ಕೋಲಾರ ಜಿಲ್ಲೆಯಲ್ಲಿ ಶುರುವಾಗಿದೆ ನೇರಳೆ ಕ್ರಾಂತಿ, ಎಕರೆಗಟ್ಟಲೆ ಪ್ರದೇಶದಲ್ಲಿ ಬೆಳೆದ ರೈತರ ಮುಖದಲ್ಲಿ ಮಂದಹಾಸ

ಕೋಲಾರ ಅಂದ್ರೆ ಹಾಲು.. ರೇಷ್ಮೆ.. ಚಿನ್ನಕ್ಕೆ ಭಾರಿ ಹೆಸರುವಾಸಿ. ಇದೇ ಕೋಲಾರ ಜಿಲ್ಲೆ ತರಕಾರಿ.. ಮಾವು, ಟೊಮ್ಯಾಟೋ ಬೆಳೆಗಳಿಗೂ ಸಖತ್ ಫೇಮಸ್ ಇಂತಾ ಜಿಲ್ಲೆಯಲ್ಲಿ ಈಗ ಹೊಸದೊಂದು ಕ್ರಾಂತಿ ಶುರುವಾಗಿದೆ.

ಕೋಲಾರ ಜಿಲ್ಲೆಯಲ್ಲಿ ಶುರುವಾಗಿದೆ ನೇರಳೆ ಕ್ರಾಂತಿ, ಎಕರೆಗಟ್ಟಲೆ ಪ್ರದೇಶದಲ್ಲಿ ಬೆಳೆದ ರೈತರ ಮುಖದಲ್ಲಿ ಮಂದಹಾಸ
ನೇರಳೆ
Follow us
| Updated By: ಆಯೇಷಾ ಬಾನು

Updated on: Jul 14, 2021 | 7:50 AM

ಕೋಲಾರ ಜಿಲ್ಲೆಯಲ್ಲಿ ಬಾರ್ಡರ್ ಕ್ರಾಪ್ ಆಗಿ ಬೆಳೀತಿದ್ದ ನೇರಳೆಯನ್ನ ಈಗ ರೈತರು ಎಕರೆಗಟ್ಟಲೆ ಪ್ರದೇಶದಲ್ಲಿ ಪ್ರಮುಖ ಬೆಳೆಯಾಗಿ ಬೆಳೆಯಲು ಆರಂಭಿಸಿದ್ದಾರೆ. ಕಳೆದ ಮೂರು ವರ್ಷದಲ್ಲಿ ಕೋಲಾರ ಜಿಲ್ಲೆಯಲ್ಲಿ ಸುಮಾರು 300 ಹೆಕ್ಟೇರ್ಗೂ ಹೆಚ್ಚಿನ ಪ್ರದೇಶದಲ್ಲಿ ನೇರಳೆ ನಾಟಿ ಮಾಡಿದ್ದಾರೆ. ನೇರಳೆ ಬೆಳೆದಿರೋ ರೈತರು ನಿರೀಕ್ಷೆಗೂ ಮೀರಿ ಆದಾಯ ಪಡೆಯೋ ಮೂಲಕ ಪುಲ್ ಖುಷಿಯಾಗಿದ್ದಾರೆ. ಔಷಧೀಯ ಗುಣ ಹೊಂದಿರುವ ನೇರಳೆ ಹಣ್ಣು ಕೆಜಿಗೆ 200-250 ರೂಪಾಯಿಗೆ ಮಾರಾಟ ಆಗ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಇದಕ್ಕೂ ಮೊದಲು ರಸ್ತೆ ಬದಿ, ತೋಟಗಳು-ಹೊಲಗಳ ಬದುಗಳಲ್ಲಿ ಮಾತ್ರ ನೇರಳೆ ಮರಗಳು ಕಂಡು ಬರ್ತಿದ್ವು. ನೇರಳೆ ಹಣ್ಣಿನಲ್ಲಿ ಔಷಧೀಯ ಗುಣಗಳಿವೆ ಅನ್ನೋದು ಗೊತ್ತಾಗುತ್ತಿದ್ದಂತೆ, ನೇರಳೆ ಹಣ್ಣಿಗೆ ಭಾರಿ ಬೇಡಿಕೆ ಬಂದಿದೆ. ಹೀಗಾಗಿ ತೋಟಗಾರಿಕಾ ಇಲಾಖೆ ಕೂಡಾ ನೇರಳೆ ಹಣ್ಣು ಬೆಳೆಯಲು ಪ್ರೋತ್ಸಾಹ ನೀಡ್ತಿದೆ. ಜೊತೆಗೆ ಎಂಜಿಎನ್ಆರ್ಜಿಎ ಅಡಿ, ಹಲವು ಸೌಲಭ್ಯ ಸಿಗ್ತಿದ್ದು, ಮಾವಿಗೆ ಪರ್ಯಾಯ ಬೆಳೆಯಾಗಿ ನೇರಳೆ ಬೆಳೀತಿದ್ದಾರೆ. ಇದು ರೈತರಿಗೆ ಮತ್ತೊಂದು ಆದಾಯದ ಮೂಲವಾಗಿದೆ ಅಂತಾರೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು.

ಒಟ್ಟಾರೆ ಹಲವಾರು ದಶಕಗಳಿಂದ ಮಾವು, ಟೊಮ್ಯಾಟೋ, ತರಕಾರಿಗೆ ಖ್ಯಾತಿ ಪಡೆದಿದ್ದ ಕೋಲಾರದಲ್ಲಿ ನೇರಳೆಯ ರಂಗು ಹೆಚ್ಚಾಗ್ತಿದೆ. ರೈತರು ಕೂಡಾ ಒಳ್ಳೆಯ ಆದಾಯದ ನಿರೀಕ್ಷೆಯಲ್ಲಿ ನೇರಳೆ ಬೆಳೆಯತ್ತ ಹೆಚ್ಚಿನ ಒಲವು ತೋರ್ತಿದ್ದು. ಹಲವು ರೈತರು ನೇರಳೆ ಬೆಳೆಯಲು ಮುಂದಾಗಿರೋದಂತೂ ಸುಳ್ಳಲ್ಲ. Java Plum  Java Plum

ಇದನ್ನೂ ಓದಿ: Health Tips: ನೇರಳೆ ಹಣ್ಣಿನ ಬೀಜದಿಂದಲೂ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

Jamun Side Effect: ನಿಮಗಿಷ್ಟದ ನೇರಳೆ ಹಣ್ಣಿನ ಸೇವನೆ ಆರೋಗ್ಯಕ್ಕೆ ಎಷ್ಟೆಲ್ಲಾ ಹಾನಿ ಎಂಬುದು ತಿಳಿದಿದೆಯೇ?

ತಾಜಾ ಸುದ್ದಿ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ