AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್, ಯದುವೀರ್ ಸಿಂಗ್​ಗೆ ಸ್ವಾಗತ

ಬೆಂಗಳೂರು: ಕರ್ನಾಟಕದ ರೈತ ಚಳುವಳಿಯನ್ನು ಬಲಗೊಳಿಸಲು ರಾಷ್ಟ್ರೀಯ ನಾಯಕರಾದ ರಾಕೇಶ್ ಟಿಕಾಯಿತ್ ಮತ್ತು ಯದುವೀರ್ ಸಿಂಗ್ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಇಂದು ಬೆಂಗಳೂರಿನ ಆನಂದರಾವ್ ಸರ್ಕಾರದಲ್ಲಿರುವ ಗಾಂಧಿ ಪ್ರತಿಮೆಗೆ ಕೇಂದ್ರದ ರೈತ ನಾಯಕರು ರಾಜ್ಯದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಜೊತೆಗೂಡಿ ಮಾಲಾರ್ಪಣೆ ಮಾಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಂತರ ಅವರನ್ನು ಶಿವಮೊಗ್ಗಕ್ಕೆ ಬೀಳ್ಕೊಡಲಾಯಿತು. ಕಿಸಾನ್ ಸಂಯುಕ್ತ ಮೋರ್ಚಾ ರಾಷ್ಟ್ರೀಯ ಮುಖಂಡರುಗಳಾದ ರಾಕೇಶ್ ಟಿಕಾಯತ್, ಯದುವೀರ್ ಸಿಂಗ್, ದರ್ಶನ್ ಪಾಲ್ ಅವರನ್ನು ಬೆಂಗಳೂರಿನ ಮೌರ್ಯ ಸರ್ಕಲ್​ನಲ್ಲಿ […]

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್, ಯದುವೀರ್ ಸಿಂಗ್​ಗೆ ಸ್ವಾಗತ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್, ಯದುವೀರ್ ಸಿಂಗ್​ಗೆ ಸ್ವಾಗತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 20, 2021 | 2:31 PM

Share

ಬೆಂಗಳೂರು: ಕರ್ನಾಟಕದ ರೈತ ಚಳುವಳಿಯನ್ನು ಬಲಗೊಳಿಸಲು ರಾಷ್ಟ್ರೀಯ ನಾಯಕರಾದ ರಾಕೇಶ್ ಟಿಕಾಯಿತ್ ಮತ್ತು ಯದುವೀರ್ ಸಿಂಗ್ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಇಂದು ಬೆಂಗಳೂರಿನ ಆನಂದರಾವ್ ಸರ್ಕಾರದಲ್ಲಿರುವ ಗಾಂಧಿ ಪ್ರತಿಮೆಗೆ ಕೇಂದ್ರದ ರೈತ ನಾಯಕರು ರಾಜ್ಯದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಜೊತೆಗೂಡಿ ಮಾಲಾರ್ಪಣೆ ಮಾಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಂತರ ಅವರನ್ನು ಶಿವಮೊಗ್ಗಕ್ಕೆ ಬೀಳ್ಕೊಡಲಾಯಿತು.

ಕಿಸಾನ್ ಸಂಯುಕ್ತ ಮೋರ್ಚಾ ರಾಷ್ಟ್ರೀಯ ಮುಖಂಡರುಗಳಾದ ರಾಕೇಶ್ ಟಿಕಾಯತ್, ಯದುವೀರ್ ಸಿಂಗ್, ದರ್ಶನ್ ಪಾಲ್ ಅವರನ್ನು ಬೆಂಗಳೂರಿನ ಮೌರ್ಯ ಸರ್ಕಲ್​ನಲ್ಲಿ ಸ್ವಾಗತಿಸಿ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಶಿವಮೊಗ್ಗ ಕಿಸಾನ್ ಪಂಚಾಯತ್ ನಲ್ಲಿ ಭಾಗವಹಿಸಲು ಬೆಂಗಳೂರಿನಿಂದ ರಾಲಿ ಮೂಲಕ ರಾಜ್ಯ ರೈತ ಮುಖಂಡರಾದ ಕುರುಬೂರು ಶಾಂತಕುಮಾರ್. ಚುಕ್ಕಿ ನಂಜುಂಡಸ್ವಾಮಿ. ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್ ಅವರ ಜೊತೆಯಲ್ಲಿ ತೆರಳಿದರು.

Published On - 2:28 pm, Sat, 20 March 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು