AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಎಕರೆ ಜಾಗ ಕೊಡುತ್ತೇನೆ.. ಸ್ವಂತ ಹಣದಿಂದ ಶ್ರೀರಾಮ ಮಂದಿರ ಕಟ್ಟಿಸಿ -ಸಿದ್ದರಾಮಯ್ಯಗೆ ರೈತನ ನೇರ ಸವಾಲ್​

ರಾಮಮಂದಿರ ನಿರ್ಮಾಣಕ್ಕೆ ಒಂದು ಎಕರೆ ಜಾಗ ಕೊಡುತ್ತೇನೆ. ಸಿದ್ದರಾಮಯ್ಯ ಸ್ವಂತ ಹಣದಿಂದ ಶ್ರೀರಾಮ ಮಂದಿರ ಕಟ್ಟಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ರೈತನೊಬ್ಬ ನೇರ ಸವಾಲು ಹಾಕಿದ್ದಾನೆ. ಬಾದಾಮಿ ಪುರಸಭೆ ಸದಸ್ಯ ಹಾಗೂ ಕೃಷಿಕರಾಗಿರುವ ಬಸವರಾಜ ಗೊರಕೊಪ್ಪ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.

ಒಂದು ಎಕರೆ ಜಾಗ ಕೊಡುತ್ತೇನೆ.. ಸ್ವಂತ ಹಣದಿಂದ ಶ್ರೀರಾಮ ಮಂದಿರ ಕಟ್ಟಿಸಿ -ಸಿದ್ದರಾಮಯ್ಯಗೆ ರೈತನ ನೇರ ಸವಾಲ್​
ಸಿದ್ದರಾಮಯ್ಯಗೆ ರೈತನ ನೇರ ಸವಾಲ್​
Follow us
KUSHAL V
|

Updated on:Feb 20, 2021 | 9:20 PM

ಬಾಗಲಕೋಟೆ: ರಾಮಮಂದಿರ ನಿರ್ಮಾಣಕ್ಕೆ ಒಂದು ಎಕರೆ ಜಾಗ ಕೊಡುತ್ತೇನೆ. ಸಿದ್ದರಾಮಯ್ಯ ಸ್ವಂತ ಹಣದಿಂದ ಶ್ರೀರಾಮ ಮಂದಿರ ಕಟ್ಟಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ರೈತನೊಬ್ಬ ನೇರ ಸವಾಲು ಹಾಕಿದ್ದಾನೆ. ಬಾದಾಮಿ ಪುರಸಭೆ ಸದಸ್ಯ ಹಾಗೂ ಕೃಷಿಕರಾಗಿರುವ ಬಸವರಾಜ ಗೊರಕೊಪ್ಪ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.

ಸುಪ್ರೀಂಕೋರ್ಟ್‌ ಅಯೋಧ್ಯೆಯ ಜಾಗ ಇತ್ಯರ್ಥ ಮಾಡಿದೆ. ಆದ್ರೂ ಸಿದ್ದರಾಮಯ್ಯ ಅದು ವಿವಾದಿತ ಜಾಗವೆಂದು ಹೇಳಿದ್ದಾರೆ. ಅಲ್ಲಿ ಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡಲ್ಲವೆಂದು ಹೇಳಿದ್ದಾರೆ. ಹೀಗಾಗಿ, ನಾನು ಮಾಜಿ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕುತ್ತೇನೆ. ನನಗೆ ಸೇರಿದ 80 ಲಕ್ಷ ಮೌಲ್ಯದ ಜಮೀನು ದಾನ ಮಾಡುತ್ತೇನೆ. ಬಾದಾಮಿಯ ಬನಶಂಕರಿದೇವಿ ದೇವಸ್ಥಾನ ಬಳಿಯ ಜಮೀನು ದಾನ ಮಾಡುತ್ತೇನೆ. ಸಿದ್ದರಾಮಯ್ಯ ರಾಮಮಂದಿರ ಕಟ್ಟಿಸಲಿ ಎಂದು ಬಸವರಾಜ ಸವಾಲು ಹಾಕಿದ್ದಾರೆ. ಈ ಕುರಿತು, ಟ್ವೀಟ್ ಮಾಡಿ ಸಿದ್ದರಾಮಯ್ಯಗೆ ರೈತ ನೇರ ಸವಾಲು ಹಾಕಿದ್ದಾರೆ.

ಅಂದ ಹಾಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ತವರೂರಾದ ಸಿದ್ದರಾಮನಹುಂಡಿಯಲ್ಲಿ ರಾಮ ಮಂದಿರವೊಂದರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಿಎಂ ಪುತ್ರ ಯತೀಂದ್ರ ಸಹ ಇದಕ್ಕೆ ನೆರವು ನೀಡಿದ್ದಾರೆ.

SIDDARAMAIAH FARMER 1

‘ನನಗೆ ಸೇರಿದ 80 ಲಕ್ಷ ಮೌಲ್ಯದ ಜಮೀನು ದಾನ ಮಾಡುತ್ತೇನೆ’

SIDDARAMAIAH FARMER 2

ಬಸವರಾಜ ಗೊರಕೊಪ್ಪ

ಇದನ್ನೂ ಓದಿ: Photos | ಸಿದ್ದರಾಮನಹುಂಡಿಯಲ್ಲಿ ಈ ಬಾರಿ ರಾಮನವಮಿ ಬಲುಜೋರು! ಮಾಜಿ CM ಸಿದ್ದರಾಮಯ್ಯ ಹೇಳಿದಂತೆ ಅಲ್ಲಿ ನಿರ್ಮಾಣವಾಗ್ತಿದೆ ರಾಮ ಮಂದಿರ..

Published On - 9:14 pm, Sat, 20 February 21

ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ