AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನುಸಿ ಹುಳುವಿನಿಂದ ಹಾಳಾದ ಹೂ ಬೆಳೆ: ಬೆಳೆಯನ್ನು ಕೆಡಿಸಿದ ಚಿತ್ರದುರ್ಗದ ರೈತರು

ಹೂವಿನೂರು ಎಂದೇ ಖ್ಯಾತಿ ಗಳಿಸಿದ ಹುಣಸೇಕಟ್ಟೆ ಭಾಗದಲ್ಲಿ ಬಹುತೇಕ ರೈತರು ಹೂ ಬೆಳೆಗೆ ಅವಲಂಬಿತರಾಗಿದ್ದಾರೆ. ನೂರಾರು ಎಕರೆ ಪ್ರದೇಶದಲ್ಲಿ ಸೇವಂತಿಗೆ, ಚಾಂದಿನಿ, ಪೂರ್ಣಿಮಾ ಸೇರಿ ಇತರೆ ಹೂಗಳನ್ನು ಬೆಳೆಯಲಾಗುತ್ತದೆ. ಆದರೆ ಇತ್ತೀಚೆಗೆ ಕಣ್ಣಿಗೆ ಕಾಣದ ಕ್ರಿಮಿ ನುಸಿ ಹುಳುವಿನಿಂದಾಗಿ ಹೂ ಬೆಳೆ ಸಂಪೂರ್ಣ ಹಾಳಾಗುತ್ತಿದೆ.

ನುಸಿ ಹುಳುವಿನಿಂದ ಹಾಳಾದ ಹೂ ಬೆಳೆ: ಬೆಳೆಯನ್ನು ಕೆಡಿಸಿದ ಚಿತ್ರದುರ್ಗದ ರೈತರು
ನುಸಿ ಹುಳುವಿನಿಂದ ಹಾಳಾದ ಹೂವುಗಳು
sandhya thejappa
|

Updated on: Mar 14, 2021 | 5:58 PM

Share

ಚಿತ್ರದುರ್ಗ: ಕೋಟೆನಾಡಿನ ಹುಣಸೇಕಟ್ಟೆ ಗ್ರಾಮ ಹೂವಿನೂರು ಎಂದೇ ಖ್ಯಾತಿ ಗಳಿಸಿದೆ. ಆದರೆ ನುಸಿ ಹುಳು ಎಂಬ ಕ್ರಿಮಿ ಹೂವಿನ ಜೊತೆಗೆ ಹೂ ಬೆಳೆಗಾರರ ಬದುಕನ್ನೇ ಬರಿದಾಗಿಸುತ್ತಿದೆ. ಇದರ ಪರಿಣಾಮ ಹೂ ಬೆಳೆಗಾರರು ಕೃಷಿಯಿಂದಲೇ ವಿಮುಖರಾಗುವ ದುಸ್ಥಿತಿ ನಿರ್ಮಾಣವಾಗಿದೆ.

ಹೂವಿನೂರು ಎಂದೇ ಖ್ಯಾತಿ ಗಳಿಸಿದ ಹುಣಸೇಕಟ್ಟೆ ಭಾಗದಲ್ಲಿ ಬಹುತೇಕ ರೈತರು ಹೂ ಬೆಳೆಗೆ ಅವಲಂಬಿತರಾಗಿದ್ದಾರೆ. ನೂರಾರು ಎಕರೆ ಪ್ರದೇಶದಲ್ಲಿ ಸೇವಂತಿಗೆ, ಚಾಂದಿನಿ, ಪೂರ್ಣಿಮಾ ಸೇರಿ ಇತರೆ ಹೂಗಳನ್ನು ಬೆಳೆಯಲಾಗುತ್ತದೆ. ಆದರೆ ಇತ್ತೀಚೆಗೆ ಕಣ್ಣಿಗೆ ಕಾಣದ ಕ್ರಿಮಿ ನುಸಿ ಹುಳುವಿನಿಂದಾಗಿ ಹೂ ಬೆಳೆ ಸಂಪೂರ್ಣ ಹಾಳಾಗುತ್ತಿದೆ. ಹೀಗಾಗಿ ಸುಮಾರು ಒಂದೂವರೆ ಎಕರೆ ಪ್ರದೇಶದಲ್ಲಿ ಬೆವರು ಸುರಿಸಿ ಬೆಳೆದಿದ್ದ ಬೆಳೆಯನ್ನು ರೈತರೇ ಕೆಡಿಸಿದ್ದಾರೆ. ಹುಣಸೇಕಟ್ಟೆ ಗ್ರಾಮದ ಅನೇಕ ರೈತರು ಮೂರು ದಶಕಗಳಿಂದ ಹೂವಿನ ಬೆಳೆಯನ್ನೇ ಅವಲಂಬಿಸಿದ್ದಾರೆ. ಆದರೆ ನುಸಿ ಹುಳುವಿನಿಂದ ಹೂ ಬೆಳೆಯನ್ನು ನಂಬಿದ್ದ ರೈತರಿಗೆ ದಿಕ್ಕು ತೋಚದಂತಾಗಿದೆ. ಆದರೆ ಸಂಕಷ್ಟಕ್ಕೆ ಈಡಾಗಿರುವ ರೈತರಿಗೆ ಸರ್ಕಾರವಾಗಲಿ, ಅಧಿಕಾರಿಗಳಾಗಲಿ ಕ್ಯಾರೆ ಅಂದಿಲ್ಲ ಎಂದು ರೈತರು ಕಿಡಿ ಕಾರುತ್ತಿದ್ದಾರೆ.

ಹೂಬೆಳೆ ಉಳಿಸಿಕೊಳ್ಳಲು ಎಕರೆಗೆ 80 ರಿಂದ 90 ಸಾವಿರ ರೂಪಾಯಿ ಮೌಲ್ಯದ ಔಷಧಿ ಸಿಂಪಡಿಸಿದ್ದೇವೆ. ಹೂ ಬೆಳೆ ಸಿಕ್ಕಿದ್ದು ಮಾತ್ರ 10 ಸಾವಿರ ಮೌಲ್ಯದ್ದಾಗಿದೆ. ನಿಷೇಧಿತ ಕೆಲ‌ ಬಯೋ ಕಂಪನಿಯ ಔಷಧಿಗಳನ್ನೇ ಅಂಗಡಿಯವರು ನೀಡುತ್ತಾರೆ. ಅದರಿಂದೇನೂ ಪ್ರಯೋಜನ ಆಗುತ್ತಿಲ್ಲ. ಅಧಿಕಾರಿಗಳು, ವಿಜ್ಞಾನಿಗಳು ಯಾರೂ ಈ ಬಗ್ಗೆ ಸಲಹೆ ನೀಡಿಲ್ಲ. ಹೀಗಾಗಿ ಅನಿವಾರ್ಯದಿಂದ ಬೆಳೆದಿದ್ದ ಬೆಳೆ ಕೆಡಿಸುತ್ತಿದ್ದೇವೆ ಎಂದು ರೈತ ಕಾಂತರಾಜ್ ಹೇಳಿದರು.

ರೈತರಿಗೆ ಒಂದಲ್ಲ ಒಂದು ಸಮಸ್ಯೆ ಸದಾ ಕಾಡುತ್ತಿರುತ್ತದೆ. ಈಗ ಜಿಲ್ಲೆಯ ರೈತರು ಹೂ ಬೆಳೆಯಿಂದ ಕಂಗಾಲಾಗಿದ್ದು, ಸರ್ಕಾರ ಈ ಬಗ್ಗೆ ಗಮನಹರಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಹೂ ಬೆಳೆಗಾರರು ಆಗ್ರಹಿಸುತ್ತಿದ್ದಾರೆ.

ಸರ್ಕಾರ ಗಮನಹರಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಹೂ ಬೆಳೆಗಾರರು ಆಗ್ರಹಿಸುತ್ತಿದ್ದಾರೆ

ನುಸಿ ಹುಳುವಿನಿಂದ ಹೂವಿನ ಬೆಳೆ ಹಾಳಾಗಿದೆ

ಹೂವಿನ ಗಿಡಗಳನ್ನು ಕೀಳುತ್ತಿರುವ ರೈತರು

ಇದನ್ನೂ ಓದಿ

ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಬೇಡ, ಸರ್ಕಾರ ರೈತರ ಜೊತೆ ಸದಾ ಇರುತ್ತದೆ: ಕಂದಾಯ ಸಚಿವ ಆರ್.ಅಶೋಕ್

ರಾಯಚೂರು: ಮಂತ್ರಾಲಯದ ಗೋಶಾಲೆಗೆ ಮೇವು ದಾನ ನೀಡಿದ ರೈತರು

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ