AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆ ವಿರುದ್ಧ ಅನ್ನದಾತರ ಆಕ್ರೋಶ.. ಮಾರ್ಚ್ 26ರಂದು ಕರ್ನಾಟಕ ಬಂದ್‌

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಮಸೂದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ 117ನೇ ದಿನಕ್ಕೆ ಕಾಲಿಟ್ಟಿದೆ. ಇದೇ ಮಾರ್ಚ್‌ 26 ರಂದು ರೈತರ ಹೋರಾಟ ನಾಲ್ಕು ತಿಂಗಳು ಪೂರ್ಣಗೊಳಿಸಲಿದ್ದು, ರೈತ ಸಂಘಟನೆಗಳು ಮಾರ್ಚ್ 26ರಂದು ಕರ್ನಾಟಕ ಬಂದ್‌ಗೆೆ ನಿರ್ಧರಿಸಿವೆ.

ಕೃಷಿ ಕಾಯ್ದೆ ವಿರುದ್ಧ ಅನ್ನದಾತರ ಆಕ್ರೋಶ.. ಮಾರ್ಚ್ 26ರಂದು ಕರ್ನಾಟಕ ಬಂದ್‌
ಆಯೇಷಾ ಬಾನು
|

Updated on: Mar 23, 2021 | 7:34 AM

Share

ಬೆಂಗಳೂರು: ಕೃಷಿ ಕಾಯ್ದೆ ತಿದ್ದು ಪಡಿ ವಾಪಸ್‌ ಆಗ್ಬೇಕು.. ನೂತನ ಕೃಷಿ ಕಾಯ್ದೆ ತೊಲಗಬೇಕು ಅಂತಾ 116 ದಿನಗಳಿಂದಲೂ ರೈತರು ಹೋರಾಟ ಮಾಡ್ತಿದ್ದಾರೆ. ಅದ್ರಲ್ಲೂ ದೆಹಲಿ ಬಳಿಯೇ ಠಿಕಾಣಿ ಹೂಡಿ ಕೇಂದ್ರಕ್ಕೆ ಬಿಸಿ ಮುಟ್ಟಿಸುತ್ತಿದ್ದಾರೆ. ಅನ್ನದಾತರ ಈ ಹೋರಾಟ ನಿನ್ನೆ ರಾಜ್ಯ ರಾಜಧಾನಿಗೂ ಎಂಟ್ರಿಯಾಗಿತ್ತು. ಕೃಷಿ ಕಾಯ್ದೆ ವಿರುದ್ಧ ತಿರುಗಿಬಿದ್ದಿರೋ ರೈತರು ನಿನ್ನೆ ಬೆಂಗಳೂರು ಚಲೋಗೆ ಕರೆ ನೀಡಿದ್ರು. ಹೀಗಾಗಿ ಸಾವಿರಾರು ರೈತರು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬಳಿ ಜಮಾವಣೆಗೊಂಡು ಬಳಿಕ ವಿಧಾನಸೌಧದತ್ತ ತೆರಳಿದ್ರು. ಆದ್ರೆ ಮಾರ್ಗ ಮಧ್ಯದಲ್ಲೇ ಪೊಲೀಸರು ವಿಧಾನಸೌಧದತ್ತ ಹೋಗದಂತೆ ತಡೆದ್ರು. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೀತು. ಈ ವೇಳೆ ಎಂಟ್ರಿಯಾದ ಹಿರಿಯ ಪೊಲೀಸ್ ಅಧಿಕಾರಿಗಳು ರೈತರ ಱಲಿಯನ್ನ ಫ್ರೀಡಂ ಪಾರ್ಕ್‌ನತ್ತ ತಿರುಗಿಸಿದ್ರು.

ಮಾರ್ಚ್‌ 26 ರಂದು ಕರ್ನಾಟಕ ಬಂದ್‌ ಇನ್ನು ಇದೇ ಮಾರ್ಚ್‌ 26 ರಂದು ರೈತರ ಹೋರಾಟ ನಾಲ್ಕು ತಿಂಗಳು ಪೂರ್ಣಗೊಳಿಸಲಿದೆ. ಹೀಗಾಗಿ ಆವತ್ತು ಭಾರತ್‌ ಬಂದ್‌ ಆಚರಿಸಲು ರೈತ ಸಂಘಟನೆಗಳು ಕರೆ ನೀಡಿವೆ. ರಾಜ್ಯದಲ್ಲೂ ಕರ್ನಾಟಕ ಬಂದ್‌ ಹೆಸರಲ್ಲಿ ಆವತ್ತು ಮುಷ್ಕರ ನಡೆಸಲು ರೈತರು ತೀರ್ಮಾನಿಸಿದ್ದಾರೆ. ಇನ್ನು ಸಮಾವೇಶದ ನೇತೃತ್ವ ವಹಿಸಿದ್ದ ರಾಷ್ಟ್ರೀಯ ರೈತ ನಾಯಕ ರಾಕೇಶ್ ಸಿಂಗ್ ಟಿಕಾಯತ್, ಕೇಂದ್ರದಲ್ಲಿರೋದು ಬಿಜೆಪಿ ಸರ್ಕಾರ ಅಲ್ಲಾ, ಮೋದಿ ಸರ್ಕಾರ ಅಂತಾ ಗುಡುಗಿದ್ರು.

ರೈತರ ಕಿಚ್ಚು ಹೆಚ್ಚಾಗ್ತಿದ್ದಂತೆ ಸಿಎಂ ಬಿಎಸ್‌ವೈ ಸೂಚನೆಯಂತೆ ಸ್ಥಳಕ್ಕೆ ಕೃಷಿ ಸಚಿವ ಬಿಸಿ ಪಾಟೀಲ್‌ ಎಂಟ್ರಿಯಾಗಿದ್ರು. 23 ಬೇಡಿಕೆಗಳ ರೈತರ ಮನವಿ ಸ್ವೀಕರಿಸಿದ ಸಚಿವರು , ರೈತರ ಬೇಡಿಕೆಗಳನ್ನ ಸರ್ಕಾರದ ಗಮನಕ್ಕೆ ತರುತ್ತೇನೆ . ಈ ಬಗ್ಗೆ ಸಿಎಂ ನಿರ್ಧಾರ ಕೈಗೊಳ್ತಾರೆ ಅಂದ್ರು .

ಒಟ್ನಲ್ಲಿ ಸಂಯುಕ್ತ ಹೋರಾಟ ಸಮಿತಿ, ಐಕ್ಯ ಹೋರಾಟ ಸಮಿತಿ ಕರೆ ನೀಡಿದ್ದ ಱಲಿಯಲ್ಲಿ ಸಾವಿರಾರು ರೈತರು ಪಾಲ್ಗೊಂಡಿದ್ರು. ಕೃಷಿಕರ ಹೋರಾಟ ಕಿಚ್ಚು ರಂಗೇರಿದೆ. ಕರ್ನಾಟಕ ಜನ ಸದ್ಯದಲ್ಲೇ ಮತ್ತೊಂದು ಬಂದ್‌ ಎದುರಿಸಬೇಕಾಗಿದೆ.

ಇದನ್ನೂ ಓದಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಮಹಿಳೆಯರ ಬೆಂಬಲ; ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯ

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ