AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಬಲ ಬೆಲೆ ಘೋಷಿಸಿ ರಾಗಿ ಖರೀದಿಸಿದ ಸರ್ಕಾರದಿಂದ ಹಣ ನೀಡದೆ ನಿರ್ಲಕ್ಷ್ಯ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಈಗಾಗಲೇ ಅನೇಕ ರೈತರು ಆಹಾರ ಇಲಾಖೆ ಕಚೇರಿಗೆ ಅಲೆದಲೆದು‌ ಸುಸ್ತಾಗಿದ್ದಾರೆ. ಹೊಸದುರ್ಗ, ಹೊಳಲ್ಕೆರೆ ತಾಲೂಕು ಕಚೇರಿ, ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಗೂ ತೆರಳಿ ರಾಗಿ ಹಣ ನೀಡುವಂತೆ ಮನವಿ ಮಾಡಿದ್ದೇವೆ. ಆದರೂ ಕೊರೊನಾ ನೆಪ ಹೇಳಿ ಕಳುಹಿಸಿದ್ದಾರೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ಬೆಂಬಲ ಬೆಲೆ ಘೋಷಿಸಿ ರಾಗಿ ಖರೀದಿಸಿದ ಸರ್ಕಾರದಿಂದ ಹಣ ನೀಡದೆ ನಿರ್ಲಕ್ಷ್ಯ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ರಾಗಿ ಬೆಳೆ
TV9 Web
| Edited By: |

Updated on: Jun 25, 2021 | 2:57 PM

Share

ಚಿತ್ರದುರ್ಗ: ದೇಶದ ಬೆನ್ನೆಲುಬಾದ ರೈತರ ನೆರವಿಗೆ ನಾನಾ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಆದರೆ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಅನೇಕ ಯೋಜನೆಗಳು ವಿಫಲಗೊಳ್ಳುತ್ತಿದ್ದು, ರೈತರು ಈ ಯೋಜನೆಗಳ ಫಲಾನುಭವಿಸಗಳಾಗದೆ ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಕೋಟೆನಾಡು ಚಿತ್ರದುರ್ಗದ ರಾಗಿ ಕೇಂದ್ರದಲ್ಲಿ ರಾಗಿ ಖರೀದಿಸಿದ ಸರ್ಕಾರ ಈವರೆಗೆ ಹಣ ನೀಡಿಲ್ಲ. ಈ ವಿಚಾರ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಬೆಳೆದ ಬೆಳೆಗೆ ಬೆಲೆ ಸಿಗದೆ ಅನ್ನದಾತರು ಕಂಗಾಲಾಗಿದ್ದಾರೆ.

ಚಿತ್ರದುರ್ಗದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ರಾಗಿ ಬೆಳೆ ಬೆಳೆಯಲಾಗುತ್ತದೆ. ಆದರೆ, ರಾಗಿ ಬೆಲೆ ಕ್ವಿಂಟಲ್​ಗೆ 2.500ಕ್ಕೆ ಇಳಿದ ಕಾರಣ ಸರ್ಕಾರ‌ ಬೆಂಬಲ ಬೆಲೆ ಘೋಷಿಸಿತ್ತು. ರಾಗಿ ಕೇಂದ್ರಗಳನ್ನು ತೆರೆದು ಕ್ವಿಂಟಲ್ ಗೆ 3.295 ರೂಪಾಯಿಯಂತೆ ಖರೀದಿ ಮಾಡಲಾಗಿತ್ತು. ಹೀಗಾಗಿ, ಸರ್ಕಾರ ಹೇಗೋ ನೆರವಿಗೆ ಬಂತಲ್ಲ ಎಂದು ರೈತರು ನಿಟ್ಟುಸಿರು‌ಬಿಟ್ಟಿದ್ದರು. ಆದರೆ ರಾಗಿ ಖರೀದಿಸಿ ಮೂರು ತಿಂಗಳು ಕಳೆದರೂ ಬಹುತೇಕ ರೈತರಿಗೆ ಈವರೆಗೆ ಹಣ ಕೈ ಸೇರಿಲ್ಲ ಎಂದು ರೈತ ವೆಂಕಟೇಶ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಅನೇಕ ರೈತರು ಆಹಾರ ಇಲಾಖೆ ಕಚೇರಿಗೆ ಅಲೆದಲೆದು‌ ಸುಸ್ತಾಗಿದ್ದಾರೆ. ಹೊಸದುರ್ಗ, ಹೊಳಲ್ಕೆರೆ ತಾಲೂಕು ಕಚೇರಿ, ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಗೂ ತೆರಳಿ ರಾಗಿ ಹಣ ನೀಡುವಂತೆ ಮನವಿ ಮಾಡಿದ್ದೇವೆ. ಆದರೂ ಕೊರೊನಾ ನೆಪ ಹೇಳಿ ಕಳುಹಿಸಿದ್ದಾರೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ಈ ಬಗ್ಗೆ ಡಿಸಿ ಕವಿತಾ ಮನ್ನಿಕೇರಿ ಅವರನ್ನು ಕೇಳಿದರೆ ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ಮಾಹಿತಿ ಪಡೆದು ಸಂಜೆ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ. ಸದ್ಯ ರೈತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಜಿಲ್ಲಾಡಳಿತಕ್ಕೆ ರೈತ ಮುಖಂಡರು ಎಚ್ಚರಿಕೆ ನೀಡಿದ್ದು, ಕೂಡಲೇ ರಾಗಿ ಖರೀದಿಸಿ ಹಣ ನೀಡದಿದ್ದರೆ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ರಾಗಿ ಖರೀದಿಸಿದ ಆಹಾರ ಇಲಾಖೆ ಈವರೆಗೆ ಬಹುತೇಕ ರೈತರಿಗೆ ಹಣ ನೀಡಿಲ್ಲ. ಹೀಗಾಗಿ, ನೂರಾರು‌ ಜನ ರೈತರು ಕಂಗಾಲಾಗಿದ್ದು‌, ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಹೀಗಾಗಿ, ಇನ್ನಾದರೂ ಸರ್ಕಾರ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಇದನ್ನೂ ಓದಿ:

ಕಳಪೆ ಈರುಳ್ಳಿ ಬೀಜ ನೀಡಿದ ಕಲಾಶ್ ಕಂಪನಿ; ಪರಿಹಾರಕ್ಕೆ ಚಿತ್ರದುರ್ಗ ರೈತರ ಆಗ್ರಹ

ಬಳ್ಳಾರಿಯಲ್ಲಿ ಮೆಣಸಿನಕಾಯಿ ಬೀಜಕ್ಕಾಗಿ ಮುಂದುವರಿದ ರೈತರ ಪರದಾಟ; ತೋಟಗಾರಿಕೆ ಇಲಾಖೆ ಕಚೇರಿಗೆ ನುಗ್ಗಿ ಆಕ್ರೋಶ

Follow Us
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು