AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೂದುಗುಂಬಳ ಕೆಜಿಗೆ ಕೇವಲ‌ 2 ರೂಪಾಯಿ; ಕುಸಿದ ಬೆಲೆಗೆ ಬೇಸತ್ತು ಬೆಳೆ ನಾಶಕ್ಕೆ ಮುಂದಾದ ದಾವಣಗೆರೆ ರೈತ

ದಾವಣಗೆರೆ ಮಾರುಕಟ್ಟೆಯಲ್ಲಿ ಬೂದುಗುಂಬಳ ಒಂದು ಕೆ.ಜಿಗೆ 2 ರಿಂದ 3 ರೂಪಾಯಿ ಬೆಲೆ ಇದೆ. ಮಾರುಕಟ್ಟೆಗೆ ಒಯ್ದು ಮಾರಾಟ ಮಾಡಿದರೆ ಕೂಲಿ ಹಣವೂ ಸಿಗದಿರುವುದರಿಂದ ದಿಕ್ಕು ತೋಚದಂತಾಗಿದ್ದು, ಬೆಳೆಯನ್ನು ನಾಶಪಡಿಸಲು ರೈತ ಮುಂದಾಗಿದ್ದಾರೆ.

ಬೂದುಗುಂಬಳ ಕೆಜಿಗೆ ಕೇವಲ‌ 2 ರೂಪಾಯಿ; ಕುಸಿದ ಬೆಲೆಗೆ ಬೇಸತ್ತು ಬೆಳೆ ನಾಶಕ್ಕೆ ಮುಂದಾದ ದಾವಣಗೆರೆ ರೈತ
ಬೂದುಗುಂಬಳ ಕಾಯಿ
preethi shettigar
| Edited By: |

Updated on: Apr 11, 2021 | 11:43 AM

Share

ದಾವಣಗೆರೆ: ಜಿಲ್ಲೆಯ ಗೋಪನಾಳ್ ಗ್ರಾಮದಲ್ಲಿ ಬೂದುಗುಂಬಳ ಬೆಳೆದ ರೈತರೊಬ್ಬರು ಉತ್ತಮ ಬೆಲೆ ಸಿಗದೇ ಇರುವುದರಿಂದ ಮಾರುಕಟ್ಟೆಗೆ ಒಯ್ಯದೇ ಬೆಳೆ ನಾಶಪಡಿಸಲು ಮುಂದಾಗಿದ್ದಾರೆ. ರೈತ ರವಿಶಂಕರ್ ಮೂರೂವರೆ ಎಕರೆ ಜಮೀನಿನಲ್ಲಿ ಬೂದುಗುಂಬಳ ಬೆಳೆದಿದ್ದಾರೆ. ಭರಪೂರ ಬೆಳೆಯೇನೋ ಬಂದಿದೆ. ದಾವಣಗೆರೆ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ 2ರಿಂದ 3 ರೂಪಾಯಿ ಬೆಲೆ ಇದೆ. ಮಾರುಕಟ್ಟೆಗೆ ಒಯ್ದು ಮಾರಾಟ ಮಾಡಿದರೆ ಕೂಲಿ ಹಣವೂ ಸಿಗದಿರುವುದರಿಂದ ದಿಕ್ಕು ತೋಚದಂತಾಗಿದ್ದು, ಈ ಕಾರ್ಯಕ್ಕೆ ಮುಂದಾಗಿದ್ದಾರೆ.

ಕೊರೊನಾ ಎರಡನೇ ಅಲೆ ಕಾರಣ ಮದುವೆ ಕಾರ್ಯಗಳಿಗೆ ನಿರ್ಬಂಧ ಹೇರಲಾಗಿದೆ. ಹಾಸ್ಟೆಲ್‌ಗಳೂ ಮುಚ್ಚಿವೆ. ಈ ಕಾರಣದಿಂದಾಗಿ ಬೇಡಿಕೆ ಇಲ್ಲದಂತಾಗಿದೆ. ಸದ್ಯ, ಏಳು ಟನ್‌ ಕುಂಬಳವನ್ನು ಕೊಯ್ಲು ಮಾಡಲಾಗಿದೆ. ಬೆಳೆಗೆ ರಸಗೊಬ್ಬರ, ಔಷಧ ಹಾಗೂ ಕೂಲಿಗಾಗಿ 60,000 ರೂಪಾಯಿ ಖರ್ಚಾಗಿದೆ. ಕೆಜಿಗೆ 3 ರೂಪಾಯಿಯಂತೆ ಏಳು ಟನ್‌ ಮಾರಾಟವಾದರೂ ಕೇವಲ 21 ಸಾವಿರ ರೂಪಾಯಿ ಸಿಗುತ್ತದೆ. ಕೊಯ್ಲು ಮಾಡಲು ಒಬ್ಬರಿಗೆ ದಿನಕ್ಕೆ 300 ರೂಪಾಯಿ ಕೂಲಿ ಇದ್ದು, 30,000 ರೂಪಾಯಿ ಕೂಲಿಗೆ ಖರ್ಚಾಗುತ್ತದೆ ಎಂದು ರೈತ ರವಿಶಂಕರ್‌ ಬೇಸರ ವ್ಯಕ್ತಪಡಿಸಿದ್ದಾರೆ.

ravishanker

ರೈತ ರವಿಶಂಕರ್‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ದನೆಯ ಬೂದುಗುಂಬಳಕ್ಕೆ ಮಾತ್ರ ಬೇಡಿಕೆ ಇದೆ. ನಮ್ಮದು ದುಂಡನೆಯ ಬೂದುಗುಂಬಳ. ಅಲ್ಲಿಗೆ ಕೊಂಡೊಯ್ಯಲು ಸಾರಿಗೆ ವೆಚ್ಚ ಹೆಚ್ಚಾಗುತ್ತದೆ. ಮದುವೆಯ ಸೀಸನ್‌ನಲ್ಲಿ ಉತ್ತಮ ಬೆಲೆ ಸಿಗಬಹುದು ಎಂದುಕೊಂಡಿದ್ದೆ. ಆದರೆ ಕುಸಿದ ದರವು ನಿರಾಸೆ ಮೂಡಿಸಿದೆ ಎಂದು ರೈತ ರವಿಶಂಕರ್‌ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಟೊಮೆಟೊ ಬೆಳೆದು ಕೈ ಸುಟ್ಟುಕೊಂಡ ರೈತನಿಂದ ಪ್ರಧಾನಿ ಮೋದಿಗೆ ಪತ್ರ ಬರೆಯಲು ತಯಾರಿ

ಟೊಮ್ಯಾಟೊ ದರ ಒಮ್ಮೆಲೆ ಕುಸಿತ: ಬೆಳೆದ ಟೊಮ್ಯಾಟೊವನ್ನೆಲ್ಲಾ ರಸ್ತೆಗೆ ಸುರಿದು ರೈತರ ಆಕ್ರೋಶ

(Farmer from Davanagere decided to destroy the wax gourd crop due to a price drop )

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ