AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಳಿಂಬೆ ಬೆಳೆಗೆ ದುಂಡಾಣು ಅಂಗ ಮಾರಿ ರೋಗಬಾಧೆ; ಟ್ರ್ಯಾಕ್ಟರ್​ನಿಂದ ಬೆಳೆ ನಾಶಕ್ಕೆ ಮುಂದಾದ ಬಳ್ಳಾರಿ ರೈತ

ಕಳೆದ ಆರೇಳು ತಿಂಗಳಲ್ಲಿ ಮಳೆಯ ಪ್ರಮಾಣ ಜಾಸ್ತಿಯಾಗಿರುವುದರಿಂದ ಗಿಡದಲ್ಲಿ ಬೆಳೆದಿದ್ದ ದಾಳಿಂಬೆ ಕಾಯಿ ಮೇಲೆ ಕೆಂಪು ಚುಕ್ಕೆಯಕಾರದ ರೋಗ ಕಾಣಿಸಿಕೊಂಡು ಫಸಲು ಅಷ್ಟೇನು ಸರಿಯಾಗಿರಲಿಲ್ಲ. ಹೀಗಾಗಿ, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಈ ಕಾರಣಕ್ಕೆ ಬೆಳೆ ನಾಶದ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಬೆಳೆಗಾರ ಕಂಠಿ ಕಂಟೆಪ್ಪ ಬೇಸರ ವ್ಯಕ್ತಿಪಡಿಸಿದ್ದಾರೆ.

ದಾಳಿಂಬೆ ಬೆಳೆಗೆ ದುಂಡಾಣು ಅಂಗ ಮಾರಿ ರೋಗಬಾಧೆ; ಟ್ರ್ಯಾಕ್ಟರ್​ನಿಂದ ಬೆಳೆ ನಾಶಕ್ಕೆ ಮುಂದಾದ ಬಳ್ಳಾರಿ ರೈತ
ಟ್ರ್ಯಾಕ್ಟರ್​ನಿಂದ ಬೆಳೆ ನಾಶಕ್ಕೆ ಮುಂದಾದ ಬಳ್ಳಾರಿ ರೈತ
TV9 Web
| Edited By: |

Updated on: Jul 11, 2021 | 3:19 PM

Share

ಬಳ್ಳಾರಿ: ಕೊರೊನಾ ಎರಡನೇ ಅಲೆಯ ತೀವ್ರತೆಯನ್ನು ಅರಿತ ರಾಜ್ಯ ಸರ್ಕಾರ ಲಾಕ್​ಡೌನ್​ ಘೋಷಿಸಿತ್ತು. ಹೀಗಾಗಿ ಎಲ್ಲಾ ವ್ಯಾಪಾರ, ವ್ಯವಹಾರಗಳು ಬಂದ್​ ಆಗಿತ್ತು. ಆದರೆ ಈಗ ಪರಿಸ್ಥಿತಿ ಸುಧಾರಿಸಿದೆ. ಜುಲೈ 5 ರಿಂದ ಲಾಕ್​ಡೌನ್​ ಮುಕ್ತಾಯವಾಗಿದೆ. ಅದರಂತೆ ಎಲ್ಲಾ ಚಟುವಟಿಕೆಗಳು ಪುನರಾರಂಭವಾಗಿದ್ದು, ರೈತರು ಕೂಡ ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಿದ್ದಾರೆ. ಅಂತೆಯೇ ವಿಜಯನಗರದಲ್ಲಿ ಕೂಡ ಪರಿಸ್ಥಿತಿ ಸುಧಾರಿಸುತ್ತಿದೆ. ಆದರೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ನಂದಿಹಳ್ಳಿ ಗ್ರಾಮದ ರೈತ ಮಾತ್ರ ಬೆಳೆ ರೋಗದಿಂದಾಗಿ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ವಿಜಯನಗರ ಜಿಲ್ಲೆಯ ಕಂಠಿ ಕಂಟೆಪ್ಪ ಎಂಬುವವರ ಸುಮಾರು ಐದು ಎಕರೆ ಹೊಲದಲ್ಲಿ ಬೆಳೆದಿದ್ದ ದಾಳಿಂಬೆ ಗಿಡಗಳಿಗೆ ದುಂಡಾಣು ಅಂಗ ಮಾರಿ ರೋಗಬಾಧೆ ಎದುರಾಗಿದ್ದು, ರೋಗಬಾಧೆಯಿಂದ ದಾಳಿಂಬೆ ಗಿಡಗಳು ಸಂಪೂರ್ಣ ಹಾಳಾಗಿ ಹೋಗಿದೆ. ಹೀಗಾಗಿ, ಟ್ರ್ಯಾಕ್ಟರ್ ಸಹಾಯದೊಂದಿಗೆ ತೋಟಗಾರಿಕೆ ಬೆಳೆಗಾರ ಕಂಠಿ ಕಂಟೆಪ್ಪನವರು, ದಾಳಿಂಬೆ ಗಿಡಗಳನ್ನ ನಾಶ ಮಾಡಲು ಮುಂದಾಗಿದ್ದಾರೆ.

ಕಳೆದ ಮೂರು ವರ್ಷಗಳ ಹಿಂದೆಯೇ ತನ್ನ ಐದು ಎಕರೆ ಹೊಲದಲ್ಲಿ ದಾಳಿಂಬೆ ಗಿಡಗಳನ್ನು ಬೆಳೆಯಲಾಗಿದೆ. ಅಂದಾಜು 14 ಲಕ್ಷ ರೂಪಾಯಿ ವರೆಗೂ ಈ ಬೆಳೆಗೆ ಖರ್ಚು ಮಾಡಲಾಗಿದೆ. ಕೇವಲ 1.20 ಲಕ್ಷ ರೂಪಾಯಿಗಳವರೆಗೆ ಮಾತ್ರ ಆದಾಯ ಬಂದಿದೆ. ಮನುಷ್ಯನ ನಡುವಿನ ಎತ್ತರಕ್ಕೆ ಬೆಳೆದು ನಿಂತಿದ್ದ ಈ ದಾಳಿಂಬೆ ಗಿಡಗಳಿಗೆ ದುಂಡಾಣು ಅಂಗ ಮಾರಿ ರೋಗಬಾಧೆ ಕಾಣಿಸಿಕೊಂಡ ಪರಿಣಾಮ ಈ ದಾಳಿಂಬೆ ಬೆಳೆನಾಶಕ್ಕೆ ಮುಂದಾಗಿದ್ದೇನೆ ಎಂದು ಬೆಳೆಗಾರ ಕಂಠಿ ಕಂಟೆಪ್ಪ ತಿಳಿಸಿದ್ದಾರೆ.

ಕಳೆದ ಆರೇಳು ತಿಂಗಳಲ್ಲಿ ಮಳೆಯ ಪ್ರಮಾಣ ಜಾಸ್ತಿಯಾಗಿರುವುದರಿಂದ ಗಿಡದಲ್ಲಿ ಬೆಳೆದಿದ್ದ ದಾಳಿಂಬೆ ಕಾಯಿ ಮೇಲೆ ಕೆಂಪು ಚುಕ್ಕೆಯಕಾರದ ರೋಗ ಕಾಣಿಸಿಕೊಂಡು ಫಸಲು ಅಷ್ಟೇನು ಸರಿಯಾಗಿರಲಿಲ್ಲ. ಹೀಗಾಗಿ, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಈ ಕಾರಣಕ್ಕೆ ಬೆಳೆ ನಾಶದ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಬೆಳೆಗಾರ ಕಂಠಿ ಕಂಟೆಪ್ಪ ಬೇಸರ ವ್ಯಕ್ತಿಪಡಿಸಿದ್ದಾರೆ.

ಇದನ್ನೂ ಓದಿ: ಒಂದು ತಿಂಗಳ ಕಾಲ ಸುರಿದ ಮಳೆಯಿಂದ ಈರುಳ್ಳಿ ಬೆಳೆಗೆ ಹಾನಿ; ನೇರಳೆ‌ ಮಚ್ಚೆ ರೋಗದಿಂದ ಕಂಗಾಲಾದ ಚಿತ್ರದುರ್ಗದ ರೈತರು

ಬಂಗಾರದಂಥ ಬೆಳೆಗೆ ಮಜ್ಜಿಗೆ ರೋಗದ ಕಾಟ: ಬೇಸತ್ತ ರೈತರಿಂದ ಮೆಣಸಿನಕಾಯಿ ಬೆಳೆ ನಾಶ..!

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು