AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡಹಾಗಲು ಬೆಳೆದು ಮೂಢನಂಬಿಕೆ ದೂರ ಮಾಡಿದ ರೈತನ ಕೃಷಿ ಯಶೋಗಾಥೆ

ಮಾಡಹಾಗಲವೇ ಹಾಗೆ, ಬಹುತೇಕ ಸಂದರ್ಭಗಳಲ್ಲಿ ಎಷ್ಟು ಹುಡುಕಿದರೂ ಈ ತರಕಾರಿ ಎಲ್ಲೂ ಸಿಗದು. ಜೊತೆಗೆ, ಮಾಡಹಾಗಲಕಾಯಿ ಬಳ್ಳಿಯ ಗಡ್ಡೆ, ನಾಟಿ ಮಾಡಿದ ರೈತನ ತಲೆಗಿಂತ ದೊಡ್ಡದಾದರೆ ತಲೆ ಒಡೆಯುತ್ತದೆ ಎಂಬ ಮೂಢನಂಬಿಕೆಯಿದೆ. ಆದರೆ, ಯಲ್ಲಾಪುರದ ರೈತ ಗುರುಪ್ರಸಾದ್ ಇದನ್ನು ಮೀರಿ ನಿಂತಿದ್ದಾರೆ.

ಮಾಡಹಾಗಲು ಬೆಳೆದು ಮೂಢನಂಬಿಕೆ ದೂರ ಮಾಡಿದ ರೈತನ ಕೃಷಿ ಯಶೋಗಾಥೆ
ಮಾಡಹಾಗಲು ಬೆಳೆದ ಯಲ್ಲಾಪುರದ ರೈತ ಗುರುಪ್ರಸಾದ್ ಭಟ್
guruganesh bhat
| Updated By: ಸಾಧು ಶ್ರೀನಾಥ್​|

Updated on:Dec 10, 2020 | 5:43 PM

Share

ಕಾರವಾರ: ಹಳ್ಳಿಗಳಿಂದಲೂ ಕಣ್ಮರೆಯಾಗುತ್ತಿರುವ ಅಪರೂಪದ ತರಕಾರಿ ಮಾಡಹಾಗಲಕಾಯಿಯ ಕೃಷಿ ಮಾಡುವ ಮೂಲಕ ಇಲ್ಲೋರ್ವ ಕೃಷಿಕರು ಅಚ್ಚರಿ ಮೂಡಿಸಿದ್ದಾರೆ. ಬಹುತೇಕ ಸಂದರ್ಭಗಳಲ್ಲಿ ಈ ಮಾಡಹಾಗಲಕಾಯಿ ಎಷ್ಟೂ ಹುಡುಕಿದರೂ ಸಿಗುವುದಿಲ್ಲ. ಅಲ್ಲದೇ, ಮೂಢನಂಬಿಕೆಯೊಂದು ಮಾಡಹಾಗಲು ಬೆಳೆಯದಂತೆ ಈ ಭಾಗದ ರೈತರನ್ನು ಕಟ್ಟಿಹಾಕಿದೆ. ಇದನ್ನು ಅವಕಾಶವೆಂದು ಪರಿಗಣಿಸಿದ ಸಾಧನೆ ಮಾಡಿದ್ದಾರೆ ಯಲ್ಲಾಪುರ ತಾಲ್ಲೂಕಿನ ಹೊನ್ನಳ್ಳಿಯ ಗುರುಪ್ರಸಾದ ಭಟ್.

ಎಷ್ಟು ಹುಡುಕಿದರೂ ಸಿಗಲ್ಲ.. ಮಾಡಹಾಗಲವೇ ಹಾಗೆ, ಬಹುತೇಕ ಸಂದರ್ಭಗಳಲ್ಲಿ ಎಷ್ಟು ಹುಡುಕಿದರೂ ಈ ತರಕಾರಿ ಎಲ್ಲೂ ಸಿಗದು. ಮಲೆನಾಡಿನ ಬೆಟ್ಟಗಳಲ್ಲಿ ಅಲ್ಲಲ್ಲಿ ಮಾಡಹಾಗಲಿನ ಬಳ್ಳಿ ಕಾಣಸಿಗುತ್ತಾದರೂ, ಇತ್ತೀಚಿಗೆ ಲಭ್ಯತೆ ಇಲ್ಲ ಎಂಬಂತೆಯೇ ಆಗಿದೆ.ಜೊತೆಗೆ, ಮಾಡಹಾಗಲಕಾಯಿ ಬಳ್ಳಿಯ ಗಡ್ಡೆ, ನಾಟಿ ಮಾಡಿದ ರೈತನ ತಲೆಗಿಂತ ದೊಡ್ಡದಾದರೆ ತಲೆ ಒಡೆಯುತ್ತದೆ ಎಂಬ ಮೂಢನಂಬಿಕೆ ಈ ಭಾಗದಲ್ಲಿದೆ. ಹೀಗಾಗಿ, ಈ ಬೆಳೆ ಬೆಳೆಯಲು ಹಿಂದೇಟು ಹಾಕುತ್ತಾರೆ. ಹೊಸ ಅನ್ವೇಷಣೆ ಪ್ರಯೋಗ ಪ್ರವೃತ್ತಿಯ ಗುರುಪ್ರಸಾದ್​ ಈ ಮೂಢ ನಂಬಿಕೆಯನ್ನು ಸುಳ್ಳಾಗಿಸಿದ್ದಾರೆ.

ಮಾಡಹಾಗಲು ತೋಟ

ಅಕಾಲವೂ ಸಕಾಲವೇ ಆದ ಯಶೋಗಾಥೆ ಸಾಮಾನ್ಯವಾಗಿ ಫೆಬ್ರುವರಿ ವೇಳೆಗೆ ನಾಟಿ ಮಾಡಲ್ಪಡುವ ಮಾಡಹಾಗಲ ಬಳ್ಳಿ ಆಗಸ್ಟ್‌ವರೆಗೆ ಮಾತ್ರ ಫಸಲು ನೀಡುತ್ತದೆ. ಬಳಿಕ ಬಳ್ಳಿ ಒಣಗುತ್ತದೆ. ಆದರೆ, ಗುರುಪ್ರಸಾದ್ ಆಗಸ್ಟ್ ಬಳಿಕವೂ ನಿರಂತರವಾಗಿ ಫಸಲು ಪಡೆಯುತ್ತಿದ್ದಾರೆ. ಅಲ್ಲದೇ, ಎರಡೂವರೆ ತಿಂಗಳಲ್ಲಿ ಒಂದು ಕ್ವಿಂಟಲ್‍ನಷ್ಟು ಹಾಗಲ ಮಾರಾಟ ಮಾಡಿದ್ದಾರೆ.

ಯಶೋಗಾಥೆಯ ಹಿಂದಿನ ಕಥೆ ಕಳೆದ ವರ್ಷ ಸಹ ಮಾಡಹಾಗಲ ಬೆಳೆದಿದ್ದ ಗುರುಪ್ರಸಾದ್, ಈ ವರ್ಷ 35 ಗುಂಟೆಯಲ್ಲಿ ಅಸ್ಸಾಂ ತಳಿಯ ಬಳ್ಳಿಗಳನ್ನು ನಾಟಿ ಮಾಡಿದ್ದರು. ಬಳ್ಳಿಗಳಿಗೆ ಅಗತ್ಯ ನೀರು, ಪೋಷಕಾಂಶಯುಕ್ತ ಗೊಬ್ಬರ ನಿರಂತರವಾಗಿ ಒದಗಿಸಿದರ ಪರಿಣಾಮ ಈಗಲೂ ಕಾಯಿ ಬೆಳೆಯುತ್ತಿದೆ.

ನಾಲಿಗೆಗೆ ರುಚಿ ಆರೋಗ್ಯಕ್ಕೆ ಹಿತ

ಗೋವಾದಲ್ಲೂ ಇದೆ ಬೇಡಿಕೆ.. ಗುರುಪ್ರಸಾದ್, ಐದು ತಿಂಗಳಲ್ಲಿ 40 ಕ್ವಿಂಟಲ್‍ನಷ್ಟು ಮಾಡಹಾಗಲಕಾಯನ್ನು ಹೊನ್ನಾವರ, ಕುಮಟಾ, ಗೋವಾ ಮಾರುಕಟ್ಟೆಗಳಿಗೆ ರವಾನಿಸಿದ್ದಾರೆ. 350 ಬಳ್ಳಿಗಳನ್ನು ಬೆಳೆದಿರುವ ಅವರು, ಈ ಬೆಳೆಗೆ ಭಾರಿ ಬೇಡಿಕೆ ಇದೆ ಎನ್ನುತ್ತಾರೆ. ಪ್ರತಿ ಕೆಜಿಗೆ ₹120ರಿಂದ 160 ದರವಿದ್ದು, ಆಹಾರ ಮತ್ತು ಔಷಧಗಳಿಗಾಗಿ ಕಾಯಿಗೆ ಮತ್ತು ಗಡ್ಡೆಗಳಿಗೆ ಹೆಚ್ಚು ಬೇಡಿಕೆ ಇದೆ ಎಂದು ವಿವರಿಸುತ್ತಾರೆ.

ತಜ್ಞರಿಂದ ಶ್ಲಾಘನೆ ಗುರುಪ್ರಸಾದ್​ರ ಮಾಡಹಾಗಲಕಾಯಿ ತೋಟಕ್ಕೆ ಶಿರಸಿಯ ತೋಟಗಾರಿಕಾ ವಿದ್ಯಾಲಯದ ತಜ್ಞ ಡಾ. ಶಿವಾನಂದ ಹೊಂಗಲ ಭೇಟಿ ನೀಡಿದ್ದಾರೆ. ‘ನೀರು, ಗೊಬ್ಬರ ಸರಿಯಾದ ಸಮಯಕ್ಕೆ ದೊರೆತ ಕಾರಣ ಗಡ್ಡೆ ಪುನಃ ಚಿಗುರಿದೆ. ಉತ್ತಮ ಪೋಷಕಾಂಶ ಲಭಿಸಿರುವ ಕಾರಣ ಬಳ್ಳಿಗಳು ಒಣಗಿಲ್ಲ. ಕೃಷಿಯಲ್ಲಿ ಇಂತಹ ಪ್ರಯೋಗ ನಡೆದಿರುವುದು ಒಳ್ಳೆಯ ಬೆಳವಣಿಗೆ’ಎಂದು ಡಾ.ಶಿವಾನಂದ್ ಪ್ರತಿಕ್ರಿಯಿಸಿದ್ದಾರೆ.

-ಜಗದೀಶ್

Published On - 5:38 pm, Thu, 10 December 20

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್