AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆ ಅಂತಾನೇ ಗೊತ್ತಿಲ್ಲ: ಬಿ.ಸಿ. ಪಾಟೀಲ್ ವಿರುದ್ಧ ರೈತರು ಕಿಡಿಕಿಡಿ

ರೈತರ ತರಾಟೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೆಲಕಾಲ ತಬ್ಬಿಬ್ಬಾಗಿದ್ದಾರೆ. ನೀವು ಆ ರೀತಿ ಮಾತನಾಡಬಾರದೆಂದು ರೈತರಿಗೆ ಉಪದೇಶ ನೀಡಲು ಮುಂದಾಗಿದ್ದಾರೆ.

ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆ ಅಂತಾನೇ ಗೊತ್ತಿಲ್ಲ: ಬಿ.ಸಿ. ಪಾಟೀಲ್ ವಿರುದ್ಧ ರೈತರು ಕಿಡಿಕಿಡಿ
ಸಚಿವ ಬಿ.ಸಿ.ಪಾಟೀಲ್​
TV9 Web
| Edited By: |

Updated on:Apr 06, 2022 | 8:47 PM

Share

ಮೈಸೂರು: ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ನೀಡಿದ ಹೇಳಿಕೆಯ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೀಕ್ ಮೈಂಡೆಡ್ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಬಿ.ಸಿ. ಪಾಟೀಲ್ ಮಾತನಾಡಿದ್ದರು. ಈ ಹೇಳಿಕೆಗೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಬಿ.ಸಿ. ಪಾಟೀಲ್​ಗೆ ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆ ಅಂತಾನೇ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಛೀ, ಥೂ ಎಂದು ಕಿಡಿಕಾರಿರುವ ರೈತರು ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆಂಬುದೇ ಗೊತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಸಾಮಾನ್ಯ ಪರಿಜ್ಞಾನವೂ ಇಲ್ಲ. ಜಿಲ್ಲಾಡಳಿತ ಕೇಳಿದರೆ ಸರ್ಕಾರ ಆದೇಶ ಮಾಡಬೇಕು ಅನ್ನುತ್ತೆ. ಆಡಳಿತ ನಡೆಸಲು ಗೊತ್ತಿಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ರೈತರು ಗುಡುಗಿದ್ದಾರೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಛೀ, ಥೂ ಎಂದು ರೈತರು ಕಿಡಿಕಾರಿದ್ದಾರೆ.

ನೀವು ಹೇಳಿದ್ದನ್ನೆಲ್ಲಾ ಕೇಳಿಕೊಂಡು ಕೈಮುಗಿದು ನಿಲ್ಲಬೇಕಾ ಬಿ.ಸಿ. ಪಾ. ಮರುಪ್ರಶ್ನೆ ರೈತರ ತರಾಟೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೆಲಕಾಲ ತಬ್ಬಿಬ್ಬಾಗಿದ್ದಾರೆ. ನೀವು ಆ ರೀತಿ ಮಾತನಾಡಬಾರದೆಂದು ರೈತರಿಗೆ ಉಪದೇಶ ನೀಡಲು ಮುಂದಾಗಿದ್ದಾರೆ. ಅದಕ್ಕೆ, ಮತ್ತಷ್ಟು ಆಕ್ರೋಶಗೊಂಡ ರೈತರು, ನೀವು ಹೇಳಿದ್ದನ್ನೆಲ್ಲಾ ಕೇಳಿಕೊಂಡು ಕೈಮುಗಿದು ನಿಲ್ಲಬೇಕಾ, ನೀವೇನು ಆಕಾಶದಿಂದ ಧರೆಗಿಳಿದು ಬಂದಿದ್ದೀರಾ ಎಂದು ಮರುಪ್ರಶ್ನೆ ಹಾಕಿದ್ದಾರೆ.

ರೈತರು ಬೆಳೆದ ಅನ್ನ ತಿಂದು ನೀವು ಮಜಾ ಮಾಡುತ್ತಿದ್ದೀರಿ. ಹಸಿರು ಶಾಲು ಹಾಕ್ಕೊಂಡು ರೈತರ ಮರ್ಯಾದೆ ಕಳೆಯುತ್ತಿದ್ದೀರಿ. ನಿಮ್ಮ ಸರ್ಕಾರ ಮತ್ತು ನಿಮ್ಮ ನಡವಳಿಕೆಗೆ ನಾಚಿಕೆಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ಗೆ ರೈತ ಮುಖಂಡರು ಬೆವರಿಳಿಸಿದ್ದಾರೆ.

ರೈತರ ಆತ್ಮಹತ್ಯೆಗೆ ಸರ್ಕಾರದ ನೀತಿಗಳು ಕಾರಣವಲ್ಲ; ಅವರ ವೀಕ್​ ಮೈಂಡ್ ಕಾರಣ: ಕೃಷಿ ಸಚಿವ ಬಿ.ಸಿ.ಪಾಟೀಲ್

Published On - 3:00 pm, Tue, 19 January 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ