AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆ ಅಂತಾನೇ ಗೊತ್ತಿಲ್ಲ: ಬಿ.ಸಿ. ಪಾಟೀಲ್ ವಿರುದ್ಧ ರೈತರು ಕಿಡಿಕಿಡಿ

ರೈತರ ತರಾಟೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೆಲಕಾಲ ತಬ್ಬಿಬ್ಬಾಗಿದ್ದಾರೆ. ನೀವು ಆ ರೀತಿ ಮಾತನಾಡಬಾರದೆಂದು ರೈತರಿಗೆ ಉಪದೇಶ ನೀಡಲು ಮುಂದಾಗಿದ್ದಾರೆ.

ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆ ಅಂತಾನೇ ಗೊತ್ತಿಲ್ಲ: ಬಿ.ಸಿ. ಪಾಟೀಲ್ ವಿರುದ್ಧ ರೈತರು ಕಿಡಿಕಿಡಿ
ಸಚಿವ ಬಿ.ಸಿ.ಪಾಟೀಲ್​
TV9 Web
| Updated By: ganapathi bhat|

Updated on:Apr 06, 2022 | 8:47 PM

Share

ಮೈಸೂರು: ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ನೀಡಿದ ಹೇಳಿಕೆಯ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೀಕ್ ಮೈಂಡೆಡ್ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಬಿ.ಸಿ. ಪಾಟೀಲ್ ಮಾತನಾಡಿದ್ದರು. ಈ ಹೇಳಿಕೆಗೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಬಿ.ಸಿ. ಪಾಟೀಲ್​ಗೆ ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆ ಅಂತಾನೇ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಛೀ, ಥೂ ಎಂದು ಕಿಡಿಕಾರಿರುವ ರೈತರು ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆಂಬುದೇ ಗೊತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಸಾಮಾನ್ಯ ಪರಿಜ್ಞಾನವೂ ಇಲ್ಲ. ಜಿಲ್ಲಾಡಳಿತ ಕೇಳಿದರೆ ಸರ್ಕಾರ ಆದೇಶ ಮಾಡಬೇಕು ಅನ್ನುತ್ತೆ. ಆಡಳಿತ ನಡೆಸಲು ಗೊತ್ತಿಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ರೈತರು ಗುಡುಗಿದ್ದಾರೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಛೀ, ಥೂ ಎಂದು ರೈತರು ಕಿಡಿಕಾರಿದ್ದಾರೆ.

ನೀವು ಹೇಳಿದ್ದನ್ನೆಲ್ಲಾ ಕೇಳಿಕೊಂಡು ಕೈಮುಗಿದು ನಿಲ್ಲಬೇಕಾ ಬಿ.ಸಿ. ಪಾ. ಮರುಪ್ರಶ್ನೆ ರೈತರ ತರಾಟೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೆಲಕಾಲ ತಬ್ಬಿಬ್ಬಾಗಿದ್ದಾರೆ. ನೀವು ಆ ರೀತಿ ಮಾತನಾಡಬಾರದೆಂದು ರೈತರಿಗೆ ಉಪದೇಶ ನೀಡಲು ಮುಂದಾಗಿದ್ದಾರೆ. ಅದಕ್ಕೆ, ಮತ್ತಷ್ಟು ಆಕ್ರೋಶಗೊಂಡ ರೈತರು, ನೀವು ಹೇಳಿದ್ದನ್ನೆಲ್ಲಾ ಕೇಳಿಕೊಂಡು ಕೈಮುಗಿದು ನಿಲ್ಲಬೇಕಾ, ನೀವೇನು ಆಕಾಶದಿಂದ ಧರೆಗಿಳಿದು ಬಂದಿದ್ದೀರಾ ಎಂದು ಮರುಪ್ರಶ್ನೆ ಹಾಕಿದ್ದಾರೆ.

ರೈತರು ಬೆಳೆದ ಅನ್ನ ತಿಂದು ನೀವು ಮಜಾ ಮಾಡುತ್ತಿದ್ದೀರಿ. ಹಸಿರು ಶಾಲು ಹಾಕ್ಕೊಂಡು ರೈತರ ಮರ್ಯಾದೆ ಕಳೆಯುತ್ತಿದ್ದೀರಿ. ನಿಮ್ಮ ಸರ್ಕಾರ ಮತ್ತು ನಿಮ್ಮ ನಡವಳಿಕೆಗೆ ನಾಚಿಕೆಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ಗೆ ರೈತ ಮುಖಂಡರು ಬೆವರಿಳಿಸಿದ್ದಾರೆ.

ರೈತರ ಆತ್ಮಹತ್ಯೆಗೆ ಸರ್ಕಾರದ ನೀತಿಗಳು ಕಾರಣವಲ್ಲ; ಅವರ ವೀಕ್​ ಮೈಂಡ್ ಕಾರಣ: ಕೃಷಿ ಸಚಿವ ಬಿ.ಸಿ.ಪಾಟೀಲ್

Published On - 3:00 pm, Tue, 19 January 21

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್