AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ರೈತರಿಂದ ರಸ್ತೆತಡೆ: ಪೊಲೀಸರ ವಶಕ್ಕೆ ರೈತ ಮುಖಂಡರು

ರಸ್ತೆ ಮೇಲೆ ವಾಹನಗಳಿಗೆ ಅಡ್ಡಲಾಗಿ ಮಲಗಿದ ರೈತರು ಸರ್ಕಾರ ಮತ್ತು ಜೆಡಿಎಸ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೂರಾರು ರೈತರಿಂದ ರಸ್ತೆತಡೆ: ಪೊಲೀಸರ ವಶಕ್ಕೆ ರೈತ ಮುಖಂಡರು
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 08, 2020 | 7:11 PM

ಬೆಂಗಳೂರು: ವಿಧಾನ ಪರಿಷತ್​ನಲ್ಲಿ ಭೂಸುಧಾರಣಾ ವಿಧೇಯಕ ಅಂಗೀಕಾರ ಹಿನ್ನೆಲೆಯಲ್ಲಿ ನಗರದ ಆನಂದರಾವ್​ ವೃತ್ತದಲ್ಲಿ ನೂರಾರು ರೈತರು ರಸ್ತೆತಡೆ ಚಳವಳಿ ನಡೆಸಿದರು. ಈ ಸಂದರ್ಭ ಪೊಲೀಸರು ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ಮತ್ತು ಬಡಗಲೂರು ನಾಗೇಂದ್ರ ಅವರನ್ನು ವಶಕ್ಕೆ ತೆಗೆದುಕೊಂಡರು.

ರಸ್ತೆ ಮೇಲೆ ವಾಹನಗಳಿಗೆ ಅಡ್ಡಲಾಗಿ ಮಲಗಿದ ರೈತರು ಸರ್ಕಾರ ಮತ್ತು ಜೆಡಿಎಸ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ವಿವಾದಿತ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ವಿಧೇಯಕ ವಿಧಾನಪರಿಷತ್​​ನಲ್ಲಿ ಕಾಂಗ್ರೆಸ್​ ವಿರೋಧದ ನಡುವೆಯೂ, ಜೆಡಿಎಸ್​ ಬೆಂಬಲದೊಂದಿಗೆ ಅಂಗೀಕಾರದ ಮುದ್ರೆ ದಕ್ಕಿಸಿಕೊಂಡಿತು. ವಿಧೇಯಕದ ಪರ 31 ಹಾಗೂ ವಿರುದ್ಧ 27 ಮತಗಳು ಬಿದ್ದವು.

ಈ ವಿಧೇಯಕ ವಿಧಾನಸಭೆಯಲ್ಲಿ ಸೆಪ್ಟೆಂಬರ್​ನಲ್ಲಿ ಅಂಗೀಕಾರವಾಗಿತ್ತು. ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರವಾದಾಗ, ಸರ್ಕಾರಕ್ಕೆ ತರಾತುರಿ ಏಕೆ ಎಂದು ಪ್ರಶ್ನಿಸಿದ್ದ ಎಚ್.ಡಿ.ಕುಮಾರಸ್ವಾಮಿಯವರ ಪಕ್ಷ ಇಂದು ವಿಧಾನಪರಿಷತ್​ನಲ್ಲಿ ಬಿಲ್​ ಬೆಂಬಲಿಸಿದ್ದು ಗಮನ ಸೆಳೆಯಿತು

ಭೂ ಸುಧಾರಣಾ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್​ನಲ್ಲಿ ಅಂಗೀಕಾರ; JDS ಬೆಂಬಲ

Published On - 7:09 pm, Tue, 8 December 20

ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ