AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಪ್ರಸಿದ್ಧ ಸಿದ್ಧಾರೂಢ ಶ್ರೀಗಳ ಅಂಚೆ ಚೀಟಿ ಬಿಡುಗಡೆ: ಸಂತಸ ವ್ಯಕ್ತಪಡಿಸಿದ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿಯಲ್ಲಿ ಪ್ರಸಿದ್ಧ ಸಿದ್ಧಾರೂಢ ಶ್ರೀಗಳ ಅಂಚೆ ಚೀಟಿಯನ್ನು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ ಅವರು ಬಿಡುಗಡೆ ಮಾಡಿದ್ದಾರೆ. ಬಳಿಕ ಮಾತನಾಡಿದ ಪ್ರಲ್ಹಾದ್​ ಜೋಶಿ, ಪುಣ್ಯ ಪುರುಷರ ಅಂಚೆ ಚೀಟಿಗಳನ್ನು ನಾವು ಬಿಡುಗಡೆ ಮಾಡಿದ್ದೇವೆ. ನಮ್ಮ‌ ಸರ್ಕಾರದ ಅವಧಿಯಲ್ಲಿ ಬಿಡುಗಡೆ ಮಾಡಿರೋದು ಸೌಭಾಗ್ಯ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಪ್ರಸಿದ್ಧ ಸಿದ್ಧಾರೂಢ ಶ್ರೀಗಳ ಅಂಚೆ ಚೀಟಿ ಬಿಡುಗಡೆ: ಸಂತಸ ವ್ಯಕ್ತಪಡಿಸಿದ ಪ್ರಲ್ಹಾದ್ ಜೋಶಿ
ಹುಬ್ಬಳ್ಳಿಯಲ್ಲಿ ಪ್ರಸಿದ್ಧ ಸಿದ್ಧಾರೂಢ ಶ್ರೀಗಳ ಅಂಚೆ ಚೀಟಿ ಬಿಡುಗಡೆ: ಸಂತಸ ವ್ಯಕ್ತಪಡಿಸಿದ ಪ್ರಹ್ಲಾದ್ ಜೋಶಿ
ಶಿವಕುಮಾರ್ ಪತ್ತಾರ್
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 06, 2024 | 10:40 PM

Share

ಹುಬ್ಬಳ್ಳಿ, ಜುಲೈ 06: ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಸದ್ಗುರು ಸಿದ್ಧಾರೂಢ ಶ್ರೀಗಳ (Shri Siddharoodha Swamiji) ಅಂಚೆ ಚೀಟಿ ಬಿಡುಗಡೆ ಮಾಡಲಾಗಿದೆ. ಆ ಮೂಲಕ ಸರ್ಕಾರ ಗೌರವ ಸಲ್ಲಿಸಿದೆ. ಸದ್ಗುರು ಸಿದ್ಧಾರೂಢ ಶ್ರೀಗಳ ಅಂಚೆ ಚೀಟಿ (Postage Stamp) ಹೊರ ತರುವಂತೆ ಸುಮಾರು ವರ್ಷಗಳಿಂದ ಭಕ್ತರ ಬೇಡಿಕೆ ಆಗಿತ್ತು. ಇದೀಗ ಅಂಚೆ ಚೀಟಿ ಬಿಡುಗಡೆ ಮಾಡುವ ಮೂಲಕ ಭಕ್ತರ ಕನಸನ್ನು ನನಸು ಮಾಡಲಾಗಿದೆ. ಭಾರತೀಯ ಅಂಚೆ ಇಲಾಖೆ ಸಹಯೋಗದಲ್ಲಿ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಆವರಣದಲ್ಲಿ ಕಾರ್ಯಕ್ರಮ ಮಾಡಲಾಗಿದ್ದು, ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಸಭಾಪತಿ ಹೊರಟ್ಟಿ, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಶಾಸಕರಾದ ಅರವಿಂದ ಬೆಲ್ಲದ್ ಮಹೇಶ್ ತೆಂಗಿನಕಾಯಿ, ಪ್ರಸಾದ್ ಅಬ್ಬಯ್ಯ, N.H.ಕೋನರೆಡ್ಡಿ ಭಾಗಿ ಆಗಿದ್ದರು.

ಸಿದ್ಧಾರೂಢ ಶ್ರೀಗಳ ಅಂಚೆ ಚೀಟಿ ಬಿಡುಗಡೆ ಬಳಿಕ ಮಾತನಾಡಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಬಹಳ ಸಂತೋಷದಿಂದ ಪುಣ್ಯ ಪುರುಷರ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದೇವೆ. ನಮ್ಮ‌ ಸರ್ಕಾರದ ಅವಧಿಯಲ್ಲಿ ಬಿಡುಗಡೆ ಮಾಡಿರೋದು ಸೌಭಾಗ್ಯ. ಕೆಲ ವರ್ಷಗಳಿಂದ ಅಂಚೆ ಚೀಟಿ ಬಿಡುಗಡೆ ಮುಂದೂಡಿಕೆ ಆಗಿತ್ತು. ನಾವು ಇವತ್ತು ಅಶ್ವಿನಿ ವೈಷ್ಣವ್​ರನ್ನು ಸ್ಮರಿಸಬೇಕು ಎಂದಿದ್ದಾರೆ.

ಪ್ರಲ್ಹಾದ್​ ಜೋಶಿ ಟ್ವೀಟ್​ 

ಸಿದ್ಧಾರೂಢರ ಜೀವನವನ್ನು ನಾವೆಲ್ಲರೂ ನೆನಪು ಮಾಡಕೊಳ್ಳಬೇಕು. ಶಿವನ ಆಶೀರ್ವಾದದಿಂದ ಸಿದ್ಧಾರೂಢರ ಜನನವಾಗಿದೆ. ಭಾರತಕ್ಕೆ ಬಂದಿದ್ದವರನ್ನು ಸ್ವೀಕಾರ ಮಾಡಿದ್ದು ಸನಾತನ ಧರ್ಮ. ಸಿದ್ಧಾರೂಢರು ಅನೇಕ ಪವಾಡಗಳನ್ನು ಮಾಡಿ ತೋರಿಸಿದ್ದಾರೆ. ನಂಬಿದ ಭಕ್ತರನ್ನು ಸಿದ್ಧಾರೂಢರು ಕೈಹಿಡಿದಿದ್ದಾರೆ. ಟ್ರಸ್ಟಿಗಳು ಸಾಕಷ್ಟು ಬೆನ್ನು ಹತ್ತಿ ಈ‌ ಕೆಲಸ ಮಾಡಿಸಿಕೊಂಡಿದ್ದಾರೆ. ನಾವು ಕೂಡ ಕೇಂದ್ರ ಸರ್ಕಾರಿಂದ ಸಹಾಯ ಮಾಡುತ್ತೇವೆ ಎಂದರು.

ರಾಜ್ಯ ಸರ್ಕಾರದಿಂದ ಯಾತ್ರಿ ನಿವಾಸ ನಿರ್ಮಿಸಿ ಕೊಡ್ತೇವೆ: ಹೆಚ್​.ಕೆ.ಪಾಟೀಲ್

ಸಚಿವ ಹೆಚ್​.ಕೆ.ಪಾಟೀಲ್ ಮಾತನಾಡಿ ಸಿದ್ಧಾರೂಢ ಮಠ ಪಕ್ಷಾತೀತ ಹಾಗೂ ಧರ್ಮಾತೀತ ಕ್ಷೇತ್ರ ಇದು. ಸಿದ್ಧಾರೂಢರ ಖ್ಯಾತಿ, ಪ್ರಭಾವ ದೇಶದ ತುಂಬೆಲ್ಲಾ ಇದೆ. ಮಹಾರಾಷ್ಟ್ರ, ಆಂಧ್ರಪ್ರದೇಶದಿಂದಲೂ ಇಲ್ಲಿಗೆ ಭಕ್ತರು ಬರ್ತಾರೆ. ಅಂಚೆ ಚೀಟಿ ಬಿಡುಗಡೆ ಮಾಡಿರೋದು ಬಹಳ‌ ಖುಷಿ ತಂದಿದೆ. ರಾಜ್ಯ ಸರ್ಕಾರದಿಂದ ಸಿದ್ಧಾರೂಢರ ಮಠದಲ್ಲಿ ಯಾತ್ರಿ ನಿವಾಸ ನಿರ್ಮಿಸಿ ಕೊಡುತ್ತೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:39 pm, Sat, 6 July 24

ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?