AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕಿದ್ದಾಗ ಚಿಕಿತ್ಸೆ ಸಿಗಲಿಲ್ಲ.. ಸತ್ತ ಮೇಲೆ ಆ್ಯಂಬುಲೆನ್ಸ್ ಬರಲಿಲ್ಲ, ಸೋಂಕಿತರಿಗೆ ಇದೆಂತ ಯಾತನೆ

ಬೆಂಗಳೂರು: ನಗರದಲ್ಲಿ ಕೊರೊನಾ ಪೀಡಿತರ ನರಕಯಾತನೆ ಮುಂದುವರೆದಿದೆ. ಸೋಂಕಿನಿಂದ ಮೃತಪಟ್ಟರೆ ಶವ ಸಾಗಣೆಗೂ ನರಕ ಅನುಭವಿಸಬೇಕಾದ ಸ್ಥಿತಿ ಎದುರಾಗಿದೆ. ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದು ಜೀವಬಿಟ್ಟ ಸೋಂಕಿತ ವ್ಯಕ್ತಿಯ ಶವ ಸಾಗಿಸಲು ಕುಟುಂಬಸ್ಥರು ಪರದಾಡಿದ ಘಟನೆ ನಗರದಲ್ಲಿ ನಡೆದಿದೆ. ಜೂ.30ರಂದು ನಂದಿನಿ ಲೇಔಟ್​ನ ದಂಪತಿಗೆ ಜ್ವರ ಕಾಣಿಸಿತ್ತು. ಹೀಗಾಘಿ ರಾಜಾಜಿನಗರದ ಇಎಸ್​ಐ ಆಸ್ಪತ್ರೆಗೆ ದಂಪತಿ ಹೋಗಿದ್ದರು. ಸ್ಯಾಂಪಲ್​ ಪಡೆದ ಸಿಬ್ಬಂದಿ ಹೋಂ ​ಕ್ವಾರಂಟೈನ್​ಗೆ ಸೂಚಿಸಿದ್ರು. ಜುಲೈ 2ರಂದು ಪತಿಗೆ ತೀವ್ರ ಜ್ವರ, ಕೆಮ್ಮು ಕಾಣಿಸಿಕೊಂಡಿತ್ತು. ನಂತರ ಚಿಕಿತ್ಸೆ ಪಡೆಯಲು […]

ಬದುಕಿದ್ದಾಗ ಚಿಕಿತ್ಸೆ ಸಿಗಲಿಲ್ಲ.. ಸತ್ತ ಮೇಲೆ ಆ್ಯಂಬುಲೆನ್ಸ್ ಬರಲಿಲ್ಲ, ಸೋಂಕಿತರಿಗೆ ಇದೆಂತ ಯಾತನೆ
ರಾಜಧಾನಿ ಬೆಂಗಳೂರಿನಲ್ಲಿ ಕ್ಷಣಕ್ಷಣಕ್ಕೂ ಹೊಸ ಸಮಸ್ಯೆಗಳು ಸೃಷ್ಟಿ, ಹಣ ಕೊಟ್ರೂ ಕೊರೊನಾ ಡೆಡ್‌ಬಾಡಿಗೆ ಸಿಗ್ತಿಲ್ಲ ಮುಕ್ತಿ
ಆಯೇಷಾ ಬಾನು
| Edited By: |

Updated on:Jul 09, 2020 | 1:32 PM

Share

ಬೆಂಗಳೂರು: ನಗರದಲ್ಲಿ ಕೊರೊನಾ ಪೀಡಿತರ ನರಕಯಾತನೆ ಮುಂದುವರೆದಿದೆ. ಸೋಂಕಿನಿಂದ ಮೃತಪಟ್ಟರೆ ಶವ ಸಾಗಣೆಗೂ ನರಕ ಅನುಭವಿಸಬೇಕಾದ ಸ್ಥಿತಿ ಎದುರಾಗಿದೆ. ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದು ಜೀವಬಿಟ್ಟ ಸೋಂಕಿತ ವ್ಯಕ್ತಿಯ ಶವ ಸಾಗಿಸಲು ಕುಟುಂಬಸ್ಥರು ಪರದಾಡಿದ ಘಟನೆ ನಗರದಲ್ಲಿ ನಡೆದಿದೆ.

ಜೂ.30ರಂದು ನಂದಿನಿ ಲೇಔಟ್​ನ ದಂಪತಿಗೆ ಜ್ವರ ಕಾಣಿಸಿತ್ತು. ಹೀಗಾಘಿ ರಾಜಾಜಿನಗರದ ಇಎಸ್​ಐ ಆಸ್ಪತ್ರೆಗೆ ದಂಪತಿ ಹೋಗಿದ್ದರು. ಸ್ಯಾಂಪಲ್​ ಪಡೆದ ಸಿಬ್ಬಂದಿ ಹೋಂ ​ಕ್ವಾರಂಟೈನ್​ಗೆ ಸೂಚಿಸಿದ್ರು. ಜುಲೈ 2ರಂದು ಪತಿಗೆ ತೀವ್ರ ಜ್ವರ, ಕೆಮ್ಮು ಕಾಣಿಸಿಕೊಂಡಿತ್ತು. ನಂತರ ಚಿಕಿತ್ಸೆ ಪಡೆಯಲು ಇಎಸ್​ಐ ಆಸ್ಪತ್ರೆಗೆ ತೆರಳಿದ್ರು. ಆಗ ESI ವೈದ್ಯರು ಖಾಸಗಿ ಆಸ್ಪತ್ರೆಗೆ ತೆರಳಲು ಸೂಚಿಸಿದ್ರು. ಖಾಸಗಿ ಆಸ್ಪತ್ರೆ ವೈದ್ಯರು ಕೊವಿಡ್ ಟೆಸ್ಟ್ ರಿಪೋರ್ಟ್​ ತರುವಂತೆ ಕಳುಹಿಸಿದ್ರು. ನಂತರ ಮಹಾಲಕ್ಷ್ಮೀ ಲೇಔಟ್​ನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ರಕ್ತ ಪರೀಕ್ಷೆ, ಚೆಸ್ಟ್ ಎಕ್ಸ್​ರೇ, ಗಂಟಲು ದ್ರವ ಪರೀಕ್ಷೆ ಮಾಡಿಸಿದ್ರು. ರಿಪೋರ್ಟ್ ಬಂದ ಮೇಲೆ ನಿಮಗೆ ಕೊರೊನಾ ದೃಢಪಟ್ಟಿದೆ ಎಂದು ಸಿಬ್ಬಂದಿ ತಿಳಿಸಿದ್ರು. ಕೂಡಲೇ ಸರ್ಕಾರಿ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ರು.

ಯಾವ ಆಸ್ಪತ್ರೆಗೆ ಹೋದರು ಚಿಕಿತ್ಸೆ ಸಿಗಲಿಲ್ಲ ಆಗ ಕೊರೊನಾ ಸೋಂಕಿತ ವ್ಯಕ್ತಿ ತುಮಕೂರು ರಸ್ತೆಯ ಪೀಪಲ್​ ಟ್ರೀ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ಬೆಡ್​ ಖಾಲಿಯಿಲ್ಲವೆಂದು ಸಪ್ತಗಿರಿ ಆಸ್ಪತ್ರೆಗೆ ಕಳುಹಿಸಿದ್ರು. ಅಲ್ಲಿಂದ ಮತ್ತೆ MS ರಾಮಯ್ಯ ಆಸ್ಪತ್ರೆ, ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿ ಬೆಡ್ ಖಾಲಿಯಿಲ್ಲ ಎಂದು ವಾಪಸ್ ಅಲ್ಲಿಂದ ಕೆ.ಸಿ.ಜನರಲ್ ಆಸ್ಪತ್ರೆಗೆ ಬಂದಿದ್ದಾತೆ ಅಲ್ಲಿ ಸಿಬ್ಬಂದಿ ನಾವು ಇಲ್ಲಿ ನಿಮ್ಮನ್ನು ದಾಖಲಿಸಿಕೊಳ್ಳುತ್ತೇವೆ, ಆದರೆ ಇಲ್ಲಿ ವೆಂಟಿಲೇಟರ್​ ಇಲ್ಲವೆಂದು ಮಾಹಿತಿ ನೀಡಿದ್ದಾರೆ. ಇಲ್ಲಿ ಆಕ್ಸಿಜನ್ ಕೊರತೆಯಿದೆ ಬೇರೆಡೆ ತೆರಳಿ ಎಂದು ತಿಳಿಸಿದ್ದಾರೆ. ಅಲ್ಲಿಂದ ಸಂಜೀವಿನಿ ಆಸ್ಪತ್ರೆಗೆ ಕೊರೊನಾ ಸೋಂಕಿತ ಹೋಗಿದ್ದಾರೆ. ಆದ್ರೆ ಸಂಜೀವಿನಿ ಆಸ್ಪತ್ರೆಯಲ್ಲಿ ಕೊವಿಡ್ ರಿಪೋರ್ಟ್​ ನೀಡಿರಲಿಲ್ಲ. ಬಿಬಿಎಂಪಿ ಅಧಿಕಾರಿಗಳಿಗೆ ಕಳುಹಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಬಿಬಿಎಂಪಿ ಆರೋಗ್ಯಾಧಿಕಾರಿ ಬಾಲಸುಂದರ್​ಗೆ ಫೋನ್ ಕರೆ ಮಾಡಿದಾಗ ರಿಪೋರ್ಟ್​ ನಮ್ಮ ಬಳಿಯಿದೆ ಎಂದಿದ್ದಾರೆ. ನಂತರ ರಾಜಾಜಿನಗರದ ಇಎಸ್​ಐ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ರಾತ್ರಿ 2 ಗಂಟೆವರೆಗೆ ಸ್ನೇಹಿತನ ಜತೆ ಸೋಂಕಿತ ವ್ಯಕ್ತಿ ಮಾತನಾಡಿದ್ದಾರೆ. ಬೆಳಗ್ಗೆ 7 ಗಂಟೆಗೆ ಇಎಸ್​ಐ ಆಸ್ಪತ್ರೆ ಸಿಬ್ಬಂದಿ ಕರೆ ಮಾಡಿದ್ದಾಗ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆಂದು ಮಾಹಿತಿ ಸಿಕ್ಕಿದೆ. ರಾತ್ರಿವರೆಗೆ ಕಾದರೂ ಶವ ಸಾಗಿಸಲು ಌಂಬುಲೆನ್ಸ್ ಸಿಕ್ಕಿಲ್ಲ. ಮೃತನ ಪತ್ನಿ, ಮಗ ಇಎಸ್​ಐ ಆಸ್ಪತ್ರೆ ಬಳಿ ಕಾದು ಕುಳಿತಿದ್ರು. ಕೊನೆಗೆ ಮೃತನ ದೇಹವನ್ನು ಮಂಗಳವಾರ ರಾತ್ರಿ ಌಂಬುಲೆನ್ಸ್​ನಲ್ಲಿ ಕೊಂಡೊಯ್ದಿದ್ದಾರೆ.

Published On - 11:23 am, Thu, 9 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್