AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ‘ಬಾರುಕೋಲು’ ರಾಜಕಾರಣಿಗಳಿಗೆ ತಾಗದಂತೆ ವಿಧಾನಸೌಧ, ರಾಜಭವನಕ್ಕೆ ಬಿಗಿ ಭದ್ರತೆ

ರೈತ ಮುಖಂಡರು ರೈಲ್ವೆ ನಿಲ್ದಾಣದಿಂದ ಮೆರವಣಿಗೆಯಲ್ಲಿ ಬರುವುದಾಗಿ ಹೇಳಿದ್ದಾರೆ. ಱಲಿ ನಡೆಸಲು ಈಗಾಗಲೇ ಮನವಿ ಮಾಡಿದ್ದಾರೆ.

ರೈತರ ‘ಬಾರುಕೋಲು’ ರಾಜಕಾರಣಿಗಳಿಗೆ ತಾಗದಂತೆ ವಿಧಾನಸೌಧ, ರಾಜಭವನಕ್ಕೆ ಬಿಗಿ ಭದ್ರತೆ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on: Dec 08, 2020 | 6:21 PM

Share

ಬೆಂಗಳೂರು: ರೈತರ ಹೋರಾಟದ ಕಾವು ದಿನೇ ದಿನೇ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ರೈತ ಮುಖಂಡರು ನಾಳೆ ಬಾರುಕೋಲು ಚಳವಳಿಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ, ರಾಜಭವನದ ಸುತ್ತಮುತ್ತ ಪೊಲೀಸ್ ಬಿಗಿಭದ್ರತೆ ಇರಲಿದೆ ಎಂದು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ಹೇಳಿಕೆ ನೀಡಿದ್ದಾರೆ.

ವಿಧಾನಸೌಧ ಸುತ್ತಮುತ್ತ ಒಂದು ಸಾವಿರಕ್ಕೂ ಅಧಿಕ ಪೊಲೀಸ್​ ಸಿಬ್ಬಂದಿ ನಿಯೋಜಿಸಲು ನಿರ್ಧರಿಸಲಾಗಿದೆ. ಪರಿಸ್ಥಿತಿ ನೋಡಿಕೊಂಡು ಸಿಬ್ಬಂದಿಯನ್ನು ನಿಯೋಜನೆ ಮಾಡುತ್ತೇವೆ. 10 ಎಸಿಪಿ, 3 ಡಿಸಿಪಿ, 30 ಇನ್​ಸ್ಪೆಕ್ಟರ್, 40 ಕೆಎಸ್ಆರ್​ಪಿ ಹಾಗೂ 40 ಸಿಎಆರ್ ತುಕಡಿ ಇರಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ರೈತ ಮುಖಂಡರು ರೈಲ್ವೆ ನಿಲ್ದಾಣದಿಂದ ಮೆರವಣಿಗೆಯಲ್ಲಿ ಬರುವುದಾಗಿ ಹೇಳಿದ್ದಾರೆ. ಱಲಿ ನಡೆಸಲು ಈಗಾಗಲೇ ಮನವಿ ಮಾಡಿದ್ದಾರೆ. ಅದರೆ, ಪೊಲೀಸ್ ಇಲಾಖೆಯಿಂದ ಇದುವರೆಗೆ ಯಾವುದೇ ಅನುಮತಿ ನೀಡಿಲ್ಲ. ರಾತ್ರಿಯ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಅನುಮತಿ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ನಾಳೆ ಯಾವ ರೀತಿಯಲ್ಲಿ ಪ್ರತಿಭಟನೆ ಮಾಡ್ತಾರೆ ನೋಡಬೇಕು. ನಾವು ಈಗಾಗಲೇ ಎಲ್ಲ ರೀತಿಯ ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಒಂದು ವೇಳೆ ನಿಯಮವನ್ನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ್ರೆ ಕೂಡಲೇ ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತ ನಾಳೆಯ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ರೈತ ನಾಯಕ ಕುರುಬೂರು ಶಾಂತಕುಮಾರ್ ಹಾಗೂ ಬಡಗಲಪುರ ನಾಗೇಂದ್ರ ಬಾರುಕೋಲು ಚಳುವಳಿಯಲ್ಲಿ ನಾವು ಭಾಗವಹಿಸುತ್ತಿಲ್ಲ ಎಂದಿದ್ದಾರೆ. ಬಾರುಕೋಲು ಚಳುವಳಿ ಬಗ್ಗೆ ಕೋಡಿಹಳ್ಳಿ ನಮ್ಮ ಜತೆ ಚರ್ಚಿಸಿಲ್ಲ. ಆದರೆ, ಅನ್ನದಾತರಿಂದ 2 ದಿನಗಳ ಕಾಲ ಸಿಲಿಕಾನ್ ಸಿಟಿಯಲ್ಲಿ ಬೃಹತ್ ಪ್ರತಿಭಟನೆ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ರೈತರು ಅಕ್ಷರ ಕಲಿಯದಿದ್ದರೂ ದೇಶಕ್ಕೆ ಅನ್ನ ಹಾಕುತ್ತಾರೆ; ಬೊಮ್ಮಾಯಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

Follow Us
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ