AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆ ವಿರುದ್ಧ ಅನ್ನದಾತರ ಆಕ್ರೋಶ.. ಮಾರ್ಚ್ 26ರಂದು ಕರ್ನಾಟಕ ಬಂದ್‌

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಮಸೂದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ 117ನೇ ದಿನಕ್ಕೆ ಕಾಲಿಟ್ಟಿದೆ. ಇದೇ ಮಾರ್ಚ್‌ 26 ರಂದು ರೈತರ ಹೋರಾಟ ನಾಲ್ಕು ತಿಂಗಳು ಪೂರ್ಣಗೊಳಿಸಲಿದ್ದು, ರೈತ ಸಂಘಟನೆಗಳು ಮಾರ್ಚ್ 26ರಂದು ಕರ್ನಾಟಕ ಬಂದ್‌ಗೆೆ ನಿರ್ಧರಿಸಿವೆ.

ಕೃಷಿ ಕಾಯ್ದೆ ವಿರುದ್ಧ ಅನ್ನದಾತರ ಆಕ್ರೋಶ.. ಮಾರ್ಚ್ 26ರಂದು ಕರ್ನಾಟಕ ಬಂದ್‌
ಆಯೇಷಾ ಬಾನು
|

Updated on: Mar 23, 2021 | 7:34 AM

Share

ಬೆಂಗಳೂರು: ಕೃಷಿ ಕಾಯ್ದೆ ತಿದ್ದು ಪಡಿ ವಾಪಸ್‌ ಆಗ್ಬೇಕು.. ನೂತನ ಕೃಷಿ ಕಾಯ್ದೆ ತೊಲಗಬೇಕು ಅಂತಾ 116 ದಿನಗಳಿಂದಲೂ ರೈತರು ಹೋರಾಟ ಮಾಡ್ತಿದ್ದಾರೆ. ಅದ್ರಲ್ಲೂ ದೆಹಲಿ ಬಳಿಯೇ ಠಿಕಾಣಿ ಹೂಡಿ ಕೇಂದ್ರಕ್ಕೆ ಬಿಸಿ ಮುಟ್ಟಿಸುತ್ತಿದ್ದಾರೆ. ಅನ್ನದಾತರ ಈ ಹೋರಾಟ ನಿನ್ನೆ ರಾಜ್ಯ ರಾಜಧಾನಿಗೂ ಎಂಟ್ರಿಯಾಗಿತ್ತು. ಕೃಷಿ ಕಾಯ್ದೆ ವಿರುದ್ಧ ತಿರುಗಿಬಿದ್ದಿರೋ ರೈತರು ನಿನ್ನೆ ಬೆಂಗಳೂರು ಚಲೋಗೆ ಕರೆ ನೀಡಿದ್ರು. ಹೀಗಾಗಿ ಸಾವಿರಾರು ರೈತರು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬಳಿ ಜಮಾವಣೆಗೊಂಡು ಬಳಿಕ ವಿಧಾನಸೌಧದತ್ತ ತೆರಳಿದ್ರು. ಆದ್ರೆ ಮಾರ್ಗ ಮಧ್ಯದಲ್ಲೇ ಪೊಲೀಸರು ವಿಧಾನಸೌಧದತ್ತ ಹೋಗದಂತೆ ತಡೆದ್ರು. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೀತು. ಈ ವೇಳೆ ಎಂಟ್ರಿಯಾದ ಹಿರಿಯ ಪೊಲೀಸ್ ಅಧಿಕಾರಿಗಳು ರೈತರ ಱಲಿಯನ್ನ ಫ್ರೀಡಂ ಪಾರ್ಕ್‌ನತ್ತ ತಿರುಗಿಸಿದ್ರು.

ಮಾರ್ಚ್‌ 26 ರಂದು ಕರ್ನಾಟಕ ಬಂದ್‌ ಇನ್ನು ಇದೇ ಮಾರ್ಚ್‌ 26 ರಂದು ರೈತರ ಹೋರಾಟ ನಾಲ್ಕು ತಿಂಗಳು ಪೂರ್ಣಗೊಳಿಸಲಿದೆ. ಹೀಗಾಗಿ ಆವತ್ತು ಭಾರತ್‌ ಬಂದ್‌ ಆಚರಿಸಲು ರೈತ ಸಂಘಟನೆಗಳು ಕರೆ ನೀಡಿವೆ. ರಾಜ್ಯದಲ್ಲೂ ಕರ್ನಾಟಕ ಬಂದ್‌ ಹೆಸರಲ್ಲಿ ಆವತ್ತು ಮುಷ್ಕರ ನಡೆಸಲು ರೈತರು ತೀರ್ಮಾನಿಸಿದ್ದಾರೆ. ಇನ್ನು ಸಮಾವೇಶದ ನೇತೃತ್ವ ವಹಿಸಿದ್ದ ರಾಷ್ಟ್ರೀಯ ರೈತ ನಾಯಕ ರಾಕೇಶ್ ಸಿಂಗ್ ಟಿಕಾಯತ್, ಕೇಂದ್ರದಲ್ಲಿರೋದು ಬಿಜೆಪಿ ಸರ್ಕಾರ ಅಲ್ಲಾ, ಮೋದಿ ಸರ್ಕಾರ ಅಂತಾ ಗುಡುಗಿದ್ರು.

ರೈತರ ಕಿಚ್ಚು ಹೆಚ್ಚಾಗ್ತಿದ್ದಂತೆ ಸಿಎಂ ಬಿಎಸ್‌ವೈ ಸೂಚನೆಯಂತೆ ಸ್ಥಳಕ್ಕೆ ಕೃಷಿ ಸಚಿವ ಬಿಸಿ ಪಾಟೀಲ್‌ ಎಂಟ್ರಿಯಾಗಿದ್ರು. 23 ಬೇಡಿಕೆಗಳ ರೈತರ ಮನವಿ ಸ್ವೀಕರಿಸಿದ ಸಚಿವರು , ರೈತರ ಬೇಡಿಕೆಗಳನ್ನ ಸರ್ಕಾರದ ಗಮನಕ್ಕೆ ತರುತ್ತೇನೆ . ಈ ಬಗ್ಗೆ ಸಿಎಂ ನಿರ್ಧಾರ ಕೈಗೊಳ್ತಾರೆ ಅಂದ್ರು .

ಒಟ್ನಲ್ಲಿ ಸಂಯುಕ್ತ ಹೋರಾಟ ಸಮಿತಿ, ಐಕ್ಯ ಹೋರಾಟ ಸಮಿತಿ ಕರೆ ನೀಡಿದ್ದ ಱಲಿಯಲ್ಲಿ ಸಾವಿರಾರು ರೈತರು ಪಾಲ್ಗೊಂಡಿದ್ರು. ಕೃಷಿಕರ ಹೋರಾಟ ಕಿಚ್ಚು ರಂಗೇರಿದೆ. ಕರ್ನಾಟಕ ಜನ ಸದ್ಯದಲ್ಲೇ ಮತ್ತೊಂದು ಬಂದ್‌ ಎದುರಿಸಬೇಕಾಗಿದೆ.

ಇದನ್ನೂ ಓದಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಮಹಿಳೆಯರ ಬೆಂಬಲ; ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯ

3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ