AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನುವಾರು ಸಂತೆಗಳಿಗೆ ಗೋಹತ್ಯೆ ನಿಷೇಧದ ಬಿಸಿ; ಜಾನುವಾರುಗಳ ಮಾರಾಟ ಕುಂಠಿತ, ರೈತರಿಗೆ ಸಂಕಷ್ಟ

ಗುಂಡ್ಲುಪೇಟೆ ತಾಲೂಕಿನ ತೆರಣಕಾಂಬಿ ದನಗಳ ಸಂತೆಯಲ್ಲಿ ಈ ಬಾರಿ ರೈತರು ತುಂಬ ಕಷ್ಟಪಟ್ಟಿದ್ದಾರೆ. ರಾಶಿರಾಶಿ ಜಾನುವಾರುಗಳು ಇದ್ದರೂ ಹೊರರಾಜ್ಯದ ದಲ್ಲಾಳಿಗಳು ಖರೀದಿಗೆ ಬರುತ್ತಿಲ್ಲ. ಸ್ಥಳೀಯ ದಲ್ಲಾಳಿಗಳು ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗುತ್ತಿದ್ದಾರೆ.

ಜಾನುವಾರು ಸಂತೆಗಳಿಗೆ ಗೋಹತ್ಯೆ ನಿಷೇಧದ ಬಿಸಿ; ಜಾನುವಾರುಗಳ ಮಾರಾಟ ಕುಂಠಿತ, ರೈತರಿಗೆ ಸಂಕಷ್ಟ
ಸಂತೆಯಲ್ಲಿ ಹಸುಗಳ ಮಾರಾಟವಾಗದೆ ಕಷ್ಟಪಡುತ್ತಿರುವ ರೈತರು
Lakshmi Hegde
| Edited By: |

Updated on: Dec 28, 2020 | 6:10 PM

Share

ಚಾಮರಾಜನಗರ: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದರೂ, ವಿಧಾನ ಪರಿಷತ್​ನಲ್ಲಿ ಅಂಗೀಕಾರವಾಗದ ಕಾರಣ ಕಾಯ್ದೆಯಾಗಿ ರೂಪುಗೊಳ್ಳುವಲ್ಲಿ ಹಿನ್ನಡೆಯಾಗಿದೆ. ಆದರೆ ಈ ಗೋಹತ್ಯೆ ನಿಷೇಧದ ಬಿಸಿ ಮಾತ್ರ ಅದಾಗಲೇ ತಟ್ಟಲು ಶುರುವಾಗಿದ್ದು, ಚಾಮರಾಜನಗರದಲ್ಲಿ ರೈತರ ಆಕ್ರೋಶಕ್ಕೂ ಕಾರಣವಾಗಿದೆ.

ಚಾಮರಾಜನಗರ ರಾಜ್ಯದ ದಕ್ಷಿಣ ಗಡಿಯ ಜಿಲ್ಲೆ. ಇದು ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ಹೊಂದಿಕೊಂಡಿದೆ. ಈ ಜಿಲ್ಲೆಯಿಂದ ಜಾನುವಾರುಗಳನ್ನು ಕದ್ದುಮುಚ್ಚಿ ಕೇರಳ, ತಮಿಳುನಾಡಿಗೆ ಸಾಗಿಸಲಾಗುತ್ತಿತ್ತು. ಹಾಗೇ ರೈತರೂ ಕೂಡ ತಮ್ಮ ಅನುಪಯುಕ್ತ ಹಸುಗಳನ್ನು ಆ ರಾಜ್ಯಗಳಿಗೆ ಮಾರಾಟ ಮಾಡಿ, ಹಣ ಗಳಿಸುತ್ತಿದ್ದರು.

ಆದರೆ ಇದೀಗ ರಾಜ್ಯದಲ್ಲಿ ಗೋಹತ್ಯೆ ನಿಷೇಧದ ಬಗ್ಗೆ ಜೋರಾಗಿ ಮಾತು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಕೇರಳ, ತಮಿಳುನಾಡಿನ ದಲ್ಲಾಳಿಗಳು ಚಾಮರಾಜನಗರಕ್ಕೆ ಬರುತ್ತಿಲ್ಲ. ಇದರಿಂದ ರೈತರು ಪ್ರಾಣಿಗಳ ಮಾರಾಟಕ್ಕೆ ತೀವ್ರ ಕಷ್ಟಪಡುತ್ತಿದ್ದಾರೆ.

ಸರ್ಕಾರವೇ ಖರೀದಿಸಲಿ ಜಾನುವಾರು ಮಾರಲಾಗದೆ ಪರದಾಡುತ್ತಿರುವ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಬೆಳೆಯ ಬದಲು, ಸರ್ಕಾರ ಹಸುಕರುಗಳನ್ನು ಖರೀದಿಸಲಿ ಎಂದು ಆಗ್ರಹಿಸುತ್ತಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ತೆರಣಕಾಂಬಿ ದನಗಳ ಸಂತೆಯಲ್ಲಿ ಈ ಬಾರಿ ರೈತರು ತುಂಬ ಕಷ್ಟಪಟ್ಟಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳು ಇದ್ದರೂ ಹೊರರಾಜ್ಯದ ದಲ್ಲಾಳಿಗಳು ಖರೀದಿಗೆ ಬರುತ್ತಿಲ್ಲ. ಸ್ಥಳೀಯ ದಲ್ಲಾಳಿಗಳು ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗುತ್ತಿದ್ದಾರೆ. ಅಗ್ಗದ ಬೆಲೆಗೆ ಕೇಳುತ್ತಿದ್ದಾರೆ. ಸಾಮಾನ್ಯವಾಗಿ ಜನರು ತಮಗೆ ಬೇಡದ ಹಸುಗಳನ್ನು ಸಂತೆಯಲ್ಲಿ ಮಾರಾಟ ಮಾಡುತ್ತಾರೆ. ಇನ್ನೂ ಕೆಲವರು ಹಣಕಾಸಿನ ಮುಗ್ಗಟ್ಟು ಎದುರಾದಾಗ ಜಾನುವಾರು ಮಾರಲು ಮುಂದಾಗುತ್ತಾರೆ. ಆದರೆ ಈ ಬಾರಿ ಜಾನುವಾರುಗಳ ಬಿಕರಿ ತುಂಬ ಕಷ್ಟ ಎಂದು ಅಲವತ್ತುಕೊಳ್ಳುತ್ತಿದ್ದಾರೆ. ತೆಗೆದುಕೊಂಡು ಬಂದ ಹಸುಗಳನ್ನು ಹಾಗೇ, ವಾಪಸ್ ಕೊಂಡೊಯ್ಯುತ್ತಿದ್ದಾರೆ.

ಸಂತೆಯಲ್ಲಿ ಕಂಡುಬಂದ ದೃಶ್ಯಗಳು

ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ