AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೂದುಗುಂಬಳ ಕೆಜಿಗೆ ಕೇವಲ‌ 2 ರೂಪಾಯಿ; ಕುಸಿದ ಬೆಲೆಗೆ ಬೇಸತ್ತು ಬೆಳೆ ನಾಶಕ್ಕೆ ಮುಂದಾದ ದಾವಣಗೆರೆ ರೈತ

ದಾವಣಗೆರೆ ಮಾರುಕಟ್ಟೆಯಲ್ಲಿ ಬೂದುಗುಂಬಳ ಒಂದು ಕೆ.ಜಿಗೆ 2 ರಿಂದ 3 ರೂಪಾಯಿ ಬೆಲೆ ಇದೆ. ಮಾರುಕಟ್ಟೆಗೆ ಒಯ್ದು ಮಾರಾಟ ಮಾಡಿದರೆ ಕೂಲಿ ಹಣವೂ ಸಿಗದಿರುವುದರಿಂದ ದಿಕ್ಕು ತೋಚದಂತಾಗಿದ್ದು, ಬೆಳೆಯನ್ನು ನಾಶಪಡಿಸಲು ರೈತ ಮುಂದಾಗಿದ್ದಾರೆ.

ಬೂದುಗುಂಬಳ ಕೆಜಿಗೆ ಕೇವಲ‌ 2 ರೂಪಾಯಿ; ಕುಸಿದ ಬೆಲೆಗೆ ಬೇಸತ್ತು ಬೆಳೆ ನಾಶಕ್ಕೆ ಮುಂದಾದ ದಾವಣಗೆರೆ ರೈತ
ಬೂದುಗುಂಬಳ ಕಾಯಿ
preethi shettigar
| Edited By: |

Updated on: Apr 11, 2021 | 11:43 AM

Share

ದಾವಣಗೆರೆ: ಜಿಲ್ಲೆಯ ಗೋಪನಾಳ್ ಗ್ರಾಮದಲ್ಲಿ ಬೂದುಗುಂಬಳ ಬೆಳೆದ ರೈತರೊಬ್ಬರು ಉತ್ತಮ ಬೆಲೆ ಸಿಗದೇ ಇರುವುದರಿಂದ ಮಾರುಕಟ್ಟೆಗೆ ಒಯ್ಯದೇ ಬೆಳೆ ನಾಶಪಡಿಸಲು ಮುಂದಾಗಿದ್ದಾರೆ. ರೈತ ರವಿಶಂಕರ್ ಮೂರೂವರೆ ಎಕರೆ ಜಮೀನಿನಲ್ಲಿ ಬೂದುಗುಂಬಳ ಬೆಳೆದಿದ್ದಾರೆ. ಭರಪೂರ ಬೆಳೆಯೇನೋ ಬಂದಿದೆ. ದಾವಣಗೆರೆ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ 2ರಿಂದ 3 ರೂಪಾಯಿ ಬೆಲೆ ಇದೆ. ಮಾರುಕಟ್ಟೆಗೆ ಒಯ್ದು ಮಾರಾಟ ಮಾಡಿದರೆ ಕೂಲಿ ಹಣವೂ ಸಿಗದಿರುವುದರಿಂದ ದಿಕ್ಕು ತೋಚದಂತಾಗಿದ್ದು, ಈ ಕಾರ್ಯಕ್ಕೆ ಮುಂದಾಗಿದ್ದಾರೆ.

ಕೊರೊನಾ ಎರಡನೇ ಅಲೆ ಕಾರಣ ಮದುವೆ ಕಾರ್ಯಗಳಿಗೆ ನಿರ್ಬಂಧ ಹೇರಲಾಗಿದೆ. ಹಾಸ್ಟೆಲ್‌ಗಳೂ ಮುಚ್ಚಿವೆ. ಈ ಕಾರಣದಿಂದಾಗಿ ಬೇಡಿಕೆ ಇಲ್ಲದಂತಾಗಿದೆ. ಸದ್ಯ, ಏಳು ಟನ್‌ ಕುಂಬಳವನ್ನು ಕೊಯ್ಲು ಮಾಡಲಾಗಿದೆ. ಬೆಳೆಗೆ ರಸಗೊಬ್ಬರ, ಔಷಧ ಹಾಗೂ ಕೂಲಿಗಾಗಿ 60,000 ರೂಪಾಯಿ ಖರ್ಚಾಗಿದೆ. ಕೆಜಿಗೆ 3 ರೂಪಾಯಿಯಂತೆ ಏಳು ಟನ್‌ ಮಾರಾಟವಾದರೂ ಕೇವಲ 21 ಸಾವಿರ ರೂಪಾಯಿ ಸಿಗುತ್ತದೆ. ಕೊಯ್ಲು ಮಾಡಲು ಒಬ್ಬರಿಗೆ ದಿನಕ್ಕೆ 300 ರೂಪಾಯಿ ಕೂಲಿ ಇದ್ದು, 30,000 ರೂಪಾಯಿ ಕೂಲಿಗೆ ಖರ್ಚಾಗುತ್ತದೆ ಎಂದು ರೈತ ರವಿಶಂಕರ್‌ ಬೇಸರ ವ್ಯಕ್ತಪಡಿಸಿದ್ದಾರೆ.

ravishanker

ರೈತ ರವಿಶಂಕರ್‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ದನೆಯ ಬೂದುಗುಂಬಳಕ್ಕೆ ಮಾತ್ರ ಬೇಡಿಕೆ ಇದೆ. ನಮ್ಮದು ದುಂಡನೆಯ ಬೂದುಗುಂಬಳ. ಅಲ್ಲಿಗೆ ಕೊಂಡೊಯ್ಯಲು ಸಾರಿಗೆ ವೆಚ್ಚ ಹೆಚ್ಚಾಗುತ್ತದೆ. ಮದುವೆಯ ಸೀಸನ್‌ನಲ್ಲಿ ಉತ್ತಮ ಬೆಲೆ ಸಿಗಬಹುದು ಎಂದುಕೊಂಡಿದ್ದೆ. ಆದರೆ ಕುಸಿದ ದರವು ನಿರಾಸೆ ಮೂಡಿಸಿದೆ ಎಂದು ರೈತ ರವಿಶಂಕರ್‌ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಟೊಮೆಟೊ ಬೆಳೆದು ಕೈ ಸುಟ್ಟುಕೊಂಡ ರೈತನಿಂದ ಪ್ರಧಾನಿ ಮೋದಿಗೆ ಪತ್ರ ಬರೆಯಲು ತಯಾರಿ

ಟೊಮ್ಯಾಟೊ ದರ ಒಮ್ಮೆಲೆ ಕುಸಿತ: ಬೆಳೆದ ಟೊಮ್ಯಾಟೊವನ್ನೆಲ್ಲಾ ರಸ್ತೆಗೆ ಸುರಿದು ರೈತರ ಆಕ್ರೋಶ

(Farmer from Davanagere decided to destroy the wax gourd crop due to a price drop )

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ