AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಅಕ್ರಮ ಮರಳು ಸಾಗಾಣಿಕೆ ಆರೋಪ; ಅಂತರ್ಜಲ ಮಟ್ಟದ ಕುಸಿತಕ್ಕೆ ಕಾರಣವಾಗುತ್ತಿರುವವರ ವಿರುದ್ಧ ರೈತರ ಆಕ್ರೋಶ

ಕೇವಲ ಮೂರು ಅಡಿ ಆಳ ಮಾತ್ರ ಮರಳು ತೆಗೆಯಬೇಕೆಂಬ ನಿಯಮವಿದೆ. ಆದರೆ, ಇಲ್ಲಿ ಇಪ್ಪತ್ತು ರಿಂದ ಮೂವತ್ತು ಅಡಿ ಆಳಕ್ಕೆ ಗುಂಡಿ ತೋಡಿ ಮರಳು ದೋಚಲಾಗುತ್ತಿದೆ ಎಂದು ರೈತ ಮುಖಂಡ ಹೊರಕೇರಪ್ಪ ಆರೋಪಿಸಿದ್ದಾರೆ.

ಚಿತ್ರದುರ್ಗ: ಅಕ್ರಮ ಮರಳು ಸಾಗಾಣಿಕೆ ಆರೋಪ; ಅಂತರ್ಜಲ ಮಟ್ಟದ ಕುಸಿತಕ್ಕೆ ಕಾರಣವಾಗುತ್ತಿರುವವರ ವಿರುದ್ಧ ರೈತರ ಆಕ್ರೋಶ
ಹೂವಿನ ಹೊಳೆ
TV9 Web
| Edited By: |

Updated on: Jun 30, 2021 | 5:08 PM

Share

ಚಿತ್ರದುರ್ಗ: ಇತ್ತೀಚೆಗೆ ನದಿ ಮೂಲಗಳಿಂದ ಮರಳುಗಳನ್ನು ಅಕ್ರಮವಾಗಿ ಸಾಗಿಸುವ ಅದೇಷ್ಟೋ ಪ್ರಕರಣಗಳು ಬೆಳಕಿಗೆ ಬಂದಿವೆ ಮತ್ತು ಅಂತವರಿಗೆ ಶಿಕ್ಷೆ ಕೂಡ ಆಗುತ್ತಿದೆ. ಆದರೆ ಈ ರೀತಿಯ ಅಕ್ರಮಗಳು ನಡೆಯುವ ಸಂಖ್ಯೆಯಲ್ಲಿ ಮಾತ್ರ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಇದಕ್ಕೆ ಚಿತ್ರದುರ್ಗದಲ್ಲಿ ನಡೆದಿರುವ ಘಟನೆಯೇ ಸಾಕ್ಷಿ. ಜಿಲ್ಲೆಯ ವೇದಾವತಿ ನದಿ ತೀರದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಮರಳು ಗಣಿಗಾರಿಕೆ ನಡೆಸಲಾಗುತ್ತಿದೆ ಎನ್ನುವ ಆರೋಪ ಸದ್ಯ ಕೇಳಿ ಬಂದಿದ್ದು, ಅಂತರ್ಜಲ ಮಟ್ಟದ ಕುಸಿತಕ್ಕೆ ಕಾರಣವಾಗುತ್ತಿರುವವರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹೂವಿನ ಹೊಳೆ ಗ್ರಾಮದ ಬಳಿ ಜಯಪಾಲಯ್ಯ ಎಂಬ ಗುತ್ತಿಗೆದಾರರು ಮರಳುಗಾರಿಕೆಗೆ ಗುತ್ತಿಗೆ ಪಡೆದಿದ್ದಾರಾದರೂ ನಿಯಮಗಳನ್ನು ಮಾತ್ರ ಪಾಲಿಸುತ್ತಿಲ್ಲ. ಐದು ವರ್ಷಕ್ಕೆ ತೆಗೆಯಬೇಕಿದ್ದ ಲಕ್ಷಾಂತರ ಟನ್ ಮರಳು ಎರಡೇ ತಿಂಗಳಿಗೆ ಲೂಟಿ‌ ಮಾಡಲಾಗುತ್ತಿದೆ. ಕೇವಲ ಮೂರು ಅಡಿ ಆಳ ಮಾತ್ರ ಮರಳು ತೆಗೆಯಬೇಕೆಂಬ ನಿಯಮವಿದೆ. ಆದರೆ, ಇಲ್ಲಿ ಇಪ್ಪತ್ತು ರಿಂದ ಮೂವತ್ತು ಅಡಿ ಆಳಕ್ಕೆ ಗುಂಡಿ ತೋಡಿ ಮರಳು ದೋಚಲಾಗುತ್ತಿದೆ ಎಂದು ರೈತ ಮುಖಂಡ ಹೊರಕೇರಪ್ಪ ಆರೋಪಿಸಿದ್ದಾರೆ.

ಮಣ್ಣನ್ನು ಗುಂಡಿಗೆ ತುಂಬುವ ಕೆಲಸ ನಡೆದಿದೆ. ಲಾರಿಗೆಗಳಿಗೆ ಜಿಪಿಎಸ್ ಅಳವಡಿಸದೆ ಹಗಲು ರಾತ್ರಿ ಮರಳು ಸಾಗಣೆ ನಡೆಯುತ್ತಿದೆ. ಒಂದು ಲಾರಿಗೆ ಪರ್ಮಿಟ್ ಪಡೆದು 5-10 ಓವರ್ ಲೋಡ್ ಮರಳು ಸಾಗಿಸಲಾಗುತ್ತಿದೆ. ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ರಾಯಲ್ಟಿ ಕಟ್ಟದೆ ವಂಚನೆ ನಡೆಯುತ್ತಿದೆ. ಅಲ್ಲದೆ ವೇದಾವತಿ‌ ನದಿ ಬರಿದಾಗುತ್ತಿದೆ. ಆದರೆ ಅಕ್ರಮ ತಡೆಯಬೇಕಿದ್ದ ಗಣಿ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಇತರೆ‌ ಅಧಿಕಾರಿಗಳು ಮಾತ್ರ ಯಾವುದಕ್ಕೂ ಸಂಬಂಧ ಇಲ್ಲದಂತೆ ಕುಳಿತಿದ್ದಾರೆ. ಅಷ್ಟೇ ಅಲ್ಲ ಅಕ್ರಮ ಮರಳು ಗಣಿಗಾರಿಕೆ ತಡೆಗೆ ಅನೇಕ ಸಲ ಮನವಿ ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತ ಮುಖಂಡ ಹೊರಕೇರಪ್ಪ ತಿಳಿಸಿದ್ದಾರೆ.

ಅಕ್ರಮ ಮರಳು ದಂಧೆಯಿಂದಾಗಿ ವೇದಾವತಿ ನದಿ ತೀರ ಬರಿದಾಗುತ್ತ ಸಾಗಿದೆ. ಈ ಭಾಗದಲ್ಲಿ ಅಂತರ್ಜಲ ಬರಿದಾಗಿದ್ದು ರೈತರ ಜಮೀನುಗಳಲ್ಲಿನ ಕೊಳವೆಬಾವಿಗಳು ಬತ್ತಿ ಹೋಗುತ್ತಿವೆ. ಹೀಗಾಗಿ, ನಿಯಮ ಮೀರಿ ಮನಸೋ ಇಚ್ಛೆ ಮರಳು ಲೂಟಿ ನಡೆಸುತ್ತಿರುವುದಕ್ಕೆ ಕಡಿವಾಣ ಹಾಕಬೇಕು ಎಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ. ಈ ಬಗ್ಗೆ ಎಸ್ಪಿ ಜಿ.ರಾಧಿಕಾ ಅವರನ್ನು ಕೇಳಿದರೆ ಲಾಕ್​ಡೌನ್ ಸಂದರ್ಭದಲ್ಲಿ ಎರಡು ತಿಂಗಳು ಮರಳು ಸಾಗಣೆಗೆ ಅವಕಾಶವಿತ್ತು. ಆ ಸಂದರ್ಭದಲ್ಲಿ ಓವರ್ ಲೋಡ್, ಪರವಾನಿಗೆ ಇಲ್ಲದೆ ಮರಳು ಸಾಗಣೆ ಆರೋಪ‌ ಕೇಳಿ ಬಂದಿದೆ. ಕೆಲವು ಕಡೆ ಅಕ್ರಮ ಮರಳು ಸಾಗಣೆ ಬಗ್ಗೆ ನಾವು ಕೇಸು ದಾಖಲಿಸಿದ್ದೇವೆ. ಹೂವಿನ ಹೊಳೆ ಬಳಿ ಅಕ್ರಮ ಮರಳುಗಾರಿಕೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡಿನ ಹಿರಿಯೂರು ಮತ್ತು ಚಳ್ಳಕೆರೆ ತಾಲೂಕಿನ ವೇದಾವತಿ ನದಿ ತೀರದಲ್ಲಿ ನಿಯಮ ಮೀರಿ ಮರಳು ಲೂಟಿ ನಡೆಯುತ್ತಿದೆ. ಅಧಿಕಾರಿಗಳು ಕಂಡೂ ಕಾಣದವರಂತೆ ಜಾಣ ಕುರುಡುತನ ಪ್ರದರ್ಶಿಸುವ ಮೂಲಕ ಭೂ ಒಡಲು ಬರಿದಾಗಲು ಕಾರಣ ಆಗುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ, ಇನ್ನಾದರು ಸರ್ಕಾರ ಮತ್ತು ಉನ್ನತ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂಬುದು ರೈತರ ಆಗ್ರಹ.

ಇದನ್ನೂ ಓದಿ:

ಕೊಪ್ಪಳ: ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ; 4 ಟಿಪ್ಪರ್​ಗಳು ವಶಕ್ಕೆ

Sand Mafia: ತುಂಗಭದ್ರಾ ನದಿ ತೀರದಲ್ಲಿ ಅಕ್ರಮ ಮರಳು ಸಾಗಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು