AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಬಲ ಬೆಲೆ ಘೋಷಿಸಿ ರಾಗಿ ಖರೀದಿಸಿದ ಸರ್ಕಾರದಿಂದ ಹಣ ನೀಡದೆ ನಿರ್ಲಕ್ಷ್ಯ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಈಗಾಗಲೇ ಅನೇಕ ರೈತರು ಆಹಾರ ಇಲಾಖೆ ಕಚೇರಿಗೆ ಅಲೆದಲೆದು‌ ಸುಸ್ತಾಗಿದ್ದಾರೆ. ಹೊಸದುರ್ಗ, ಹೊಳಲ್ಕೆರೆ ತಾಲೂಕು ಕಚೇರಿ, ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಗೂ ತೆರಳಿ ರಾಗಿ ಹಣ ನೀಡುವಂತೆ ಮನವಿ ಮಾಡಿದ್ದೇವೆ. ಆದರೂ ಕೊರೊನಾ ನೆಪ ಹೇಳಿ ಕಳುಹಿಸಿದ್ದಾರೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ಬೆಂಬಲ ಬೆಲೆ ಘೋಷಿಸಿ ರಾಗಿ ಖರೀದಿಸಿದ ಸರ್ಕಾರದಿಂದ ಹಣ ನೀಡದೆ ನಿರ್ಲಕ್ಷ್ಯ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ರಾಗಿ ಬೆಳೆ
Follow us
TV9 Web
| Updated By: preethi shettigar

Updated on: Jun 25, 2021 | 2:57 PM

ಚಿತ್ರದುರ್ಗ: ದೇಶದ ಬೆನ್ನೆಲುಬಾದ ರೈತರ ನೆರವಿಗೆ ನಾನಾ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಆದರೆ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಅನೇಕ ಯೋಜನೆಗಳು ವಿಫಲಗೊಳ್ಳುತ್ತಿದ್ದು, ರೈತರು ಈ ಯೋಜನೆಗಳ ಫಲಾನುಭವಿಸಗಳಾಗದೆ ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಕೋಟೆನಾಡು ಚಿತ್ರದುರ್ಗದ ರಾಗಿ ಕೇಂದ್ರದಲ್ಲಿ ರಾಗಿ ಖರೀದಿಸಿದ ಸರ್ಕಾರ ಈವರೆಗೆ ಹಣ ನೀಡಿಲ್ಲ. ಈ ವಿಚಾರ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಬೆಳೆದ ಬೆಳೆಗೆ ಬೆಲೆ ಸಿಗದೆ ಅನ್ನದಾತರು ಕಂಗಾಲಾಗಿದ್ದಾರೆ.

ಚಿತ್ರದುರ್ಗದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ರಾಗಿ ಬೆಳೆ ಬೆಳೆಯಲಾಗುತ್ತದೆ. ಆದರೆ, ರಾಗಿ ಬೆಲೆ ಕ್ವಿಂಟಲ್​ಗೆ 2.500ಕ್ಕೆ ಇಳಿದ ಕಾರಣ ಸರ್ಕಾರ‌ ಬೆಂಬಲ ಬೆಲೆ ಘೋಷಿಸಿತ್ತು. ರಾಗಿ ಕೇಂದ್ರಗಳನ್ನು ತೆರೆದು ಕ್ವಿಂಟಲ್ ಗೆ 3.295 ರೂಪಾಯಿಯಂತೆ ಖರೀದಿ ಮಾಡಲಾಗಿತ್ತು. ಹೀಗಾಗಿ, ಸರ್ಕಾರ ಹೇಗೋ ನೆರವಿಗೆ ಬಂತಲ್ಲ ಎಂದು ರೈತರು ನಿಟ್ಟುಸಿರು‌ಬಿಟ್ಟಿದ್ದರು. ಆದರೆ ರಾಗಿ ಖರೀದಿಸಿ ಮೂರು ತಿಂಗಳು ಕಳೆದರೂ ಬಹುತೇಕ ರೈತರಿಗೆ ಈವರೆಗೆ ಹಣ ಕೈ ಸೇರಿಲ್ಲ ಎಂದು ರೈತ ವೆಂಕಟೇಶ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಅನೇಕ ರೈತರು ಆಹಾರ ಇಲಾಖೆ ಕಚೇರಿಗೆ ಅಲೆದಲೆದು‌ ಸುಸ್ತಾಗಿದ್ದಾರೆ. ಹೊಸದುರ್ಗ, ಹೊಳಲ್ಕೆರೆ ತಾಲೂಕು ಕಚೇರಿ, ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಗೂ ತೆರಳಿ ರಾಗಿ ಹಣ ನೀಡುವಂತೆ ಮನವಿ ಮಾಡಿದ್ದೇವೆ. ಆದರೂ ಕೊರೊನಾ ನೆಪ ಹೇಳಿ ಕಳುಹಿಸಿದ್ದಾರೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ಈ ಬಗ್ಗೆ ಡಿಸಿ ಕವಿತಾ ಮನ್ನಿಕೇರಿ ಅವರನ್ನು ಕೇಳಿದರೆ ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ಮಾಹಿತಿ ಪಡೆದು ಸಂಜೆ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ. ಸದ್ಯ ರೈತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಜಿಲ್ಲಾಡಳಿತಕ್ಕೆ ರೈತ ಮುಖಂಡರು ಎಚ್ಚರಿಕೆ ನೀಡಿದ್ದು, ಕೂಡಲೇ ರಾಗಿ ಖರೀದಿಸಿ ಹಣ ನೀಡದಿದ್ದರೆ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ರಾಗಿ ಖರೀದಿಸಿದ ಆಹಾರ ಇಲಾಖೆ ಈವರೆಗೆ ಬಹುತೇಕ ರೈತರಿಗೆ ಹಣ ನೀಡಿಲ್ಲ. ಹೀಗಾಗಿ, ನೂರಾರು‌ ಜನ ರೈತರು ಕಂಗಾಲಾಗಿದ್ದು‌, ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಹೀಗಾಗಿ, ಇನ್ನಾದರೂ ಸರ್ಕಾರ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಇದನ್ನೂ ಓದಿ:

ಕಳಪೆ ಈರುಳ್ಳಿ ಬೀಜ ನೀಡಿದ ಕಲಾಶ್ ಕಂಪನಿ; ಪರಿಹಾರಕ್ಕೆ ಚಿತ್ರದುರ್ಗ ರೈತರ ಆಗ್ರಹ

ಬಳ್ಳಾರಿಯಲ್ಲಿ ಮೆಣಸಿನಕಾಯಿ ಬೀಜಕ್ಕಾಗಿ ಮುಂದುವರಿದ ರೈತರ ಪರದಾಟ; ತೋಟಗಾರಿಕೆ ಇಲಾಖೆ ಕಚೇರಿಗೆ ನುಗ್ಗಿ ಆಕ್ರೋಶ

ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ