AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕಿದ್ದಾಗ ಚಿಕಿತ್ಸೆ ಸಿಗಲಿಲ್ಲ.. ಸತ್ತ ಮೇಲೆ ಆ್ಯಂಬುಲೆನ್ಸ್ ಬರಲಿಲ್ಲ, ಸೋಂಕಿತರಿಗೆ ಇದೆಂತ ಯಾತನೆ

ಬೆಂಗಳೂರು: ನಗರದಲ್ಲಿ ಕೊರೊನಾ ಪೀಡಿತರ ನರಕಯಾತನೆ ಮುಂದುವರೆದಿದೆ. ಸೋಂಕಿನಿಂದ ಮೃತಪಟ್ಟರೆ ಶವ ಸಾಗಣೆಗೂ ನರಕ ಅನುಭವಿಸಬೇಕಾದ ಸ್ಥಿತಿ ಎದುರಾಗಿದೆ. ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದು ಜೀವಬಿಟ್ಟ ಸೋಂಕಿತ ವ್ಯಕ್ತಿಯ ಶವ ಸಾಗಿಸಲು ಕುಟುಂಬಸ್ಥರು ಪರದಾಡಿದ ಘಟನೆ ನಗರದಲ್ಲಿ ನಡೆದಿದೆ. ಜೂ.30ರಂದು ನಂದಿನಿ ಲೇಔಟ್​ನ ದಂಪತಿಗೆ ಜ್ವರ ಕಾಣಿಸಿತ್ತು. ಹೀಗಾಘಿ ರಾಜಾಜಿನಗರದ ಇಎಸ್​ಐ ಆಸ್ಪತ್ರೆಗೆ ದಂಪತಿ ಹೋಗಿದ್ದರು. ಸ್ಯಾಂಪಲ್​ ಪಡೆದ ಸಿಬ್ಬಂದಿ ಹೋಂ ​ಕ್ವಾರಂಟೈನ್​ಗೆ ಸೂಚಿಸಿದ್ರು. ಜುಲೈ 2ರಂದು ಪತಿಗೆ ತೀವ್ರ ಜ್ವರ, ಕೆಮ್ಮು ಕಾಣಿಸಿಕೊಂಡಿತ್ತು. ನಂತರ ಚಿಕಿತ್ಸೆ ಪಡೆಯಲು […]

ಬದುಕಿದ್ದಾಗ ಚಿಕಿತ್ಸೆ ಸಿಗಲಿಲ್ಲ.. ಸತ್ತ ಮೇಲೆ ಆ್ಯಂಬುಲೆನ್ಸ್ ಬರಲಿಲ್ಲ, ಸೋಂಕಿತರಿಗೆ ಇದೆಂತ ಯಾತನೆ
ರಾಜಧಾನಿ ಬೆಂಗಳೂರಿನಲ್ಲಿ ಕ್ಷಣಕ್ಷಣಕ್ಕೂ ಹೊಸ ಸಮಸ್ಯೆಗಳು ಸೃಷ್ಟಿ, ಹಣ ಕೊಟ್ರೂ ಕೊರೊನಾ ಡೆಡ್‌ಬಾಡಿಗೆ ಸಿಗ್ತಿಲ್ಲ ಮುಕ್ತಿ
ಆಯೇಷಾ ಬಾನು
| Edited By: |

Updated on:Jul 09, 2020 | 1:32 PM

Share

ಬೆಂಗಳೂರು: ನಗರದಲ್ಲಿ ಕೊರೊನಾ ಪೀಡಿತರ ನರಕಯಾತನೆ ಮುಂದುವರೆದಿದೆ. ಸೋಂಕಿನಿಂದ ಮೃತಪಟ್ಟರೆ ಶವ ಸಾಗಣೆಗೂ ನರಕ ಅನುಭವಿಸಬೇಕಾದ ಸ್ಥಿತಿ ಎದುರಾಗಿದೆ. ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದು ಜೀವಬಿಟ್ಟ ಸೋಂಕಿತ ವ್ಯಕ್ತಿಯ ಶವ ಸಾಗಿಸಲು ಕುಟುಂಬಸ್ಥರು ಪರದಾಡಿದ ಘಟನೆ ನಗರದಲ್ಲಿ ನಡೆದಿದೆ.

ಜೂ.30ರಂದು ನಂದಿನಿ ಲೇಔಟ್​ನ ದಂಪತಿಗೆ ಜ್ವರ ಕಾಣಿಸಿತ್ತು. ಹೀಗಾಘಿ ರಾಜಾಜಿನಗರದ ಇಎಸ್​ಐ ಆಸ್ಪತ್ರೆಗೆ ದಂಪತಿ ಹೋಗಿದ್ದರು. ಸ್ಯಾಂಪಲ್​ ಪಡೆದ ಸಿಬ್ಬಂದಿ ಹೋಂ ​ಕ್ವಾರಂಟೈನ್​ಗೆ ಸೂಚಿಸಿದ್ರು. ಜುಲೈ 2ರಂದು ಪತಿಗೆ ತೀವ್ರ ಜ್ವರ, ಕೆಮ್ಮು ಕಾಣಿಸಿಕೊಂಡಿತ್ತು. ನಂತರ ಚಿಕಿತ್ಸೆ ಪಡೆಯಲು ಇಎಸ್​ಐ ಆಸ್ಪತ್ರೆಗೆ ತೆರಳಿದ್ರು. ಆಗ ESI ವೈದ್ಯರು ಖಾಸಗಿ ಆಸ್ಪತ್ರೆಗೆ ತೆರಳಲು ಸೂಚಿಸಿದ್ರು. ಖಾಸಗಿ ಆಸ್ಪತ್ರೆ ವೈದ್ಯರು ಕೊವಿಡ್ ಟೆಸ್ಟ್ ರಿಪೋರ್ಟ್​ ತರುವಂತೆ ಕಳುಹಿಸಿದ್ರು. ನಂತರ ಮಹಾಲಕ್ಷ್ಮೀ ಲೇಔಟ್​ನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ರಕ್ತ ಪರೀಕ್ಷೆ, ಚೆಸ್ಟ್ ಎಕ್ಸ್​ರೇ, ಗಂಟಲು ದ್ರವ ಪರೀಕ್ಷೆ ಮಾಡಿಸಿದ್ರು. ರಿಪೋರ್ಟ್ ಬಂದ ಮೇಲೆ ನಿಮಗೆ ಕೊರೊನಾ ದೃಢಪಟ್ಟಿದೆ ಎಂದು ಸಿಬ್ಬಂದಿ ತಿಳಿಸಿದ್ರು. ಕೂಡಲೇ ಸರ್ಕಾರಿ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ರು.

ಯಾವ ಆಸ್ಪತ್ರೆಗೆ ಹೋದರು ಚಿಕಿತ್ಸೆ ಸಿಗಲಿಲ್ಲ ಆಗ ಕೊರೊನಾ ಸೋಂಕಿತ ವ್ಯಕ್ತಿ ತುಮಕೂರು ರಸ್ತೆಯ ಪೀಪಲ್​ ಟ್ರೀ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ಬೆಡ್​ ಖಾಲಿಯಿಲ್ಲವೆಂದು ಸಪ್ತಗಿರಿ ಆಸ್ಪತ್ರೆಗೆ ಕಳುಹಿಸಿದ್ರು. ಅಲ್ಲಿಂದ ಮತ್ತೆ MS ರಾಮಯ್ಯ ಆಸ್ಪತ್ರೆ, ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿ ಬೆಡ್ ಖಾಲಿಯಿಲ್ಲ ಎಂದು ವಾಪಸ್ ಅಲ್ಲಿಂದ ಕೆ.ಸಿ.ಜನರಲ್ ಆಸ್ಪತ್ರೆಗೆ ಬಂದಿದ್ದಾತೆ ಅಲ್ಲಿ ಸಿಬ್ಬಂದಿ ನಾವು ಇಲ್ಲಿ ನಿಮ್ಮನ್ನು ದಾಖಲಿಸಿಕೊಳ್ಳುತ್ತೇವೆ, ಆದರೆ ಇಲ್ಲಿ ವೆಂಟಿಲೇಟರ್​ ಇಲ್ಲವೆಂದು ಮಾಹಿತಿ ನೀಡಿದ್ದಾರೆ. ಇಲ್ಲಿ ಆಕ್ಸಿಜನ್ ಕೊರತೆಯಿದೆ ಬೇರೆಡೆ ತೆರಳಿ ಎಂದು ತಿಳಿಸಿದ್ದಾರೆ. ಅಲ್ಲಿಂದ ಸಂಜೀವಿನಿ ಆಸ್ಪತ್ರೆಗೆ ಕೊರೊನಾ ಸೋಂಕಿತ ಹೋಗಿದ್ದಾರೆ. ಆದ್ರೆ ಸಂಜೀವಿನಿ ಆಸ್ಪತ್ರೆಯಲ್ಲಿ ಕೊವಿಡ್ ರಿಪೋರ್ಟ್​ ನೀಡಿರಲಿಲ್ಲ. ಬಿಬಿಎಂಪಿ ಅಧಿಕಾರಿಗಳಿಗೆ ಕಳುಹಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಬಿಬಿಎಂಪಿ ಆರೋಗ್ಯಾಧಿಕಾರಿ ಬಾಲಸುಂದರ್​ಗೆ ಫೋನ್ ಕರೆ ಮಾಡಿದಾಗ ರಿಪೋರ್ಟ್​ ನಮ್ಮ ಬಳಿಯಿದೆ ಎಂದಿದ್ದಾರೆ. ನಂತರ ರಾಜಾಜಿನಗರದ ಇಎಸ್​ಐ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ರಾತ್ರಿ 2 ಗಂಟೆವರೆಗೆ ಸ್ನೇಹಿತನ ಜತೆ ಸೋಂಕಿತ ವ್ಯಕ್ತಿ ಮಾತನಾಡಿದ್ದಾರೆ. ಬೆಳಗ್ಗೆ 7 ಗಂಟೆಗೆ ಇಎಸ್​ಐ ಆಸ್ಪತ್ರೆ ಸಿಬ್ಬಂದಿ ಕರೆ ಮಾಡಿದ್ದಾಗ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆಂದು ಮಾಹಿತಿ ಸಿಕ್ಕಿದೆ. ರಾತ್ರಿವರೆಗೆ ಕಾದರೂ ಶವ ಸಾಗಿಸಲು ಌಂಬುಲೆನ್ಸ್ ಸಿಕ್ಕಿಲ್ಲ. ಮೃತನ ಪತ್ನಿ, ಮಗ ಇಎಸ್​ಐ ಆಸ್ಪತ್ರೆ ಬಳಿ ಕಾದು ಕುಳಿತಿದ್ರು. ಕೊನೆಗೆ ಮೃತನ ದೇಹವನ್ನು ಮಂಗಳವಾರ ರಾತ್ರಿ ಌಂಬುಲೆನ್ಸ್​ನಲ್ಲಿ ಕೊಂಡೊಯ್ದಿದ್ದಾರೆ.

Published On - 11:23 am, Thu, 9 July 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ