AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆ ಅಂತಾನೇ ಗೊತ್ತಿಲ್ಲ: ಬಿ.ಸಿ. ಪಾಟೀಲ್ ವಿರುದ್ಧ ರೈತರು ಕಿಡಿಕಿಡಿ

ರೈತರ ತರಾಟೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೆಲಕಾಲ ತಬ್ಬಿಬ್ಬಾಗಿದ್ದಾರೆ. ನೀವು ಆ ರೀತಿ ಮಾತನಾಡಬಾರದೆಂದು ರೈತರಿಗೆ ಉಪದೇಶ ನೀಡಲು ಮುಂದಾಗಿದ್ದಾರೆ.

ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆ ಅಂತಾನೇ ಗೊತ್ತಿಲ್ಲ: ಬಿ.ಸಿ. ಪಾಟೀಲ್ ವಿರುದ್ಧ ರೈತರು ಕಿಡಿಕಿಡಿ
ಸಚಿವ ಬಿ.ಸಿ.ಪಾಟೀಲ್​
TV9 Web
| Edited By: |

Updated on:Apr 06, 2022 | 8:47 PM

Share

ಮೈಸೂರು: ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ನೀಡಿದ ಹೇಳಿಕೆಯ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೀಕ್ ಮೈಂಡೆಡ್ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಬಿ.ಸಿ. ಪಾಟೀಲ್ ಮಾತನಾಡಿದ್ದರು. ಈ ಹೇಳಿಕೆಗೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಬಿ.ಸಿ. ಪಾಟೀಲ್​ಗೆ ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆ ಅಂತಾನೇ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಛೀ, ಥೂ ಎಂದು ಕಿಡಿಕಾರಿರುವ ರೈತರು ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆಂಬುದೇ ಗೊತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಸಾಮಾನ್ಯ ಪರಿಜ್ಞಾನವೂ ಇಲ್ಲ. ಜಿಲ್ಲಾಡಳಿತ ಕೇಳಿದರೆ ಸರ್ಕಾರ ಆದೇಶ ಮಾಡಬೇಕು ಅನ್ನುತ್ತೆ. ಆಡಳಿತ ನಡೆಸಲು ಗೊತ್ತಿಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ರೈತರು ಗುಡುಗಿದ್ದಾರೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಛೀ, ಥೂ ಎಂದು ರೈತರು ಕಿಡಿಕಾರಿದ್ದಾರೆ.

ನೀವು ಹೇಳಿದ್ದನ್ನೆಲ್ಲಾ ಕೇಳಿಕೊಂಡು ಕೈಮುಗಿದು ನಿಲ್ಲಬೇಕಾ ಬಿ.ಸಿ. ಪಾ. ಮರುಪ್ರಶ್ನೆ ರೈತರ ತರಾಟೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೆಲಕಾಲ ತಬ್ಬಿಬ್ಬಾಗಿದ್ದಾರೆ. ನೀವು ಆ ರೀತಿ ಮಾತನಾಡಬಾರದೆಂದು ರೈತರಿಗೆ ಉಪದೇಶ ನೀಡಲು ಮುಂದಾಗಿದ್ದಾರೆ. ಅದಕ್ಕೆ, ಮತ್ತಷ್ಟು ಆಕ್ರೋಶಗೊಂಡ ರೈತರು, ನೀವು ಹೇಳಿದ್ದನ್ನೆಲ್ಲಾ ಕೇಳಿಕೊಂಡು ಕೈಮುಗಿದು ನಿಲ್ಲಬೇಕಾ, ನೀವೇನು ಆಕಾಶದಿಂದ ಧರೆಗಿಳಿದು ಬಂದಿದ್ದೀರಾ ಎಂದು ಮರುಪ್ರಶ್ನೆ ಹಾಕಿದ್ದಾರೆ.

ರೈತರು ಬೆಳೆದ ಅನ್ನ ತಿಂದು ನೀವು ಮಜಾ ಮಾಡುತ್ತಿದ್ದೀರಿ. ಹಸಿರು ಶಾಲು ಹಾಕ್ಕೊಂಡು ರೈತರ ಮರ್ಯಾದೆ ಕಳೆಯುತ್ತಿದ್ದೀರಿ. ನಿಮ್ಮ ಸರ್ಕಾರ ಮತ್ತು ನಿಮ್ಮ ನಡವಳಿಕೆಗೆ ನಾಚಿಕೆಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ಗೆ ರೈತ ಮುಖಂಡರು ಬೆವರಿಳಿಸಿದ್ದಾರೆ.

ರೈತರ ಆತ್ಮಹತ್ಯೆಗೆ ಸರ್ಕಾರದ ನೀತಿಗಳು ಕಾರಣವಲ್ಲ; ಅವರ ವೀಕ್​ ಮೈಂಡ್ ಕಾರಣ: ಕೃಷಿ ಸಚಿವ ಬಿ.ಸಿ.ಪಾಟೀಲ್

Published On - 3:00 pm, Tue, 19 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!