AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಬಲ ಬೆಲೆ ಘೋಷಿಸಿ ರಾಗಿ ಖರೀದಿಸಿದ ಸರ್ಕಾರದಿಂದ ಹಣ ನೀಡದೆ ನಿರ್ಲಕ್ಷ್ಯ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಈಗಾಗಲೇ ಅನೇಕ ರೈತರು ಆಹಾರ ಇಲಾಖೆ ಕಚೇರಿಗೆ ಅಲೆದಲೆದು‌ ಸುಸ್ತಾಗಿದ್ದಾರೆ. ಹೊಸದುರ್ಗ, ಹೊಳಲ್ಕೆರೆ ತಾಲೂಕು ಕಚೇರಿ, ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಗೂ ತೆರಳಿ ರಾಗಿ ಹಣ ನೀಡುವಂತೆ ಮನವಿ ಮಾಡಿದ್ದೇವೆ. ಆದರೂ ಕೊರೊನಾ ನೆಪ ಹೇಳಿ ಕಳುಹಿಸಿದ್ದಾರೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ಬೆಂಬಲ ಬೆಲೆ ಘೋಷಿಸಿ ರಾಗಿ ಖರೀದಿಸಿದ ಸರ್ಕಾರದಿಂದ ಹಣ ನೀಡದೆ ನಿರ್ಲಕ್ಷ್ಯ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ರಾಗಿ ಬೆಳೆ
TV9 Web
| Edited By: |

Updated on: Jun 25, 2021 | 2:57 PM

Share

ಚಿತ್ರದುರ್ಗ: ದೇಶದ ಬೆನ್ನೆಲುಬಾದ ರೈತರ ನೆರವಿಗೆ ನಾನಾ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಆದರೆ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಅನೇಕ ಯೋಜನೆಗಳು ವಿಫಲಗೊಳ್ಳುತ್ತಿದ್ದು, ರೈತರು ಈ ಯೋಜನೆಗಳ ಫಲಾನುಭವಿಸಗಳಾಗದೆ ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಕೋಟೆನಾಡು ಚಿತ್ರದುರ್ಗದ ರಾಗಿ ಕೇಂದ್ರದಲ್ಲಿ ರಾಗಿ ಖರೀದಿಸಿದ ಸರ್ಕಾರ ಈವರೆಗೆ ಹಣ ನೀಡಿಲ್ಲ. ಈ ವಿಚಾರ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಬೆಳೆದ ಬೆಳೆಗೆ ಬೆಲೆ ಸಿಗದೆ ಅನ್ನದಾತರು ಕಂಗಾಲಾಗಿದ್ದಾರೆ.

ಚಿತ್ರದುರ್ಗದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ರಾಗಿ ಬೆಳೆ ಬೆಳೆಯಲಾಗುತ್ತದೆ. ಆದರೆ, ರಾಗಿ ಬೆಲೆ ಕ್ವಿಂಟಲ್​ಗೆ 2.500ಕ್ಕೆ ಇಳಿದ ಕಾರಣ ಸರ್ಕಾರ‌ ಬೆಂಬಲ ಬೆಲೆ ಘೋಷಿಸಿತ್ತು. ರಾಗಿ ಕೇಂದ್ರಗಳನ್ನು ತೆರೆದು ಕ್ವಿಂಟಲ್ ಗೆ 3.295 ರೂಪಾಯಿಯಂತೆ ಖರೀದಿ ಮಾಡಲಾಗಿತ್ತು. ಹೀಗಾಗಿ, ಸರ್ಕಾರ ಹೇಗೋ ನೆರವಿಗೆ ಬಂತಲ್ಲ ಎಂದು ರೈತರು ನಿಟ್ಟುಸಿರು‌ಬಿಟ್ಟಿದ್ದರು. ಆದರೆ ರಾಗಿ ಖರೀದಿಸಿ ಮೂರು ತಿಂಗಳು ಕಳೆದರೂ ಬಹುತೇಕ ರೈತರಿಗೆ ಈವರೆಗೆ ಹಣ ಕೈ ಸೇರಿಲ್ಲ ಎಂದು ರೈತ ವೆಂಕಟೇಶ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಅನೇಕ ರೈತರು ಆಹಾರ ಇಲಾಖೆ ಕಚೇರಿಗೆ ಅಲೆದಲೆದು‌ ಸುಸ್ತಾಗಿದ್ದಾರೆ. ಹೊಸದುರ್ಗ, ಹೊಳಲ್ಕೆರೆ ತಾಲೂಕು ಕಚೇರಿ, ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಗೂ ತೆರಳಿ ರಾಗಿ ಹಣ ನೀಡುವಂತೆ ಮನವಿ ಮಾಡಿದ್ದೇವೆ. ಆದರೂ ಕೊರೊನಾ ನೆಪ ಹೇಳಿ ಕಳುಹಿಸಿದ್ದಾರೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ಈ ಬಗ್ಗೆ ಡಿಸಿ ಕವಿತಾ ಮನ್ನಿಕೇರಿ ಅವರನ್ನು ಕೇಳಿದರೆ ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ಮಾಹಿತಿ ಪಡೆದು ಸಂಜೆ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ. ಸದ್ಯ ರೈತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಜಿಲ್ಲಾಡಳಿತಕ್ಕೆ ರೈತ ಮುಖಂಡರು ಎಚ್ಚರಿಕೆ ನೀಡಿದ್ದು, ಕೂಡಲೇ ರಾಗಿ ಖರೀದಿಸಿ ಹಣ ನೀಡದಿದ್ದರೆ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ರಾಗಿ ಖರೀದಿಸಿದ ಆಹಾರ ಇಲಾಖೆ ಈವರೆಗೆ ಬಹುತೇಕ ರೈತರಿಗೆ ಹಣ ನೀಡಿಲ್ಲ. ಹೀಗಾಗಿ, ನೂರಾರು‌ ಜನ ರೈತರು ಕಂಗಾಲಾಗಿದ್ದು‌, ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಹೀಗಾಗಿ, ಇನ್ನಾದರೂ ಸರ್ಕಾರ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಇದನ್ನೂ ಓದಿ:

ಕಳಪೆ ಈರುಳ್ಳಿ ಬೀಜ ನೀಡಿದ ಕಲಾಶ್ ಕಂಪನಿ; ಪರಿಹಾರಕ್ಕೆ ಚಿತ್ರದುರ್ಗ ರೈತರ ಆಗ್ರಹ

ಬಳ್ಳಾರಿಯಲ್ಲಿ ಮೆಣಸಿನಕಾಯಿ ಬೀಜಕ್ಕಾಗಿ ಮುಂದುವರಿದ ರೈತರ ಪರದಾಟ; ತೋಟಗಾರಿಕೆ ಇಲಾಖೆ ಕಚೇರಿಗೆ ನುಗ್ಗಿ ಆಕ್ರೋಶ

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು