Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನ ಮಾಡಿದ್ದಾನೆಂದು ಬಾಲಕನನ್ನ ಹತ್ಯೆಗೈದ ಆರೋಪ: ಅಂಗಡಿ ಮುಂದೆ ಶವವಿಟ್ಟು ಕುಟುಂಬಸ್ಥರ ಧರಣಿ

ಅಂಗಡಿಯಲ್ಲಿ ಕಳ್ಳತನ ಮಾಡಿದ್ದಾನೆಂದು ಬಾಲಕನನ್ನು ಹತ್ಯೆಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲೆಯ ಹಾನಗಲ್ ತಾಲೂಕಿನ ಉಪ್ಪುಣಸಿ ಗ್ರಾಮದಲ್ಲಿ ಬಾಲಕನ ಮೃತದೇಹವಿಟ್ಟು ಪ್ರತಿಭಟನೆ ನಡೆಸಲಾಗಿದೆ. ಅಂಗಡಿ ಮುಂದೆ ಬಾಲಕನ ಶವವಿಟ್ಟು ಆತನ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಕಳ್ಳತನ ಮಾಡಿದ್ದಾನೆಂದು ಬಾಲಕನನ್ನ ಹತ್ಯೆಗೈದ ಆರೋಪ: ಅಂಗಡಿ ಮುಂದೆ ಶವವಿಟ್ಟು ಕುಟುಂಬಸ್ಥರ ಧರಣಿ
ಅಂಗಡಿ ಮುಂದೆ ಶವವಿಟ್ಟು ಕುಟುಂಬಸ್ಥರ ಧರಣಿ
Follow us
KUSHAL V
|

Updated on:Mar 23, 2021 | 6:51 PM

ಹಾವೇರಿ: ಅಂಗಡಿಯಲ್ಲಿ ಕಳ್ಳತನ ಮಾಡಿದ್ದಾನೆಂದು ಬಾಲಕನನ್ನು ಹತ್ಯೆಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲೆಯ ಹಾನಗಲ್ ತಾಲೂಕಿನ ಉಪ್ಪುಣಸಿ ಗ್ರಾಮದಲ್ಲಿ ಬಾಲಕನ ಮೃತದೇಹವಿಟ್ಟು ಪ್ರತಿಭಟನೆ ನಡೆಸಲಾಗಿದೆ. ಅಂಗಡಿ ಮುಂದೆ ಬಾಲಕನ ಶವವಿಟ್ಟು ಆತನ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

HVR PROTEST 1

ಅಂಗಡಿ ಮುಂದೆ ಶವವಿಟ್ಟು ಕುಟುಂಬಸ್ಥರ ಧರಣಿ

ಏನಿದು ಪ್ರಕರಣ? ಮಾ.16ರಂದು ಪ್ರವೀಣ್​ ಕರಿಶೆಟ್ಟರ ಎಂಬುವವರ ಅಂಗಡಿಗೆ ಹರೀಶಯ್ಯ ಹಿರೇಮಠ ಎಂಬ ಬಾಲಕ ಹೋಗಿದ್ದನು. ಈ ವೇಳೆ, ಅಂಗಡಿಯಲ್ಲಿ ಹಣ ಕಳ್ಳತನ ಮಾಡಿದ್ದಾನೆಂದು ಆತನ ಹತ್ಯೆಮಾಡಲಾಗಿದೆ ಎಂದು ಬಾಲಕನ ಕುಟುಂಬದವರು ಆರೋಪಿಸಿದ್ದಾರೆ.

ಹರೀಶಯ್ಯನಿಗೆ ಕಿವಿ ಹಿಡಿಸಿ, ಬೆನ್ನಿನ ಮೇಲೆ ಕಲ್ಲನ್ನಿಟ್ಟು ಹೂತು ಹಾಕಲು ಯತ್ನ ನಡೆಸಲಾಗಿದೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ಬಳಿಕ ಬಾಲಕನನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಬಾಲಕ ಮೃತಪಟ್ಟಿದ್ದಾನೆ.

ಇದೀಗ, ಪ್ರವೀಣ ಕರಿಶೆಟ್ಟರ, ಬಸವಣ್ಣೆವ್ವ ಕರಿಶೆಟ್ಟರ, ಶಿವರುದ್ರಪ್ಪ ಮತ್ತು ಕುಮಾರ ಹಾವೇರಿ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

MDK ARREST 2

ಒಂಟಿ ಮಹಿಳೆಯನ್ನು ಕೊಂದಿದ್ದ ಮೆಕ್ಯಾನಿಕಲ್ ಇಂಜಿನಿಯರ್ ಸೆರೆ

ಮಡಿಕೇರಿಯಲ್ಲಿ ಒಂಟಿ ಮಹಿಳೆಯನ್ನು ಕೊಂದಿದ್ದ ಮೆಕ್ಯಾನಿಕಲ್ ಇಂಜಿನಿಯರ್ ಸೆರೆ ಮಡಿಕೇರಿಯಲ್ಲಿ ಒಂಟಿ ಮಹಿಳೆಯನ್ನು ಕೊಂದಿದ್ದ ಆರೋಪಿಯನ್ನು ಅರೆಸ್ಟ್​ ಮಾಡಲಾಗಿದೆ. ಮೂಡಬಿದಿರೆಯ ಹೊಸಬೆಟ್ಟು ನಿವಾಸಿ ಅನಿಲ್(30) ಬಂಧಿತ ಆರೋಪಿ. ಕೊಡಗು ಅಪರಾಧ ಪತ್ತೆ ದಳ ಆರೋಪಿಯನ್ನು ಬಂಧಿಸಿದೆ. ಅಂದ ಹಾಗೆ, ಬಂಧಿತ ಅನಿಲ್​ ಮೂಲತಃ ಮೆಕ್ಯಾನಿಕಲ್ ಇಂಜಿನಿಯರ್. ಆದರೆ ಸದ್ಯ, ಖಾಸಗಿ ರೆಸಾರ್ಟ್‌ನಲ್ಲಿ ಕೆಲಸಕ್ಕಿದ್ದನು.

ಅನಿಲ್​ ಫೆಬ್ರವರಿ 23ರಂದು ಕೆನಿಡುಗಣೆ ಗ್ರಾಮದ ಲಲಿತಾ ಎಂಬುವವರನ್ನು ಕೊಂದಿದ್ದ. ಹಣದಾಸೆಗಾಗಿ ಲಲಿತಾರನ್ನ ಅನಿಲ್​ ಕೊಂದಿದ್ದ. ಸದ್ಯ, ಆರೋಪಿ ಬಳಿಯಿದ್ದ ಕಳ್ಳತನದ ಚಿನ್ನಾಭರಣ ಮತ್ತು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಆಕಸ್ಮಿಕ ಬೆಂಕಿ, ತಯಾರಿಸಿಟ್ಟಿದ್ದ ಪೊರಕೆಗಳು ಸುಟ್ಟು ಭಸ್ಮ ಆಕಸ್ಮಿಕ ಬೆಂಕಿ ತಾಗಿ ತಯಾರಿಸಿಟ್ಟಿದ್ದ ಪೊರಕೆಗಳು ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರದ ಕೊಂಚಿಕೊರಮರ ಕಾಲೋನಿಯಲ್ಲಿ ನಡೆದಿದೆ. ಮಳ್ಳೆಪ್ಪ ಕೊಂಚಿಕೊರಮರಗೆ ಸೇರಿದ ಪೊರಕೆ ಸುಟ್ಟು ಭಸ್ಮವಾಗಿದೆ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

VIJ FIRE 3

ಆಕಸ್ಮಿಕ ಬೆಂಕಿ, ತಯಾರಿಸಿಟ್ಟಿದ್ದ ಪೊರಕೆಗಳು ಸುಟ್ಟು ಭಸ್ಮ

ಇದನ್ನೂ ಓದಿ: ಯೋಧರು ತೆರಳುತ್ತಿದ್ದ ಬಸ್ ಸ್ಫೋಟಿಸಿದ ನಕ್ಸಲರು: ಮೂವರು ಹುತಾತ್ಮ, 21 ಯೋಧರಿಗೆ ಗಾಯ

Published On - 6:50 pm, Tue, 23 March 21

Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?