AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ‘ಬಾರುಕೋಲು’ ರಾಜಕಾರಣಿಗಳಿಗೆ ತಾಗದಂತೆ ವಿಧಾನಸೌಧ, ರಾಜಭವನಕ್ಕೆ ಬಿಗಿ ಭದ್ರತೆ

ರೈತ ಮುಖಂಡರು ರೈಲ್ವೆ ನಿಲ್ದಾಣದಿಂದ ಮೆರವಣಿಗೆಯಲ್ಲಿ ಬರುವುದಾಗಿ ಹೇಳಿದ್ದಾರೆ. ಱಲಿ ನಡೆಸಲು ಈಗಾಗಲೇ ಮನವಿ ಮಾಡಿದ್ದಾರೆ.

ರೈತರ ‘ಬಾರುಕೋಲು’ ರಾಜಕಾರಣಿಗಳಿಗೆ ತಾಗದಂತೆ ವಿಧಾನಸೌಧ, ರಾಜಭವನಕ್ಕೆ ಬಿಗಿ ಭದ್ರತೆ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on: Dec 08, 2020 | 6:21 PM

Share

ಬೆಂಗಳೂರು: ರೈತರ ಹೋರಾಟದ ಕಾವು ದಿನೇ ದಿನೇ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ರೈತ ಮುಖಂಡರು ನಾಳೆ ಬಾರುಕೋಲು ಚಳವಳಿಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ, ರಾಜಭವನದ ಸುತ್ತಮುತ್ತ ಪೊಲೀಸ್ ಬಿಗಿಭದ್ರತೆ ಇರಲಿದೆ ಎಂದು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ಹೇಳಿಕೆ ನೀಡಿದ್ದಾರೆ.

ವಿಧಾನಸೌಧ ಸುತ್ತಮುತ್ತ ಒಂದು ಸಾವಿರಕ್ಕೂ ಅಧಿಕ ಪೊಲೀಸ್​ ಸಿಬ್ಬಂದಿ ನಿಯೋಜಿಸಲು ನಿರ್ಧರಿಸಲಾಗಿದೆ. ಪರಿಸ್ಥಿತಿ ನೋಡಿಕೊಂಡು ಸಿಬ್ಬಂದಿಯನ್ನು ನಿಯೋಜನೆ ಮಾಡುತ್ತೇವೆ. 10 ಎಸಿಪಿ, 3 ಡಿಸಿಪಿ, 30 ಇನ್​ಸ್ಪೆಕ್ಟರ್, 40 ಕೆಎಸ್ಆರ್​ಪಿ ಹಾಗೂ 40 ಸಿಎಆರ್ ತುಕಡಿ ಇರಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ರೈತ ಮುಖಂಡರು ರೈಲ್ವೆ ನಿಲ್ದಾಣದಿಂದ ಮೆರವಣಿಗೆಯಲ್ಲಿ ಬರುವುದಾಗಿ ಹೇಳಿದ್ದಾರೆ. ಱಲಿ ನಡೆಸಲು ಈಗಾಗಲೇ ಮನವಿ ಮಾಡಿದ್ದಾರೆ. ಅದರೆ, ಪೊಲೀಸ್ ಇಲಾಖೆಯಿಂದ ಇದುವರೆಗೆ ಯಾವುದೇ ಅನುಮತಿ ನೀಡಿಲ್ಲ. ರಾತ್ರಿಯ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಅನುಮತಿ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ನಾಳೆ ಯಾವ ರೀತಿಯಲ್ಲಿ ಪ್ರತಿಭಟನೆ ಮಾಡ್ತಾರೆ ನೋಡಬೇಕು. ನಾವು ಈಗಾಗಲೇ ಎಲ್ಲ ರೀತಿಯ ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಒಂದು ವೇಳೆ ನಿಯಮವನ್ನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ್ರೆ ಕೂಡಲೇ ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತ ನಾಳೆಯ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ರೈತ ನಾಯಕ ಕುರುಬೂರು ಶಾಂತಕುಮಾರ್ ಹಾಗೂ ಬಡಗಲಪುರ ನಾಗೇಂದ್ರ ಬಾರುಕೋಲು ಚಳುವಳಿಯಲ್ಲಿ ನಾವು ಭಾಗವಹಿಸುತ್ತಿಲ್ಲ ಎಂದಿದ್ದಾರೆ. ಬಾರುಕೋಲು ಚಳುವಳಿ ಬಗ್ಗೆ ಕೋಡಿಹಳ್ಳಿ ನಮ್ಮ ಜತೆ ಚರ್ಚಿಸಿಲ್ಲ. ಆದರೆ, ಅನ್ನದಾತರಿಂದ 2 ದಿನಗಳ ಕಾಲ ಸಿಲಿಕಾನ್ ಸಿಟಿಯಲ್ಲಿ ಬೃಹತ್ ಪ್ರತಿಭಟನೆ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ರೈತರು ಅಕ್ಷರ ಕಲಿಯದಿದ್ದರೂ ದೇಶಕ್ಕೆ ಅನ್ನ ಹಾಕುತ್ತಾರೆ; ಬೊಮ್ಮಾಯಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ