AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿ ಮುಂದೆ ಇಲಿಯಂತೆ ನಿಂತವರು ಯಾರು? ಕುಮಾರಸ್ವಾಮಿಯನ್ನು ಅಪಹಾಸ್ಯ ಮಾಡಿದ ಸುಮಲತಾ ಬೆಂಬಲಿಗರು

ವೈರಲ್​ ಆಗಿರುವ ಫೋಟೋದಲ್ಲಿ ಅಂಬರೀಶ್, ರಾಕ್​ಲೈನ್​ ವೆಂಕಟೇಶ್, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರಿದ್ದಾರೆ. ಅಂಬರೀಶ್ ತಮ್ಮ ಎಂದಿನ ಗತ್ತಿನಲ್ಲೇ ಜೇಬಿನೊಳಗೆ ಕೈ ಇಟ್ಟುಕೊಂಡು ಕ್ಯಾಮೆರಾ ಕಡೆ ತೀಕ್ಷ್ಣ ನೋಟ ಬೀರಿದ್ದಾರೆ. ಆದರೆ, ಕುಮಾರಸ್ವಾಮಿ ಮಾತ್ರ ವಿನಯದಿಂದ ಕೈಕಟ್ಟಿಕೊಂಡು ನಿಂತು ಅಂಬರೀಶ್ ಅವರನ್ನೇ ನೋಡುತ್ತಾ ನಿಂತಿದ್ದಾರೆ.

ಹುಲಿ ಮುಂದೆ ಇಲಿಯಂತೆ ನಿಂತವರು ಯಾರು? ಕುಮಾರಸ್ವಾಮಿಯನ್ನು ಅಪಹಾಸ್ಯ ಮಾಡಿದ ಸುಮಲತಾ ಬೆಂಬಲಿಗರು
ಅಂಬರೀಶ್ ಎದುರು ಕೈಕಟ್ಟಿ ನಿಂತ ಹೆಚ್​.ಡಿ.ಕುಮಾರಸ್ವಾಮಿ
TV9 Web
| Edited By: |

Updated on: Jul 08, 2021 | 1:20 PM

Share

ಮಂಡ್ಯ: ಕೆಆರ್​ಎಸ್​ ಅಣೆಕಟ್ಟು ಬಿರುಕು ವಿವಾದಕ್ಕೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ನಡುವಿನ ಜಟಾಪಟಿ ಸಾಮಾಜಿಕ ಜಾಲತಾಣಗಳಲ್ಲೂ ಕಾವು ಪಡೆದಿದೆ. ಅಂಬರೀಶ್ ಮುಂದೆ ಕೈಕಟ್ಟಿ ನಿಲ್ಲುತ್ತಿದ್ದವರೆಲ್ಲಾ ಈಗ ಮಾತನಾಡುತ್ತಿದ್ದಾರೆ ಎಂಬ ಸುಮಲತಾ ಹೇಳಿಕೆಯ ಬೆನ್ನಲ್ಲೇ ಅದನ್ನು ಸಾಕ್ಷಿ ಸಮೇತ ಸಾಬೀತುಪಡಿಸುತ್ತಿರುವ ಸುಮಲತಾ ಅಂಬರೀಶ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿ ಫೋಟೋ ಒಂದನ್ನು ವೈರಲ್​ ಮಾಡುತ್ತಿದ್ದಾರೆ. ಸುಮಲತಾ ಬೆಂಬಲಿಗರ ಸಾಮಾಜಿಕ ಜಾಲತಾಣಗಳ ಪುಟಗಳಲ್ಲಿ ಫೋಟೋವನ್ನು ಹರಿಬಿಡಲಾಗಿದ್ದು, ಕುಮಾರಸ್ವಾಮಿಯವರನ್ನು ಅಪಹಾಸ್ಯ ಮಾಡಲಾಗುತ್ತಿದೆ.

ಅಂಬರೀಶ್ ಮುಂದೆ ಹೆಚ್.ಡಿ.ಕುಮಾರಸ್ವಾಮಿ ಕೈಕಟ್ಟಿಕೊಂಡು ನಿಂತ ಫೋಟೋವನ್ನು ವೈರಲ್ ಮಾಡಲಾಗುತ್ತಿದ್ದು, ಹುಲಿ ಮುಂದೆ ಇಲಿಯಂತೆ ನಿಂತವರು ಯಾರು? ಎಂದು ಅಭಿಮಾನಿಗಳು ಹೆಚ್​ಡಿಕೆಯವರ ಕಾಲೆಳೆದಿದ್ದಾರೆ. ಅಲ್ಲದೇ, ತರಹೇವಾರಿ ತಲೆಬರಹಗಳನ್ನು ನೀಡುವ ಮೂಲಕ ಕುಮಾರಸ್ವಾಮಿಯವರು ಅಂಬರೀಶ್​ ಎದುರು ಕೈಕಟ್ಟಿ ನಿಲ್ಲುತ್ತಿದ್ದರು. ಆದರೆ, ಈಗ ಅವರ ಕಾಲಾನಂತರ ಜೋರು ದನಿಯಲ್ಲಿ ಮಾತನಾಡುವ ಧೈರ್ಯ ಬಂದಿದೆ ಎಂದು ಜರಿದಿದ್ದಾರೆ.

ವೈರಲ್​ ಆಗಿರುವ ಫೋಟೋದಲ್ಲಿ ಅಂಬರೀಶ್, ರಾಕ್​ಲೈನ್​ ವೆಂಕಟೇಶ್, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರಿದ್ದಾರೆ. ಅಂಬರೀಶ್ ತಮ್ಮ ಎಂದಿನ ಗತ್ತಿನಲ್ಲೇ ಜೇಬಿನೊಳಗೆ ಕೈ ಇಟ್ಟುಕೊಂಡು ಕ್ಯಾಮೆರಾ ಕಡೆ ತೀಕ್ಷ್ಣ ನೋಟ ಬೀರಿದ್ದಾರೆ. ಆದರೆ, ಕುಮಾರಸ್ವಾಮಿ ಮಾತ್ರ ವಿನಯದಿಂದ ಕೈಕಟ್ಟಿಕೊಂಡು ನಿಂತು ಅಂಬರೀಶ್ ಅವರನ್ನೇ ನೋಡುತ್ತಾ ನಿಂತಿದ್ದಾರೆ. ಅತ್ಯಂತ ಹಳೆಯ ಫೋಟೋ ಇದಾಗಿದ್ದು, ಸುಮಲತಾ ನೀಡಿರುವ ಹೇಳಿಕೆಗೆ ಇದು ಉತ್ತಮ ಉದಾಹರಣೆಯಂತಿರುವ ಕಾರಣ ಬೆಂಬಲಿಗರು ಇದನ್ನು ಎಲ್ಲೆಡೆ ಹರಿಬಿಟ್ಟಿದ್ದಾರೆ.

ತಿರುಗೇಟು ಕೊಟ್ಟ ಹೆಚ್​ಡಿಕೆ ಬೆಂಬಲಿಗರು ಇತ್ತ ಈ ಫೋಟೋ ಮೂಲಕ ಸುಮಲತಾ ಬೆಂಬಲಿಗರು ಜೆಡಿಎಸ್​ ನಾಯಕರಿಗೆ ತಿರುಗೇಟು ಕೊಡುತ್ತಿದ್ದರೆ ಅತ್ತ ಲಿಂಗ ಸಿನಿಮಾದ ಖಳನಾಯಕನಿಗೆ ಸಂಸದೆ ಸುಮಲತಾರನ್ನು ಹೋಲಿಕೆ ಮಾಡಿ ಹೆಚ್​.ಡಿ.ಕುಮಾರಸ್ವಾಮಿ ಬೆಂಬಲಿಗರು ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಕರ್ನಾಟಕ ಕುಮಾರ ಪಡೆ ಹೆಸರಿನೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಈ ಫೋಸ್ಟ್ ತೇಲಿಬಿಡಲಾಗಿದ್ದು, ಸೂಪರ್ ಸ್ಟಾರ್ ರಜಿನಿಕಾಂತ್ ಅಭಿನಯದ ಲಿಂಗ ಚಿತ್ರದ ಖಳನಾಯಕ ಕೂಡ ಸಂಸದ. ಅದರ ಕತೆಯೂ ಡ್ಯಾಂ ಸುತ್ತಲೂ ನಡೆಯುವುದಾಗಿದ್ದು ಇದರಂತೆಯೇ ಇದೆ ಎಂದು ಗೇಲಿ ಮಾಡಿದ್ದಾರೆ.

SUMALATHA VS HDK

ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳ ಜಟಾಪಟಿ

ಸದರಿ ವಿವಾದಕ್ಕೆ ಸುಮಲತಾರ ಆಪ್ತ ರಾಕ್​ಲೈನ್ ವೆಂಕಟೇಶ್​ರನ್ನೂ ಎಳೆದುತಂದ ಹೆಚ್​.ಡಿ.ಕುಮಾರಸ್ವಾಮಿ ಬೆಂಬಲಿಗರು, ಲಿಂಗ ಸಿನಿಮಾದಲ್ಲಿ 40 ಸಾವಿರ ಕೋಟಿ ರೂಪಾಯಿ ಪ್ರಾಜೆಕ್ಟ್​ ಶುರು ಮಾಡಿಸುವ ಸಂಸದ (ಖಳನಾಯಕ) ಅದರಲ್ಲಿ ಶೇ.20 (800 ಕೋಟಿ ರೂಪಾಯಿ) ಕಮಿಷನ್ ಹೊಡೆಯೋದಕ್ಕಾಗಿ ಡ್ಯಾಂಗೆ ಬಾಂಬ್ ಇಟ್ಟು ಬಿರುಕು ಮೂಡಿಸೋ ಪ್ರಯತ್ನ ಮಾಡುತ್ತಾನೆ. ಆ ಸಿನಿಮಾದ ನಿರ್ಮಾಪಕ ಈ ಸಂಸದರ ಪರಮ ಆಪ್ತ. ಈಗ ಸಂಸದರ ಮೂಲಕ ಆ ಸಿನಿಮಾ ಕತೆಯನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆಯಾ ಎಂದು ತನಿಖೆ ನಡೆಸಿದರೆ ಗೊತ್ತಾಗುತ್ತದೆ ಎಂದು ಸುಮಲತಾರಿಗೆ ಟಾಂಗ್ ನೀಡಿದ್ದಾರೆ. ಒಟ್ಟಾರೆಯಾಗಿ ಸುಮಲತಾ ಹಾಗೂ ಹೆಚ್​.ಡಿ.ಕುಮಾರಸ್ವಾಮಿ ನಡುವಿನ ಸಮರ ಅಭಿಮಾನಿಗಳ ವಲಯಕ್ಕೂ ವಿಸ್ತರಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಾದ ವಿವಾದಗಳು ಜೋರಾಗಲಾರಂಭಿಸಿವೆ.

ಇದನ್ನೂ ಓದಿ: ಕುತಂತ್ರಿಗಳು ನಮ್ಮ ಕುಟುಂಬ ಒಡೆಯೋಕೆ ಸಾಧ್ಯವಿಲ್ಲ; ನನ್ನ ರಾಜಕಾರಣವನ್ನು ಮಂಡ್ಯದಲ್ಲೇ ತೋರಿಸುವೆ: ಸುಮಲತಾ ವಿರುದ್ಧ ಕುಮಾರಸ್ವಾಮಿ ಗರಂ 

ಕೆಆರ್​ಎಸ್​ನಲ್ಲಿ ಬಿರುಕಿಲ್ಲ ಎಂದು ಇಂಜಿನಿಯರ್​ಗಳೇ ಹೇಳಿದರೂ ಜಗ್ಗದ ಸುಮಲತಾ; ಅಂದು ಟೀಕಿಸಿದ್ದ ಜೆಡಿಎಸ್​ ನಾಯಕರ ವಿರುದ್ಧ ತನಿಖೆ ಅಸ್ತ್ರ?

Follow Us
TV9 Web
TV9 Web

TV9 Kannada

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!