AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಮನೂರು ಶಿವಶಂಕರಪ್ಪ ಕುಟುಂಬದ ಸಕ್ಕರೆ ಕಾರ್ಖಾನೆಯ ಧೂಳಿನ ಕಾಟಕ್ಕೆ ಬೇಸತ್ತು.. DySP ಎದುರು ರೈತ ಆತ್ಮಹತ್ಯೆಗೆ ಯತ್ನ

ಸಕ್ಕರೆ ಕಾರ್ಖಾನೆಯ ಹಾರು ಬೂದಿಯಿಂದ ಬೇಸತ್ತ ರೈತನೊಬ್ಬ ಇಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ನಡೆದಿದೆ.

ಶಾಮನೂರು ಶಿವಶಂಕರಪ್ಪ ಕುಟುಂಬದ ಸಕ್ಕರೆ ಕಾರ್ಖಾನೆಯ ಧೂಳಿನ ಕಾಟಕ್ಕೆ ಬೇಸತ್ತು.. DySP ಎದುರು ರೈತ ಆತ್ಮಹತ್ಯೆಗೆ ಯತ್ನ
DySP ಎದುರು ರೈತ ಆತ್ಮಹತ್ಯೆಗೆ ಯತ್ನ
Follow us
KUSHAL V
|

Updated on: Jan 23, 2021 | 10:59 PM

ದಾವಣಗೆರೆ: ಸಕ್ಕರೆ ಕಾರ್ಖಾನೆಯ ಹಾರು ಬೂದಿಯಿಂದ ಬೇಸತ್ತ ರೈತನೊಬ್ಬ ಇಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದ ಒಡೆತನದಲ್ಲಿರುವ ಕಾರ್ಖಾನೆಯ ಧೂಳಿನ ಕಾಟಕ್ಕೆ ಬೇಸತ್ತು ರೈತ ವಿಷ ಕುಡಿದು ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ.

ಚಿಕ್ಕಬಿದರಿನಲ್ಲಿ ರೈತ ಹಾಲೇಶಪ್ಪ AC ಮಮತಾ ಹಾಗೂ DySP ತಾಮ್ರಧ್ವಜ ಸಮ್ಮುಖದಲ್ಲೇ ವಿಷ ಕುಡಿಯಲು ಯತ್ನಿಸಿದ್ದಾನೆ. ಆದರೆ, ಸಮಯಪ್ರಜ್ಞೆ ತೋರಿದ ಪೊಲೀಸರು ಆತನ ಕೈಯಲ್ಲಿದ್ದ ವಿಷದ ಬಾಟಲಿ ಕಸಿದುಕೊಂಡರು.

ಹಾಲೇಶಪ್ಪ ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು? ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಯಿಂದ ಹೊರಬರುತ್ತಿದ್ದ ಹಾರು ಬೂದಿಯ ಉಪಟಳವನ್ನು ನಿಲ್ಲಿಸುವಂತೆ ಸ್ಥಳೀಯರು ಇಂದು ಗ್ರಾಮಕ್ಕೆ ಭೇಟಿ ನೀಡಿದ್ದ AC ಮಮತಾ ಮತ್ತು DySP ತಾಮ್ರಧ್ವಜ ಅವರ ಬಳಿ ಮನವಿ ಮಾಡಿದರು.

ಹಾರು ಬೂದಿಯಿಂದ ಸುಮಾರು 20 ವರ್ಷಗಳ ಕಾಲ ನಲುಗಿ ಹೋಗಿದ್ದೇವೆ. ಅಧಿಕಾರಿಗಳು ಬರ್ತಾರೆ, ಹೋಗ್ತಾರೆ. ಆದರೆ, ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಗ್ರಾಮಸ್ಥರು ಗರಂ ಆದರು. ಇದಕ್ಕೆ, ಸ್ಪಂದಿಸಿದ ಅಧಿಕಾರಿಗಳು 20 ದಿನದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು. ಈ ನಡುವೆ, ರೈತ ಹಾಲೇಶಪ್ಪ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪತ್ನಿ ಮೇಲೆ ಹಲ್ಲೆಗೈದು ಪತಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ