AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಬಲ ಬೆಲೆ ಘೋಷಿಸಿ ರಾಗಿ ಖರೀದಿಸಿದ ಸರ್ಕಾರದಿಂದ ಹಣ ನೀಡದೆ ನಿರ್ಲಕ್ಷ್ಯ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಈಗಾಗಲೇ ಅನೇಕ ರೈತರು ಆಹಾರ ಇಲಾಖೆ ಕಚೇರಿಗೆ ಅಲೆದಲೆದು‌ ಸುಸ್ತಾಗಿದ್ದಾರೆ. ಹೊಸದುರ್ಗ, ಹೊಳಲ್ಕೆರೆ ತಾಲೂಕು ಕಚೇರಿ, ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಗೂ ತೆರಳಿ ರಾಗಿ ಹಣ ನೀಡುವಂತೆ ಮನವಿ ಮಾಡಿದ್ದೇವೆ. ಆದರೂ ಕೊರೊನಾ ನೆಪ ಹೇಳಿ ಕಳುಹಿಸಿದ್ದಾರೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ಬೆಂಬಲ ಬೆಲೆ ಘೋಷಿಸಿ ರಾಗಿ ಖರೀದಿಸಿದ ಸರ್ಕಾರದಿಂದ ಹಣ ನೀಡದೆ ನಿರ್ಲಕ್ಷ್ಯ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ರಾಗಿ ಬೆಳೆ
TV9 Web
| Edited By: |

Updated on: Jun 25, 2021 | 2:57 PM

Share

ಚಿತ್ರದುರ್ಗ: ದೇಶದ ಬೆನ್ನೆಲುಬಾದ ರೈತರ ನೆರವಿಗೆ ನಾನಾ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಆದರೆ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಅನೇಕ ಯೋಜನೆಗಳು ವಿಫಲಗೊಳ್ಳುತ್ತಿದ್ದು, ರೈತರು ಈ ಯೋಜನೆಗಳ ಫಲಾನುಭವಿಸಗಳಾಗದೆ ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಕೋಟೆನಾಡು ಚಿತ್ರದುರ್ಗದ ರಾಗಿ ಕೇಂದ್ರದಲ್ಲಿ ರಾಗಿ ಖರೀದಿಸಿದ ಸರ್ಕಾರ ಈವರೆಗೆ ಹಣ ನೀಡಿಲ್ಲ. ಈ ವಿಚಾರ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಬೆಳೆದ ಬೆಳೆಗೆ ಬೆಲೆ ಸಿಗದೆ ಅನ್ನದಾತರು ಕಂಗಾಲಾಗಿದ್ದಾರೆ.

ಚಿತ್ರದುರ್ಗದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ರಾಗಿ ಬೆಳೆ ಬೆಳೆಯಲಾಗುತ್ತದೆ. ಆದರೆ, ರಾಗಿ ಬೆಲೆ ಕ್ವಿಂಟಲ್​ಗೆ 2.500ಕ್ಕೆ ಇಳಿದ ಕಾರಣ ಸರ್ಕಾರ‌ ಬೆಂಬಲ ಬೆಲೆ ಘೋಷಿಸಿತ್ತು. ರಾಗಿ ಕೇಂದ್ರಗಳನ್ನು ತೆರೆದು ಕ್ವಿಂಟಲ್ ಗೆ 3.295 ರೂಪಾಯಿಯಂತೆ ಖರೀದಿ ಮಾಡಲಾಗಿತ್ತು. ಹೀಗಾಗಿ, ಸರ್ಕಾರ ಹೇಗೋ ನೆರವಿಗೆ ಬಂತಲ್ಲ ಎಂದು ರೈತರು ನಿಟ್ಟುಸಿರು‌ಬಿಟ್ಟಿದ್ದರು. ಆದರೆ ರಾಗಿ ಖರೀದಿಸಿ ಮೂರು ತಿಂಗಳು ಕಳೆದರೂ ಬಹುತೇಕ ರೈತರಿಗೆ ಈವರೆಗೆ ಹಣ ಕೈ ಸೇರಿಲ್ಲ ಎಂದು ರೈತ ವೆಂಕಟೇಶ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಅನೇಕ ರೈತರು ಆಹಾರ ಇಲಾಖೆ ಕಚೇರಿಗೆ ಅಲೆದಲೆದು‌ ಸುಸ್ತಾಗಿದ್ದಾರೆ. ಹೊಸದುರ್ಗ, ಹೊಳಲ್ಕೆರೆ ತಾಲೂಕು ಕಚೇರಿ, ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಗೂ ತೆರಳಿ ರಾಗಿ ಹಣ ನೀಡುವಂತೆ ಮನವಿ ಮಾಡಿದ್ದೇವೆ. ಆದರೂ ಕೊರೊನಾ ನೆಪ ಹೇಳಿ ಕಳುಹಿಸಿದ್ದಾರೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ಈ ಬಗ್ಗೆ ಡಿಸಿ ಕವಿತಾ ಮನ್ನಿಕೇರಿ ಅವರನ್ನು ಕೇಳಿದರೆ ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ಮಾಹಿತಿ ಪಡೆದು ಸಂಜೆ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ. ಸದ್ಯ ರೈತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಜಿಲ್ಲಾಡಳಿತಕ್ಕೆ ರೈತ ಮುಖಂಡರು ಎಚ್ಚರಿಕೆ ನೀಡಿದ್ದು, ಕೂಡಲೇ ರಾಗಿ ಖರೀದಿಸಿ ಹಣ ನೀಡದಿದ್ದರೆ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ರಾಗಿ ಖರೀದಿಸಿದ ಆಹಾರ ಇಲಾಖೆ ಈವರೆಗೆ ಬಹುತೇಕ ರೈತರಿಗೆ ಹಣ ನೀಡಿಲ್ಲ. ಹೀಗಾಗಿ, ನೂರಾರು‌ ಜನ ರೈತರು ಕಂಗಾಲಾಗಿದ್ದು‌, ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಹೀಗಾಗಿ, ಇನ್ನಾದರೂ ಸರ್ಕಾರ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಇದನ್ನೂ ಓದಿ:

ಕಳಪೆ ಈರುಳ್ಳಿ ಬೀಜ ನೀಡಿದ ಕಲಾಶ್ ಕಂಪನಿ; ಪರಿಹಾರಕ್ಕೆ ಚಿತ್ರದುರ್ಗ ರೈತರ ಆಗ್ರಹ

ಬಳ್ಳಾರಿಯಲ್ಲಿ ಮೆಣಸಿನಕಾಯಿ ಬೀಜಕ್ಕಾಗಿ ಮುಂದುವರಿದ ರೈತರ ಪರದಾಟ; ತೋಟಗಾರಿಕೆ ಇಲಾಖೆ ಕಚೇರಿಗೆ ನುಗ್ಗಿ ಆಕ್ರೋಶ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್