AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ರೈತರಿಂದ ರಸ್ತೆತಡೆ: ಪೊಲೀಸರ ವಶಕ್ಕೆ ರೈತ ಮುಖಂಡರು

ರಸ್ತೆ ಮೇಲೆ ವಾಹನಗಳಿಗೆ ಅಡ್ಡಲಾಗಿ ಮಲಗಿದ ರೈತರು ಸರ್ಕಾರ ಮತ್ತು ಜೆಡಿಎಸ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೂರಾರು ರೈತರಿಂದ ರಸ್ತೆತಡೆ: ಪೊಲೀಸರ ವಶಕ್ಕೆ ರೈತ ಮುಖಂಡರು
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 08, 2020 | 7:11 PM

Share

ಬೆಂಗಳೂರು: ವಿಧಾನ ಪರಿಷತ್​ನಲ್ಲಿ ಭೂಸುಧಾರಣಾ ವಿಧೇಯಕ ಅಂಗೀಕಾರ ಹಿನ್ನೆಲೆಯಲ್ಲಿ ನಗರದ ಆನಂದರಾವ್​ ವೃತ್ತದಲ್ಲಿ ನೂರಾರು ರೈತರು ರಸ್ತೆತಡೆ ಚಳವಳಿ ನಡೆಸಿದರು. ಈ ಸಂದರ್ಭ ಪೊಲೀಸರು ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ಮತ್ತು ಬಡಗಲೂರು ನಾಗೇಂದ್ರ ಅವರನ್ನು ವಶಕ್ಕೆ ತೆಗೆದುಕೊಂಡರು.

ರಸ್ತೆ ಮೇಲೆ ವಾಹನಗಳಿಗೆ ಅಡ್ಡಲಾಗಿ ಮಲಗಿದ ರೈತರು ಸರ್ಕಾರ ಮತ್ತು ಜೆಡಿಎಸ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ವಿವಾದಿತ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ವಿಧೇಯಕ ವಿಧಾನಪರಿಷತ್​​ನಲ್ಲಿ ಕಾಂಗ್ರೆಸ್​ ವಿರೋಧದ ನಡುವೆಯೂ, ಜೆಡಿಎಸ್​ ಬೆಂಬಲದೊಂದಿಗೆ ಅಂಗೀಕಾರದ ಮುದ್ರೆ ದಕ್ಕಿಸಿಕೊಂಡಿತು. ವಿಧೇಯಕದ ಪರ 31 ಹಾಗೂ ವಿರುದ್ಧ 27 ಮತಗಳು ಬಿದ್ದವು.

ಈ ವಿಧೇಯಕ ವಿಧಾನಸಭೆಯಲ್ಲಿ ಸೆಪ್ಟೆಂಬರ್​ನಲ್ಲಿ ಅಂಗೀಕಾರವಾಗಿತ್ತು. ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರವಾದಾಗ, ಸರ್ಕಾರಕ್ಕೆ ತರಾತುರಿ ಏಕೆ ಎಂದು ಪ್ರಶ್ನಿಸಿದ್ದ ಎಚ್.ಡಿ.ಕುಮಾರಸ್ವಾಮಿಯವರ ಪಕ್ಷ ಇಂದು ವಿಧಾನಪರಿಷತ್​ನಲ್ಲಿ ಬಿಲ್​ ಬೆಂಬಲಿಸಿದ್ದು ಗಮನ ಸೆಳೆಯಿತು

ಭೂ ಸುಧಾರಣಾ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್​ನಲ್ಲಿ ಅಂಗೀಕಾರ; JDS ಬೆಂಬಲ

Published On - 7:09 pm, Tue, 8 December 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ