುಂಬಸ್ಥರು ಅಂತ್ಯಕ್ರಿಯೆ ಮಾಡಿದ್ದಾರೆ. ಅಂತ್ಯಕ್ರಿಯೆಗೆ ಕುಟುಂಬಸ್ಥರೆಲ್ಲ ಭಾಗಿಯಾಗಿದ್ದು ಮೃತದೇಹವನ್ನು ಮುಟ್ಟಿ ಸಂಸ್ಕಾರ ಮಾಡಿದ್ದಾರೆ.

ಕುಟುಂಬಸ್ಥರು ಶವದ ಪಕ್ಕದಲ್ಲೇ ಗುಂಪುಗುಂಪಾಗಿ ನಿಂತಿದ್ದಾರೆ. ಇನ್ನು ಶವವನ್ನ ಪ್ಯಾಕ್ ಸಹ ಮಾಡದೆ ಬಿಟ್ಟಿದ್ದಾರೆ. ಮಾಸ್ಕ್ ಹಾಕದೆ, ಕೈಗೆ ಗ್ಲೌಸ್ ಹಾಕದೆ ಶವ ಮುಟ್ಟಿ ಸಿಂಗಾರ ಮಾಡಿದ್ದಾರೆ. ಇಷ್ಟೆಲ್ಲಾ ಆದ್ರೂ ಬಿಬಿಎಂಪಿಗೆ ಸೋಂಕಿತರ ಸಾವಿನ ಬಗ್ಗೆ ಮಾಹಿತಿಯೇ ಸಿಗ್ತಿಲ್ವಾ ಎಂಬ ಪ್ರಶ್ನೆ ಎದ್ದಿದೆ. ಈ ಹಿಂದೆ ಕೊರೊನಾ ಮೊದಲನೆ ಅಲೆಯ ಸಂದರ್ಭದಲ್ಲಿ ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಬಿಬಿಎಂಪಿ ಹೆಚ್ಚಿನ ಜಾಗೃತೆವಹಿಸಿ ಕುಟುಂಬಸ್ಥರನ್ನು ಮೃತದೇಹದ ಹತ್ತಿರವೂ ಸೇರಿಸುತ್ತಿರಲಿಲ್ಲ. ಆದ್ರೆ ಈಗ ಬಿಬಿಎಂಪಿಯಿಂದ ಇಷ್ಟೊಂದು ನಿರ್ಲಕ್ಷ್ಯವೇಕೆ? ಬಿಬಿಎಂಪಿ ಇದೇ ರೀತಿ ಸುಮ್ಮನೆ ಕುಳಿತರೆ ಮುಂದೆ ದೊಡ್ಡ ಅನಾಹುತ ಎದುರಿಸಬೇಕಾಗುತ್ತೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಶಂಕಿತ ರೋಗಿಗಳಿಗೆ ಸಂಭಾವ್ಯ ಕೊವಿಡ್ ರೋಗಿಗಳು ಎಂದು ಪರಿಗಣಿಸಿ ಚಿಕಿತ್ಸೆ ನೀಡಲಿದೆ ಉತ್ತರ ಪ್ರದೇಶ ಸರ್ಕಾರ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ