AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೂದುಗುಂಬಳ ಕೆಜಿಗೆ ಕೇವಲ‌ 2 ರೂಪಾಯಿ; ಕುಸಿದ ಬೆಲೆಗೆ ಬೇಸತ್ತು ಬೆಳೆ ನಾಶಕ್ಕೆ ಮುಂದಾದ ದಾವಣಗೆರೆ ರೈತ

ದಾವಣಗೆರೆ ಮಾರುಕಟ್ಟೆಯಲ್ಲಿ ಬೂದುಗುಂಬಳ ಒಂದು ಕೆ.ಜಿಗೆ 2 ರಿಂದ 3 ರೂಪಾಯಿ ಬೆಲೆ ಇದೆ. ಮಾರುಕಟ್ಟೆಗೆ ಒಯ್ದು ಮಾರಾಟ ಮಾಡಿದರೆ ಕೂಲಿ ಹಣವೂ ಸಿಗದಿರುವುದರಿಂದ ದಿಕ್ಕು ತೋಚದಂತಾಗಿದ್ದು, ಬೆಳೆಯನ್ನು ನಾಶಪಡಿಸಲು ರೈತ ಮುಂದಾಗಿದ್ದಾರೆ.

ಬೂದುಗುಂಬಳ ಕೆಜಿಗೆ ಕೇವಲ‌ 2 ರೂಪಾಯಿ; ಕುಸಿದ ಬೆಲೆಗೆ ಬೇಸತ್ತು ಬೆಳೆ ನಾಶಕ್ಕೆ ಮುಂದಾದ ದಾವಣಗೆರೆ ರೈತ
ಬೂದುಗುಂಬಳ ಕಾಯಿ
preethi shettigar
| Edited By: |

Updated on: Apr 11, 2021 | 11:43 AM

Share

ದಾವಣಗೆರೆ: ಜಿಲ್ಲೆಯ ಗೋಪನಾಳ್ ಗ್ರಾಮದಲ್ಲಿ ಬೂದುಗುಂಬಳ ಬೆಳೆದ ರೈತರೊಬ್ಬರು ಉತ್ತಮ ಬೆಲೆ ಸಿಗದೇ ಇರುವುದರಿಂದ ಮಾರುಕಟ್ಟೆಗೆ ಒಯ್ಯದೇ ಬೆಳೆ ನಾಶಪಡಿಸಲು ಮುಂದಾಗಿದ್ದಾರೆ. ರೈತ ರವಿಶಂಕರ್ ಮೂರೂವರೆ ಎಕರೆ ಜಮೀನಿನಲ್ಲಿ ಬೂದುಗುಂಬಳ ಬೆಳೆದಿದ್ದಾರೆ. ಭರಪೂರ ಬೆಳೆಯೇನೋ ಬಂದಿದೆ. ದಾವಣಗೆರೆ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ 2ರಿಂದ 3 ರೂಪಾಯಿ ಬೆಲೆ ಇದೆ. ಮಾರುಕಟ್ಟೆಗೆ ಒಯ್ದು ಮಾರಾಟ ಮಾಡಿದರೆ ಕೂಲಿ ಹಣವೂ ಸಿಗದಿರುವುದರಿಂದ ದಿಕ್ಕು ತೋಚದಂತಾಗಿದ್ದು, ಈ ಕಾರ್ಯಕ್ಕೆ ಮುಂದಾಗಿದ್ದಾರೆ.

ಕೊರೊನಾ ಎರಡನೇ ಅಲೆ ಕಾರಣ ಮದುವೆ ಕಾರ್ಯಗಳಿಗೆ ನಿರ್ಬಂಧ ಹೇರಲಾಗಿದೆ. ಹಾಸ್ಟೆಲ್‌ಗಳೂ ಮುಚ್ಚಿವೆ. ಈ ಕಾರಣದಿಂದಾಗಿ ಬೇಡಿಕೆ ಇಲ್ಲದಂತಾಗಿದೆ. ಸದ್ಯ, ಏಳು ಟನ್‌ ಕುಂಬಳವನ್ನು ಕೊಯ್ಲು ಮಾಡಲಾಗಿದೆ. ಬೆಳೆಗೆ ರಸಗೊಬ್ಬರ, ಔಷಧ ಹಾಗೂ ಕೂಲಿಗಾಗಿ 60,000 ರೂಪಾಯಿ ಖರ್ಚಾಗಿದೆ. ಕೆಜಿಗೆ 3 ರೂಪಾಯಿಯಂತೆ ಏಳು ಟನ್‌ ಮಾರಾಟವಾದರೂ ಕೇವಲ 21 ಸಾವಿರ ರೂಪಾಯಿ ಸಿಗುತ್ತದೆ. ಕೊಯ್ಲು ಮಾಡಲು ಒಬ್ಬರಿಗೆ ದಿನಕ್ಕೆ 300 ರೂಪಾಯಿ ಕೂಲಿ ಇದ್ದು, 30,000 ರೂಪಾಯಿ ಕೂಲಿಗೆ ಖರ್ಚಾಗುತ್ತದೆ ಎಂದು ರೈತ ರವಿಶಂಕರ್‌ ಬೇಸರ ವ್ಯಕ್ತಪಡಿಸಿದ್ದಾರೆ.

ravishanker

ರೈತ ರವಿಶಂಕರ್‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ದನೆಯ ಬೂದುಗುಂಬಳಕ್ಕೆ ಮಾತ್ರ ಬೇಡಿಕೆ ಇದೆ. ನಮ್ಮದು ದುಂಡನೆಯ ಬೂದುಗುಂಬಳ. ಅಲ್ಲಿಗೆ ಕೊಂಡೊಯ್ಯಲು ಸಾರಿಗೆ ವೆಚ್ಚ ಹೆಚ್ಚಾಗುತ್ತದೆ. ಮದುವೆಯ ಸೀಸನ್‌ನಲ್ಲಿ ಉತ್ತಮ ಬೆಲೆ ಸಿಗಬಹುದು ಎಂದುಕೊಂಡಿದ್ದೆ. ಆದರೆ ಕುಸಿದ ದರವು ನಿರಾಸೆ ಮೂಡಿಸಿದೆ ಎಂದು ರೈತ ರವಿಶಂಕರ್‌ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಟೊಮೆಟೊ ಬೆಳೆದು ಕೈ ಸುಟ್ಟುಕೊಂಡ ರೈತನಿಂದ ಪ್ರಧಾನಿ ಮೋದಿಗೆ ಪತ್ರ ಬರೆಯಲು ತಯಾರಿ

ಟೊಮ್ಯಾಟೊ ದರ ಒಮ್ಮೆಲೆ ಕುಸಿತ: ಬೆಳೆದ ಟೊಮ್ಯಾಟೊವನ್ನೆಲ್ಲಾ ರಸ್ತೆಗೆ ಸುರಿದು ರೈತರ ಆಕ್ರೋಶ

(Farmer from Davanagere decided to destroy the wax gourd crop due to a price drop )

ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?