AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಎಕರೆ ಜಾಗ ಕೊಡುತ್ತೇನೆ.. ಸ್ವಂತ ಹಣದಿಂದ ಶ್ರೀರಾಮ ಮಂದಿರ ಕಟ್ಟಿಸಿ -ಸಿದ್ದರಾಮಯ್ಯಗೆ ರೈತನ ನೇರ ಸವಾಲ್​

ರಾಮಮಂದಿರ ನಿರ್ಮಾಣಕ್ಕೆ ಒಂದು ಎಕರೆ ಜಾಗ ಕೊಡುತ್ತೇನೆ. ಸಿದ್ದರಾಮಯ್ಯ ಸ್ವಂತ ಹಣದಿಂದ ಶ್ರೀರಾಮ ಮಂದಿರ ಕಟ್ಟಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ರೈತನೊಬ್ಬ ನೇರ ಸವಾಲು ಹಾಕಿದ್ದಾನೆ. ಬಾದಾಮಿ ಪುರಸಭೆ ಸದಸ್ಯ ಹಾಗೂ ಕೃಷಿಕರಾಗಿರುವ ಬಸವರಾಜ ಗೊರಕೊಪ್ಪ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.

ಒಂದು ಎಕರೆ ಜಾಗ ಕೊಡುತ್ತೇನೆ.. ಸ್ವಂತ ಹಣದಿಂದ ಶ್ರೀರಾಮ ಮಂದಿರ ಕಟ್ಟಿಸಿ -ಸಿದ್ದರಾಮಯ್ಯಗೆ ರೈತನ ನೇರ ಸವಾಲ್​
ಸಿದ್ದರಾಮಯ್ಯಗೆ ರೈತನ ನೇರ ಸವಾಲ್​
KUSHAL V
|

Updated on:Feb 20, 2021 | 9:20 PM

Share

ಬಾಗಲಕೋಟೆ: ರಾಮಮಂದಿರ ನಿರ್ಮಾಣಕ್ಕೆ ಒಂದು ಎಕರೆ ಜಾಗ ಕೊಡುತ್ತೇನೆ. ಸಿದ್ದರಾಮಯ್ಯ ಸ್ವಂತ ಹಣದಿಂದ ಶ್ರೀರಾಮ ಮಂದಿರ ಕಟ್ಟಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ರೈತನೊಬ್ಬ ನೇರ ಸವಾಲು ಹಾಕಿದ್ದಾನೆ. ಬಾದಾಮಿ ಪುರಸಭೆ ಸದಸ್ಯ ಹಾಗೂ ಕೃಷಿಕರಾಗಿರುವ ಬಸವರಾಜ ಗೊರಕೊಪ್ಪ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.

ಸುಪ್ರೀಂಕೋರ್ಟ್‌ ಅಯೋಧ್ಯೆಯ ಜಾಗ ಇತ್ಯರ್ಥ ಮಾಡಿದೆ. ಆದ್ರೂ ಸಿದ್ದರಾಮಯ್ಯ ಅದು ವಿವಾದಿತ ಜಾಗವೆಂದು ಹೇಳಿದ್ದಾರೆ. ಅಲ್ಲಿ ಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡಲ್ಲವೆಂದು ಹೇಳಿದ್ದಾರೆ. ಹೀಗಾಗಿ, ನಾನು ಮಾಜಿ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕುತ್ತೇನೆ. ನನಗೆ ಸೇರಿದ 80 ಲಕ್ಷ ಮೌಲ್ಯದ ಜಮೀನು ದಾನ ಮಾಡುತ್ತೇನೆ. ಬಾದಾಮಿಯ ಬನಶಂಕರಿದೇವಿ ದೇವಸ್ಥಾನ ಬಳಿಯ ಜಮೀನು ದಾನ ಮಾಡುತ್ತೇನೆ. ಸಿದ್ದರಾಮಯ್ಯ ರಾಮಮಂದಿರ ಕಟ್ಟಿಸಲಿ ಎಂದು ಬಸವರಾಜ ಸವಾಲು ಹಾಕಿದ್ದಾರೆ. ಈ ಕುರಿತು, ಟ್ವೀಟ್ ಮಾಡಿ ಸಿದ್ದರಾಮಯ್ಯಗೆ ರೈತ ನೇರ ಸವಾಲು ಹಾಕಿದ್ದಾರೆ.

ಅಂದ ಹಾಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ತವರೂರಾದ ಸಿದ್ದರಾಮನಹುಂಡಿಯಲ್ಲಿ ರಾಮ ಮಂದಿರವೊಂದರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಿಎಂ ಪುತ್ರ ಯತೀಂದ್ರ ಸಹ ಇದಕ್ಕೆ ನೆರವು ನೀಡಿದ್ದಾರೆ.

SIDDARAMAIAH FARMER 1

‘ನನಗೆ ಸೇರಿದ 80 ಲಕ್ಷ ಮೌಲ್ಯದ ಜಮೀನು ದಾನ ಮಾಡುತ್ತೇನೆ’

SIDDARAMAIAH FARMER 2

ಬಸವರಾಜ ಗೊರಕೊಪ್ಪ

ಇದನ್ನೂ ಓದಿ: Photos | ಸಿದ್ದರಾಮನಹುಂಡಿಯಲ್ಲಿ ಈ ಬಾರಿ ರಾಮನವಮಿ ಬಲುಜೋರು! ಮಾಜಿ CM ಸಿದ್ದರಾಮಯ್ಯ ಹೇಳಿದಂತೆ ಅಲ್ಲಿ ನಿರ್ಮಾಣವಾಗ್ತಿದೆ ರಾಮ ಮಂದಿರ..

Published On - 9:14 pm, Sat, 20 February 21

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!